ಶಿವಮೊಗ್ಗ, (ಮಾರ್ಚ್ 18): ರಸ್ತೆ ಅಪಘಾತದಲ್ಲಿ ಮೃತಪಟ್ಟ ವ್ಯಕ್ತಿಯ ಕುಟುಂಬಕ್ಕೆ ಪರಿಹಾರ ನೀಡಲು ನ್ಯಾಯಾಲ ಆದೇಶ ನೀಡಿದರೂ ಸಹ ಕೆಎಸ್ಆರ್ಟಿಸಿ ಕ್ಯಾರೇ ಎಂದಿಲ್ಲ. ಹೀಗಾಗಿ ಆಕ್ರೋಶಗೊಂಡ ಕೋರ್ಟ್, ಬಸ್ ಜಪ್ತಿ ಮಾಡುವಂತೆ ಆದೇಶ ಹೊರಡಿಸಿದೆ. ಅದರಂತೆ ಕೆಎಸ್ ಆರ್ ಟಿಸಿಯ ಶಿರಸಿ ಡಿಪೋದ ಕೆಎಸ್ಆರ್ಟಿಸಿ ಬಸನ್ನು ತಂದು ಕೋರ್ಟ್ ಆವರಣದಲ್ಲಿ ನಿಲ್ಲಿಸಲಾಗಿದೆ.
2022ರ ಜುಲೈ 7 ರಂದು ಪತ್ರಿಕೆ ಹಂಚಲು ಹೋಗಿದ್ದ ಗಣೇಶ್ ಎನ್ನುವಾತನಿಗೆ ಸಾಗರದ ಪ್ರವಾಸಿ ಮಂದಿರದ ಎದುರು ಶಿರಸಿ ಡಿಪೋದ ಕೆಎಸ್ಆರ್ಟಿಸಿ ಬಸ್ ಡಿಕ್ಕಿ ಹೊಡೆದಿತ್ತು. ಈ ಅಪಘಾತದಲ್ಲಿ ಗಣೇಶ್ ಮೃತಪಟ್ಟಿದ್ದ. ಇದರಿಂದ ಪರಿಹಾರ ಕೊಡಿಸುವಂತೆ ಮೃತರ ಕುಟುಂಬಸ್ಥರು ಗರದ 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿ ವಿಚಾರಣೆ ನಡೆಸಿದ್ದ ಕೋರ್ಟ್, ಗಣೇಶ್ ಅವರ ಪೋಷಕರಿಗೆ ಮೂರು ತಿಂಗಳೊಳಗೆ ಪರಿಹಾರ ನೀಡುವಂತೆ 2024 ರ ಜುಲೈ 8 ರಂದು ನ್ಯಾಯಾಲಯ ಆದೇಶಿಸಿತ್ತು. ಆದ್ರೆ, ಇದುವರೆಗೂ ಕೆಎಸ್ಆರ್ಟಿಸಿ ಯಾವುದೇ ಪರಿಹಾರ ನೀಡಿಲ್ಲ. ಹೀಗಾಗಿ ಮೃತ ಗಣೇಶನ ತಾಯಿ ಉಮಾ ಅವರು ಮತ್ತೆ ನ್ಯಾಯಾಲಯದ ಮೊರೆ ಹೋಗಿದ್ದರು.
Laxmi News 24×7