Breaking News

ಆಕಸ್ಮಿಕ ಬೆಂಕಿ ಬಿದ್ದ ಪರಿಣಾಮ ಅಂಗಡಿಯಲ್ಲಿದ್ದ ಸುಮಾರು ಒಂದು ಕೋಟಿ ಮೊತ್ತದ ವಸ್ತು ಹಾನಿ

Spread the love

ಗಂಗಾವತಿ: ವಿದ್ಯುತ್ ಶಾರ್ಟ್​ ಸರ್ಕ್ಯೂಟ್​ನಿಂದಾಗಿ ಇಲ್ಲಿನ ವಾಣಿಜ್ಯ ಮಳಿಗೆಯೊಂದಕ್ಕೆ ಬೆಂಕಿ ತಗುಲಿ ಅಂಗಡಿಯಲ್ಲಿದ್ದ ಸುಮಾರು ಒಂದೂವರೆ ಕೋಟಿ ರೂಪಾಯಿ ಮೊತ್ತದ ವಸ್ತುಗಳು ನಾಶವಾದ ಘಟನೆ ಇಲ್ಲಿನ ಕೊಪ್ಪಳ ರಸ್ತೆಯಲ್ಲಿ ಬುಧವಾರ ಬೆಳಗ್ಗೆ ನಡೆದಿದೆ.

ಕೊಪ್ಪಳ ರಸ್ತೆಯ ಸಿಬಿಎಸ್ ವೃತ್ತದ ಸಮೀಪದ ಹಳೇಯ ಪವನಬಾರ್ ಬಳಿ ಈ ಘಟನೆ ನಡೆದಿದ್ದು, ಘಟನೆಯಲ್ಲಿ ದಾದಾಪೀರ್ ಎಂಬುವರಿಗೆ ಸೇರಿದ ಈ ಅಂಗಡಿಯಲ್ಲಿ ಹೊಸ ಜನರೇಟರ್, ಕೃಷಿ ಮತ್ತು ರೈತರಿಗೆ ಉಪಯುಕ್ತವಾಗುವ ಯಂತ್ರೋಪಕರಣಗಳ ಮಾರಾಟ ಮಾಡಲಾಗುತಿತ್ತು.ಮಾರಾಟ ಮತ್ತು ರಿಪೇರಿ (ಸೇಲ್ಸ್ ಅಂಡ್ ಸರ್ವೀಸ್​) ಉದ್ದೇಶಿತ ಈ ಅಂಗಡಿಯಲ್ಲಿ ಹೊಸ ಜನರೇಟರ್​ಗಳನ್ನು ಮಾರಾಟಕ್ಕೆ ಇಡಲಾಗಿತ್ತು.

ಇಂದು ಬೆಳಗ್ಗೆ ಆರು ಗಂಟೆಯ ಬಳಿಕ ಈ ಘಟನೆ ನಡೆದಿದ್ದು, ಮಾಲಿಕರಿಗೆ ಅರ್ಧ ಗಂಟೆಯ ಬಳಿಕ ಗೊತ್ತಾಗಿದೆ.ವಿದ್ಯುತ್ ಶಾರ್ಟ್​ ಸರ್ಕ್ಯೂಟ್​ನಿಂದ ಉಂಟಾದ ಬೆಂಕಿಯಿಂದ ಹೊಗೆ ಮಳಿಗೆಯಿಂದ ಹೊರ ಬರುತ್ತಿರುವುದನ್ನು ಗಮನಿಸಿದ ಸ್ಥಳೀಯರು, ಕೂಡಲೇ ದಾದಾಪೀರ ಅವರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಧಾವಿಸುವ ಹೊತ್ತಿಗೆ ಅಂಗಡಿಯಲ್ಲಿದ್ದ ಬಹುತೇಕ ವಸ್ತುಗಳು ಬೆಂಕಿಗೆ ನಾಶವಾಗಿದ್ದವು.


Spread the love

About Laxminews 24x7

Check Also

ಎನ್.ಕೆ. ಎಜುಕೇಶನ್ ಸೊಸೈಟಿಯ ಎಸ್‌ಎಸ್‌ಎ ಪಿಯು ಕಾಲೇಜಿನ ಅದ್ಭುತ ಫಲಿತಾಂಶ

Spread the loveಎನ್.ಕೆ. ಎಜುಕೇಶನ್ ಸೊಸೈಟಿಯ ಎಸ್‌ಎಸ್‌ಎ ಪಿಯು ಕಾಲೇಜಿನ ಅದ್ಭುತ ಫಲಿತಾಂಶ ಬೆಳಗಾವಿ: ಎನ್.ಕೆ. ಎಜುಕೇಶನ್ ಸೊಸೈಟಿಯ ಅಧೀನದಲ್ಲಿರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ