Breaking News

ಜೈಲಿನಲ್ಲಿ  ಬಂಧನವಾಗಿರುವ ಮಾಜಿ ಸಚಿವ ವಿನಯ ಕುಲಕರ್ಣಿಯನ್ನು, ಪತ್ನಿ, ಪುತ್ರ, ಪುತ್ರಿಯರು ಭೇಟೆ

Spread the love

ಬೆಳಗಾವಿ : ಧಾರವಾಡ ಜಿಲ್ಲಾ ಪಂಚಾಯಿತಿ ಸದಸ್ಯ ಯೋಗೀಶ್ ಗೌಡ ಹತ್ಯೆ ಪ್ರಕರಣದಲ್ಲಿ ಬೆಳಗಾವಿ ಹಿಂಡಲಗಾ ಜೈಲಿನಲ್ಲಿ  ಬಂಧನವಾಗಿರುವ ಮಾಜಿ ಸಚಿವ ವಿನಯ ಕುಲಕರ್ಣಿಯನ್ನು, ಪತ್ನಿ, ಪುತ್ರ, ಪುತ್ರಿಯರು ಇಂದು ಭೇಟೆಯಾದರು.

ಧಾರವಾಡ 3 ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ವಿನಯ್ ಕುಲಕರ್ಣಿಯನ್ನು ಭೇಟಿ ಮಾಡಲು ಕುಟುಂಬಸ್ಥರಿಗೆ ಅವಕಾಶ ನೀಡುವಂತೆ ಮಧ್ಯಾಹ್ನ ಆದೇಶ ನೀಡಿತ್ತು. ಈ ಹಿನ್ನೆಲೆಯಲ್ಲಿ ಹಿಂಡಲಗಾ ಜೈಲಿಗೆ ಆಗಮಿಸಿದ ಕುಟುಂಬಸ್ಥರಿಗೆ ಸಂಜೆ  4 ರಿಂದ 5 ಗಂಟೆಯವರೆಗೆ ಭೇಟಿಗೆ ಅವಕಾಶ ನೀಡಿದೆ.

ವಿನಯ ಕುಲಕರ್ಣಿಯನ್ನು ಪತ್ನಿ ಶಿವಲೀಲಾ ಕುಲಕರ್ಣಿ, ಪುತ್ರಿಯರಾದ ವೈಶಾಲಿ, ದೀಪಾಲಿ, ಪುತ್ರ ಹೇಮಂತ ಭೇಟಿ ಮಾಡಿ ಯೋಗಕ್ಷೇಮ ವಿಚಾರಿಸಿದರು.


Spread the love

About Laxminews 24x7

Check Also

ಬೆಳಗಾವಿ ಪ್ರತಿ ವರ್ಷದಂತೆ ಈ ವರ್ಷವೂ 98ನೇ ನಾಡ ಹಬ್ಬ ಉತ್ಸವವನ್ನು ಸೆ.22ರಿಂದ ಸೆ.26ರವರೆಗೆ ನಗರದ ಕನ್ನಡ ಸಾಹಿತ್ಯ ‌ಭವನದಲ್ಲಿ ಆಯೋಜಿಸಲಾಗಿದೆ

Spread the loveಬೆಳಗಾವಿ ಪ್ರತಿ ವರ್ಷದಂತೆ ಈ ವರ್ಷವೂ 98ನೇ ನಾಡ ಹಬ್ಬ ಉತ್ಸವವನ್ನು ಸೆ.22ರಿಂದ ಸೆ.26ರವರೆಗೆ ನಗರದ ಕನ್ನಡ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ