Breaking News

ಕರ್ನಾಟಕ ಬಂದ್​: ಕೆಲವು ಜಿಲ್ಲೆಯಲ್ಲಿ ನೀರಸ ಪ್ರತಿಕ್ರಿಯೆ

Spread the love

ಬೆಂಗಳೂರು : ಕನ್ನಡಪರ ಸಂಘಟನೆಗಳು ರಾಜ್ಯಾದ್ಯಂತ ಇಂದು ಬಂದ್​ಗೆ ಕರೆ ಕೊಟ್ಟಿದ್ದು, ಕೆಲವು ಜಿಲ್ಲೆಗಳು ನೀರಸ ಪ್ರತಿಕ್ರಿಯೆ ತೋರಿದೆ.​​

ಗಣಿ ನಾಡು ಬಳ್ಳಾರಿಯಲ್ಲಿ ಎಂದಿನಂತೆ ಅಂಗಡಿ-ಮುಂಗಟ್ಟಿನಿಂದ ಹಿಡಿದು ಎಲ್ಲವೂ ತೆರೆದಿದೆ. ಬಸ್​, ಆಟೋ‌ ಸಂಚಾರವಿದ್ದು ಬಳ್ಳಾರಿ ಮಂದಿ ಬಂದ್​ಗೆ ಬೆಂಬಲ ನೀಡಿಲ್ಲ.

ಆದರೆ ಬೆಳಗ್ಗೆ ಹತ್ತು ಗಂಟೆಗೆ ರಾಯಲ್ ವೃತ್ತದಲ್ಲಿ ಪ್ರತಿಭಟನೆ ನಡೆಸಿ, ನೈತಿಕ ಬೆಂಬಲ ಕೊಡಲು ಕನ್ನಡಪರ ಸಂಘಟನೆಗಳು ತೀರ್ಮಾನಿಸಿವೆ. ಈ ಹಿನ್ನೆಲೆ ಬಳ್ಳಾರಿ ರಾಯಲ್ ವೃತ್ತದಲ್ಲಿ ಪೊಲೀಸರು ನಿಯೋಜನೆಗೊಂಡಿದ್ದಾರೆ. ಬಳ್ಳಾರಿ ರಾಯಲ್​ ಸರ್ಕಲ್​, ಮೋತಿ ಸರ್ಕಲ್ ,

ಸಂಗಮ್ ಸರ್ಕಲ್ ಸೇರಿದಂತೆ ಬಳ್ಳಾರಿ ಬಹುತೇಕ ರಸ್ತೆಗಳಲ್ಲಿ ಪ್ರತಿನಿತ್ಯದಂತೆ ವಾಹನ ಸಂಚಾರ ಸಾಗುತ್ತಿದೆ.ವಿಜಯಪುರದಲ್ಲೂ ನೀರಸ ಪ್ರತಿಕ್ರಿಯೆ : ವಿಜಯಪುರ ಜಿಲ್ಲೆಯಲ್ಲಿಯೀ ಬಂದ್​ಗೆ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ. ವಿವಿಧ ಕನ್ನಡಪರ ಸಂಘಟನೆಗಳು ಹಾಗೂ ಇತರ ಸಂಘ ಸಂಸ್ಥೆಗಳು ಸಾಂಕೇತಿಕವಾಗಿ ಬಂದ್​​ಗೆ ಬೆಂಬಲ ನೀಡಿವೆ. ಸದ್ಯ ಸಹಜ ಸ್ಥಿತಿಯಲ್ಲಿರುವ ವಿಜಯಪುರದಲ್ಲಿ ಸರ್ಕಾರಿ ಹಾಗೂ ಖಾಸಗಿ ಬಸ್‌ಗಳ ಸಂಚಾರವಿದೆ. ಹಾಗೇ ಹೋಟೆಲ್, ಬಾರ್ ಅಂಡ್​ ರೆಸ್ಟೋರೆಂಟ್ ಮಾಲ್​ಗಳು ಚಿತ್ರಮಂದಿರಗಳು ಬಂದ್​ಗೆ ಬೆಂಬಲ ನೀಡಿಲ್ಲ.​ ಆರಂಭ ಎಲ್ಲಿಯೂ ಬಂದ್ ಕಂಡು ಬರದೇ ಇದ್ದರೂ ಮುಂಜಾಗ್ರತಾ ಕ್ರಮವಾಗಿ ಅಲ್ಲಲ್ಲಿ ಪೊಲೀಸರು ನಿಯೋಜನೆಗೊಂಡಿದ್ದಾರೆ.


Spread the love

About Laxminews 24x7

Check Also

ನಾಲ್ಕು ರಾಜ್ಯಗಳ ಉಪಚುನಾವಣೆ: ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ

Spread the loveಭಾರತೀಯ ಜನತಾ ಪಾರ್ಟಿ (ಬಿಜೆಪಿ) ಗೋವಾ ಸೇರಿದಂತೆ ನಾಲ್ಕು ರಾಜ್ಯಗಳ ಐದು ವಿಧಾನಸಭಾ ಕ್ಷೇತ್ರಗಳಿಗೆ ನಡೆಯಲಿರುವ ಉಪಚುನಾವಣೆಗಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ