ಬೆಳಗಾವಿ: ಜಿಲ್ಲೆಯ ಶಾಸಕರು ಹಾಗೂ ಹಿರಿಯ ನಾಯಕರೊಂದಿಗೆ ಚರ್ಚಿಸಿ ಲೋಕಸಭಾ ಉಪಚುನಾವಣೆ ಸೂಕ್ತ ಅಭ್ಯರ್ಥಿಯನ್ನು ಅಂತಿಮಗೊಳಿಸಲಾಗುವುದು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಹೇಳಿದರು.
ಇಲ್ಲಿನ ಕಾಂಗ್ರೆಸ್ ಕಚೇರಿಯಲ್ಲಿ ಶುಕ್ರವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಟಿಕೆಟ್ ವಿಚಾರವಾಗಿ ಈಗಾಗಲೇ ನನ್ನ ಹೆಸರು ಕೇಳಿ ಬಂದಿದೆ. ಇದನ್ನು ಉದ್ದೇಶ ಪೂರ್ವಕವಾಗಿ ಮಾಡಿಸುತ್ತಿದ್ದಾರೆ ಮತ್ತು ಸಹಜವಾಗಿಯೂ ಆಗಿದೆ. ಬೆಂಗಳೂರಿನಲ್ಲಿ ಕುಳಿತು ಹೇಳಲು ಸಾಧ್ಯವಿಲ್ಲ. ಕಮಿಟಿ ಇದೆ. ಇನ್ನೊಂದು ಬಾರಿ ಸಭೆ ನಡೆಸಿ ಬೆಳಗಾವಿಯಲ್ಲಿ ಆಯ್ಕೆಯಾಗುವ ಅಭ್ಯರ್ಥಿಯೇ ಅಂತಿಮವಾಗುತ್ತದೆ ಎಂದು ಸ್ಪಷ್ಟಪಡಿಸಿದರು.
ಕಾಂಗ್ರೆಸ್ ಸದಸ್ಯರ ರಾಜೀನಾಮೆ ವಿಚಾರವಾಗಿ ಪ್ರತಿಕ್ರಿಯಿಸಿ, ಕೆಲವು ಕಾಂಗ್ರೆಸ್ ಸದಸ್ಯರು ಅಧ್ಯಕ್ಷರಿಗೆ ರಾಜೀನಾಮೆ ನೀಡಿರುವ ಮಾಹಿತಿ ಇದೆ. ಆದ್ರೆ ಅವರು ಬಿಜೆಪಿ ಪಕ್ಷಕ್ಕೆ ಸೇರಿಲ್ಲ. ಇದಕ್ಕೆ ಮಹತ್ವ ನೀಡುವ ಅಗತ್ಯವಿಲ್ಲ. ಜೂನ್ ತಿಂಗಳಲ್ಲಿ ಚುನಾವಣೆ ಬರಲಿದ್ದು, ನಾವು ಚುನಾವಣೆಗೆ ಹೆಚ್ಚಿನ ಆದ್ಯತೆ ನೀಡುತ್ತಿದ್ದೇವೆ ಎಂದು ಹೇಳಿದರು