Breaking News

ಲಂಚ ಪಡೆಯುತ್ತಿದ್ದ ಆರ್‌ಟಿಐ ಆಯುಕ್ತ ಲೋಕಾಯುಕ್ತ ಬಲೆಗೆ –

Spread the love

ಕಲಬುರಗಿ: ಆರ್‌ಟಿಐ ಕಾರ್ಯಕರ್ತನ ಹೆಸರನ್ನು ಬ್ಲ್ಯಾಕ್​ಲಿಸ್ಟ್​ನಿಂದ ತೆಗೆಯಲು ಎರಡು ಲಕ್ಷ ರೂ. ಲಂಚ ಪಡೆಯುತ್ತಿದ್ದ ಆರೋಪದ ಮೇಲೆ ಲೋಕಾಯುಕ್ತ ಪೊಲೀಸರು ಕರ್ನಾಟಕ ಮಾಹಿತಿ ಆಯೋಗದ ಆಯುಕ್ತರೊಬ್ಬರನ್ನು ವಶಕ್ಕೆ ಪಡೆದಿದ್ದಾರೆ.

lokayukta-detained-rti-commissioner-for-allegedly-taking-bribe-in-kalaburagi

ಕರ್ನಾಟಕದಲ್ಲಿ ಆರ್‌ಟಿಐ ಆಯುಕ್ತರೊಬ್ಬರು ಲಂಚ ಪಡೆಯುವಾಗ ಸಿಕ್ಕಿಬಿದ್ದಿರುವ ಮೊದಲ ಪ್ರಕರಣ ಇದಾಗಿದೆ. ಲೋಕಾಯುಕ್ತ ಅಧಿಕಾರಿಗಳ ಪ್ರಕಾರ, ಕಲಬುರಗಿ ಪೀಠದ ಆರ್‌ಟಿಐ ಆಯುಕ್ತ ರವೀಂದ್ರ ಗುರುನಾಥ್ ಡಕಪ್ಪ ಅವರು ಆರ್‌ಟಿಐ ಕಾರ್ಯಕರ್ತ ಸಾಯಿಬಣ್ಣ ಸಸಿ ಬೆನಕನಹಳ್ಳಿ ಅವರ ಹೆಸರನ್ನು ಕಪ್ಪುಪಟ್ಟಿಯಿಂದ ತೆಗೆಯಲು 3 ಲಕ್ಷ ರೂಪಾಯಿ ಹಣ್ಕಕ್ಕೆ ಬೇಡಿಕೆ ಇಟ್ಟಿದ್ದರು ಎಂದು ತಿಳಿದು ಬಂದಿದೆ.

ಮಾಹಿತಿ ಹಕ್ಕು ಕಾಯ್ದೆಯನ್ನು ದುರುಪಯೋಗಪಡಿಸಿಕೊಂಡು ಅನಗತ್ಯ ಮತ್ತು ಅಪ್ರಸ್ತುತ ಮಾಹಿತಿಯನ್ನು ಕೋರಿದ್ದ ಆರೋಪದ ಮೇಲೆ ಸಾಯಿಬಣ್ಣ ಅವರನ್ನು ಆರ್‌ಟಿಐ ಕಪ್ಪುಪಟ್ಟಿಗೆ ಸೇರಿಸಿತ್ತು.


Spread the love

About Laxminews 24x7

Check Also

ಮಿರಜ್‌ನಲ್ಲಿ 1 ಕೋಟಿ ರೂಪಾಯಿ ಮೌಲ್ಯದ ನಕಲಿ ನೋಟುಗಳ ಜಪ್ತಿ

Spread the love ಚಿಕ್ಕೋಡಿ:ಮಹಾರಾಷ್ಟ್ರ- ಕರ್ನಾಟಕ ಗಡಿ ಭಾಗದಲ್ಲಿ ಇತ್ತಿಚಿಗೆ ವಿಶೇಷ ಕಾರ್ಯಾಚರಣೆ ನಡೆಸಿದ ಮಹಾರಾಷ್ಟ್ರ ಪೊಲೀಸರು, ಬರೋಬ್ಬರಿ 1 …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ