Breaking News

ಉ.ಕ ಭಾಗಕ್ಕೂ ವಿಮಾನಯಾನ ಸೌಲಭ್ಯ ಹೆಚ್ಚಿಸಲು ಸಚಿವ ಸತೀಶ್‌ ಜಾರಕಿಹೊಳಿ ಮನವಿ

Spread the love

ಉ.ಕ ಭಾಗಕ್ಕೂ ವಿಮಾನಯಾನ ಸೌಲಭ್ಯ ಹೆಚ್ಚಿಸಲು ಸಚಿವ ಸತೀಶ್‌ ಜಾರಕಿಹೊಳಿ ಮನವಿ
ನವದೆಹಲಿ: ಕೇಂದ್ರ ನಾಗರಿಕ ವಿಮಾನಯಾನ ಸಚಿವ ಕಿಂಜರಾಪು ರಾಮ್ ಮೋಹನ್ ನಾಯ್ಡು ಅವರನ್ನು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಖಾತೆ ಸಚಿವ ಪ್ರಹ್ಲಾದ್ ಜೋಶಿ ಅವರೊಂದಿಗೆ ಲೋಕೋಪಯೋಗಿ ಇಲಾಖೆ ಸಚಿವ ಸತೀಶ್‌ ಜಾರಕಿಹೊಳಿ ಅವರು ಭೇಟಿಯಾಗಿ ಬಹು ದಶಕಗಳಿಂದಲೂ ಅಭಿವೃದ್ಧಿಯಲ್ಲಿ ಹಿಂದಿರುವ ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ವಿಮಾನಯಾನಕ್ಕೆ ಸಂಬಂಧಿಸಿದ ಸೌಲಭ್ಯಗಳನ್ನು ಒದಗಿಸಬೇಕೆಂದು ಮನವಿ ಮಾಡಿದ್ದಾರೆ.
ಬೆಂಗಳೂರಿನ ದೇವನಹಳ್ಳಿಯಲ್ಲಿರುವ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿನ ಜನದಟ್ಟಣೆ ಕಾರಣಕ್ಕೆ ಎರಡನೇ ವಿಮಾನ ನಿಲ್ದಾಣ ನಿರ್ಮಿಸಲು ಸಕಲ ಸಿದ್ಧತೆ ನಡೆಯುತ್ತಿದೆ. ಆದರೆ ಬೆಂಗಳೂರಿನಲ್ಲಿ ಜನಸಂಖ್ಯೆ ಹೆಚ್ಚಳ, ಸಂಚಾರ ಸಮಸ್ಯೆ ಇದೆ. ಆದ್ದರಿಂದ ಉತ್ತರ ಕರ್ನಾಟಕದ ಭಾಗದ ಜಿಲ್ಲೆಗಳಾದ ಹುಬ್ಬಳ್ಳಿ- ಧಾರವಾಡ, ಬೆಳಗಾವಿ ಸೇರಿದಂತೆ ಇತರೆ ಜಿಲ್ಲೆಗಳು ಅಭಿವೃದ್ಧಿ ಪತದಲ್ಲಿ ಸಾಗುತ್ತಿದ್ದು, ಈ ಜಿಲ್ಲೆಗಳಲ್ಲಿಯೂ ವಿಮಾನ ನಿಲ್ದಾಣಗಳಿಗೆ ಸುವ್ಯವಸ್ಥೆ ಜೊತೆಗೆ ಮೇಲ್ದರ್ಜೆಗೆರಿಸಬೇಕೆಂದು ಕೋರಿದ್ದಾರೆ.
ಇನ್ನು ವಿಮಾನ ನಿಲ್ದಾಣಗಳಿಗೆ ಸುವ್ಯವಸ್ಥೆ ಜೊತೆಗೆ ಮೇಲ್ದರ್ಜೆಗೆರಿಸಲು ಲೋಕೋಪಯೋಗಿ ಇಲಾಖೆಯಿಂದ ಬೇಕಾಗುವ ಸಹಕಾರ ನೀಡುವುದಾಗಿ ಕೇಂದ್ರ ಸಚಿವರಿಗೆ ತಿಳಿಸಿದ್ದಾರೆ.

Spread the love

About Laxminews 24x7

Check Also

ಎನ್.ಕೆ. ಎಜುಕೇಶನ್ ಸೊಸೈಟಿಯ ಎಸ್‌ಎಸ್‌ಎ ಪಿಯು ಕಾಲೇಜಿನ ಅದ್ಭುತ ಫಲಿತಾಂಶ

Spread the loveಎನ್.ಕೆ. ಎಜುಕೇಶನ್ ಸೊಸೈಟಿಯ ಎಸ್‌ಎಸ್‌ಎ ಪಿಯು ಕಾಲೇಜಿನ ಅದ್ಭುತ ಫಲಿತಾಂಶ ಬೆಳಗಾವಿ: ಎನ್.ಕೆ. ಎಜುಕೇಶನ್ ಸೊಸೈಟಿಯ ಅಧೀನದಲ್ಲಿರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ