ರೈತರ ಜಮೀನಿನಲ್ಲಿ ಚಿರತೆ ಪ್ರತ್ಯಕ್ಷ…!!!
ಜನರಲ್ಲಿ ಮೂಡಿದ ಆತಂಕ… ಸಿಸಿಟ್ಹಿವಿಯಲ್ಲಿ ಸೆರೆಯಾಯ್ತು ದೃಶ್ಯ
ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಸಂಪಗಾಂವ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷವಾಗಿದ್ದು ಜನರಲ್ಲಿ ಆತಂಕ ಮನೆ ಮಾಡಿದೆ.
ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಸಂಪಗಾಂವ ಮತ್ತು ಪಟ್ಟಿಹಾಳ ಕೆ.ಎಸ್ ಗ್ರಾಮದ ಹೊರವಲಯದಲ್ಲಿ ಚಿರತೆಯೊಂದು ಕಾಣಿಸಿಕೊಂಡಿದೆ. ನರಿ ಬೇಟೆ ಆಡಿರುವ ಚಿರತೆ ಓಡಾಡುವ ದೃಶ್ಯಗಳು ಅರಣ್ಯ ಇಲಾಖೆ ಅಧಿಕಾರಿಗಳು ಇಟ್ಟಿದ ಕ್ಯಾಮೆರಾದಲ್ಲೂ ಚಿರತೆ ಸೆರೆಯಾಗಿವೆ. ರಾತ್ರಿ ಹೊತ್ತು ಜಮೀನಿನಲ್ಲಿ ಯಾರು ಹೋಗದಂತೆ ಈಗಾಗಲೇ ಅರಣ್ಯ ಇಲಾಖೆ ಸಿಬ್ಬಂದಿ ಎಚ್ಚರಿಕೆಯನ್ನು ನೀಡಿದ್ದಾರೆ.
ಅರಣ್ಯ ಇಲಾಖೆ ಅಧಿಕಾರಿಗಳು ಚಿರತೆ ಸೆರೆಗೆ ನಾಲ್ಕು ಕಡೆಗಳಲ್ಲಿ ಬೋಣು ಇಟ್ಟಿದ್ದಾರೆ. ಬೈಲಹೊಂಗಲ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
Laxmi News 24×7