Home / Uncategorized / ಬಸ್ಸಿಗಾಗಿ ಗೋಕಾಕ ತಾಲೂಕಿನ ನಾಗನೂರ ಗ್ರಾಮದ ಮುತ್ತು ಎಂಬ ಪ್ರಯಾಣಿಕ ಬೊಬ್ಬೆ ಹಾಕುವ ಮೂಲಕ ಆಕ್ರೋಶ

ಬಸ್ಸಿಗಾಗಿ ಗೋಕಾಕ ತಾಲೂಕಿನ ನಾಗನೂರ ಗ್ರಾಮದ ಮುತ್ತು ಎಂಬ ಪ್ರಯಾಣಿಕ ಬೊಬ್ಬೆ ಹಾಕುವ ಮೂಲಕ ಆಕ್ರೋಶ

Spread the love

ವಿಜಯಪುರ( ಡಿಸೆಂಬರ್​. 11): ಬಸ್ಸಿಗಾಗಿ ಪ್ರಯಾಣಿಕರೊಬ್ಬರು ಬೊಬ್ಬೆ ಹಾಕಿ ಬಸ್ ಬಿಡುವಂತೆ ಅಳಲು ತೋಡಿಕೊಂಡ ಘಟನೆ ವಿಜಯಪುರದಲ್ಲಿ ನಡೆದಿದೆ. ರಾಜ್ಯದ ಕೆಲವೆಡೆ ಸಾರಿಗೆ ನೌಕರರು ಮುಷ್ಕರಕ್ಕೆ ಇಳಿದಿದ್ದರಿಂದ ಬಸ್ ಸಂಚಾರ ಸ್ಥಗಿತಗೊಂಡಿತ್ತು. ಆದರೆ, ವಿಜಯಪುರ ಜಿಲ್ಲೆಯಲ್ಲಿ ಮಾತ್ರ ಬೆಳಿಗ್ಗೆಯಿಂದ ಎಂದಿನಂತೆ ಬಸ್ ಸಂಚಾರ ಆರಂಭವಾಗಿತ್ತು. ಈಶಾನ್ಯ ಕರ್ನಾಟಕ ಸಾರಿಗೆ ಸಂಸ್ಥೆಯ ವ್ಯಾಪ್ತಿಯಲ್ಲಿರುವ ವಿಜಯಪುರ ಜಿಲ್ಲಾದ್ಯಂತ ಬಸ್​​ ಗಳು ರೋಡಿಗಿಳಿದಿದ್ದವು. ಎಲ್ಲವೂ ಸುಸೂತ್ರವಾಗಿ ನಡೆಯುತ್ತಿದ್ದಾಗ ದಿಢೀರನೆ ಪ್ರತಿಭಟನೆಗೆ ಇಳಿದ ಕೆಲವು ಜನ ಚಾಲಕ ಮತ್ತು ಸಿಬ್ಬಂದಿಗಳು ನಿಗದಿತ ಸ್ಥಳಕ್ಕೆ ಹೊರಡಲು ಸಿದ್ಧವಾಗಿದ್ದ ಬಸ್ಸುಗಳನ್ನು ತಡೆದು ಆಕ್ರೋಶ ವ್ಯಕ್ತಪಡಿಸಿದರು.  ಪ್ರಯಾಣಿಕರನ್ನು ಕೆಳಗೆ ಇಳಿಸಿದರು. ನಮ್ಮ ಕಡೆ ಬಸ್ಸುಗಳನ್ನು ಬಂದ್ ಮಾಡಲಾಗಿದೆ. ಇಲ್ಲೇಕೆ ಓಡಿಸುತ್ತಿದ್ದೀರಿ ಎಂದು ಆವಾಜ್ ಹಾಕಿದರು.  ದಿಢೀರನೆ ನಡೆದ ಈ ಘಟನೆಯಿಂದಾಗಿ ವಿಜಯಪುರ ಕೇಂದ್ರ ಬಸ್ ನಿಲ್ದಾಣದಲ್ಲಿದ್ದ ಎನ್ ಇ ಕೆ ಆರ್ ಟಿ ಸಿ ಅಧಿಕಾರಿಗಳು ಆತಂಕಕ್ಕೆ ಒಳಗಾದರು. 

ಈ ಸಂದರ್ಭದಲ್ಲಿ ಸ್ಥಳಕ್ಕೆ ದೌಡಾಯಿಸಿದ ವಿಜಯಪುರ ನಗರದ ಗಾಂಧಿ ಚೌಕ್ ಪೊಲೀಸರು ಬಸವಂತವಾಗಿ ಬಸ್ ಸಂಚಾರ ತಡೆಯಲು ಯತ್ನಿಸಿದ ಸಿಬ್ಬಂದಿಯನ್ನು ಶರ್ಟಿನ ಕಾಲರ್ ಹಿಡಿದು ಎಳೆದುಕೊಂಡು ವಶಕ್ಕೆ ಪಡೆದರು.

ಆಗ ಪೊಲೀಸರ ಬಳಿಗೆ ದೌಡಾಯಿಸಿದ ಉಳಿದ ಸಿಬ್ಬಂದಿ ಮನವಿ ಮಾಡಿಕೊಂಡು ಅವರನ್ನು ಬಿಡುಗಡೆ ಮಾಡಿಸಿದರು. ಬಲವಂತವಾಗಿ ಬಸ್ ಬಂದ್ ಮಾಡಿಸುತ್ತಿದ್ದ ಸಿಬ್ಬಂದಿ ವಾಯುವ್ಯ ಕರ್ನಾಟಕ ಸಾರಿಗೆ ಸಂಸ್ಥೆಯ ನೌಕರ ಎಂದು ನಂತರ ಗೊತ್ತಾಯಿತು.

ದಿಢೀರ್ ಪ್ರತಿಭಟನೆಯಿಂದಾಗಿ ಪ್ರಯಾಣಿಕರೂ ಕೂಡ ಆಕ್ರೋಶಕ್ಕೊಳಗಾದರು. ಈ ಸಂದರ್ಭದಲ್ಲಿ ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ನಾಗನೂರ ಗ್ರಾಮದ ಮುತ್ತು ಎಂಬ ಪ್ರಯಾಣಿಕ ಬೊಬ್ಬೆ ಹಾಕುವ ಮೂಲಕ ಆಕ್ರೋಶ ಹೊರ ಹಾಕಿದ. ತನ್ನ ಹೆಂಡತಿಗೆ  ಹೆರಿಗೆಯಾಗಿದ್ದು, ಕೂಡಲೇ ಬಸ್ ಸಂಚಾರ ಆರಂಭ ಮಾಡಿ ಎಂದು ಬೊಬ್ಬೆ ಹೊಡೆದು ಆಕ್ರೋಶ ವ್ಯಕ್ತಪಡಿಸಿದ. ಈ ಸಂದರ್ಭದರಲ್ಲಿ ದೇವರ ನಿಂಬರಗಿಯಿಂದ ಬಂದಿದ್ದ ಪ್ರಯಾಣಿಕ ಯಾಸೀನ್ ಏಕಾಏಕಿ ಹೀಗೆ ದಿಢೀರಾಗಿ ಬಸ್ ಬಂದ್ ಮಾಡಿದರೆ ಹೇಗೆ. ತಾನು ರೋಗಿಯೊಬ್ಬರನ್ನು ಬೇರೆ ಊರಿಗೆ ಆಸ್ಪತ್ರೆಗೆ ಕರೆದುಕೊಂಡು ಹೋಗಬೇಕಿದೆ ಎಂದು ಆಕ್ರೋಶ ಹೊರ ಹಾಕಿದರು.

ಇದಕ್ಕೆ ಯಾದಗಿರಿಯ ಬಸವರಾಜ ಎಂಬ ಯುವಕ ಕೂಡ ದನಿಗೂಡಿಸಿ ಏಕಾಏಕಿ ಬಸ್ ಸಂಚಾರ ಸ್ಥಗಿತಗೊಳಿಸಲಾಗಿದೆ.  ಬಸ್ ಯಾವಾಗ ಆರಂಭವಾಗುತ್ತದೆ ಎಂದರೂ ಸ್ಪಷ್ಟ ಮಾಹಿತಿ ಸಿಗುತ್ತಿಲ್ಲ ಎಂದು ಆಕ್ರೋಶ ಹೊರ ಹಾಕಿದ ಘಟನೆ ನಡೆಯಿತು.


Spread the love

About Laxminews 24x7

Check Also

ಮತದಾನಕ್ಕೆ ಮೂರೇ ದಿನ ಬಾಕಿ: ಬೆಂಗಳೂರಿನಲ್ಲಿ ನಾಳೆ ಸಂಜೆಯಿಂದ ನಿಷೇಧಾಜ್ಞೆ

Spread the loveಲೋಕಸಭಾ ಚುನಾವಣೆ ಮತದಾನಕ್ಕೆ ಮೂರೇ ದಿನ ಬಾಕಿ: ಬೆಂಗಳೂರಿನಲ್ಲಿ ನಾಳೆ ಸಂಜೆಯಿಂದ ನಿಷೇಧಾಜ್ಞೆ ಜಾರಿ ಬೆಂಗಳೂರು: ಲೋಕಸಭಾ ಚುನಾವಣೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ