ಬೆಳಗಾವಿ: ಜಿಲ್ಲೆಯ ಕಿತ್ತೂರು ರಾಣಿ ಚೆನ್ನಮ್ಮ ಕಿರು ಮೃಗಾಲಯಕ್ಕೆ ಹೊಸದಾಗಿ ಸಿಂಹಿಣಿಯೊಂದು ಸೇರ್ಪಡೆಯಾಗಿದೆ. ಇನ್ಮುಂದೆ ಮೃಗಾಲಯಕ್ಕೆ ಬರುವ ಪ್ರವಾಸಿಗರು ಅದನ್ನು ಕಣ್ತುಂಬಿಕೊಳ್ಳಬಹುದು.
ಬೆಂಗಳೂರಿನ ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನದಿಂದ ಈ ಸಿಂಹಿಣಿಯನ್ನು ಭಾನುವಾರ ಬೆಳಗಾವಿ ತಾಲೂಕಿನ ಭೂತರಾಮನಹಟ್ಟಿಯಲ್ಲಿರುವ ಕಿರು ಮೃಗಾಲಯಕ್ಕೆ ಕರೆತರಲಾಗಿದೆ. 9 ವರ್ಷದ ಈ ಸಿಂಹಿಣಿ ಹೆಸರು ಭೃಂಗಾ.
ಫೆಬ್ರವರಿ 6ರಂದು ಕಿತ್ತೂರು ರಾಣಿ ಚೆನ್ನಮ್ಮ ಮೃಗಾಲಯದಲ್ಲಿ ‘ನಿರುಪಮಾ’ ಎಂಬ ಸಿಂಹಿಣಿ ಅನಾರೋಗ್ಯದಿಂದ ಮೃತಪಟ್ಟಿತ್ತು. ಅದಾದ ಬಳಿಕ ಇಲ್ಲಿನ ಕೃಷ್ಣಾ ಎಂಬ ಗಂಡು ಸಿಂಹ ಮಂಕಾಗಿತ್ತು. ಈಗ ಭೃಂಗಾ ಮೃಗಾಲಯ ಪ್ರವೇಶಿಸುತ್ತಿದ್ದಂತೆ ಕೃಷ್ಣಾ ಮತ್ತೆ ಫುಲ್ ಆ್ಯಕ್ಟಿವ್ ಆಗುತ್ತಿದೆ.
Laxmi News 24×7