ಐಪಿಎಸ್, ಎಡಿಜಿಪಿ ಹೇಮಂತ್ ನಿಂಬಾಳ್ಕರ್ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2024ನೇ ಸಾಲಿನ ಮುಖ್ಯಮಂತ್ರಿಯವರ ಪದಕ ಪ್ರದಾನ ಮಾಡಿ ಗೌರವಿಸಿದರು
ಇಂದು ಪೊಲೀಸ್ ಧ್ವಜ ದಿನಾಚರಣೆ ಈ ಪೊಲೀಸ್ ಧ್ವಜ ದಿನಾಚರಣೆರಂದು ರಾಜ್ಯದ ಮತ್ತು ನೆರೆ ರಾಜ್ಯದ ನಕ್ಸಲರ ಶರಣಾಗತಿಯಲ್ಲಿ ಪ್ರಮುಖ ಪಾತ್ರವಹಿಸಿದ್ದ ರಾಜ್ಯದ ಗುಪ್ತಚರ ಇಲಾಖೆಯ ಮಹಾನಿರ್ದೇಶಕರಾದ ಹೇಮಂತ್ ನಿಂಬಾಳ್ಕರ್ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2024ನೇ ಸಾಲಿನ ಮುಖ್ಯಮಂತ್ರಿಯವರ ಪದಕ ಪ್ರದಾನ ಮಾಡಿ ಗೌರವಿಸಿದರು ಸಕಲ ಸರ್ಕಾರಿ ಗೌರವಗಳೊಂದಿಗೆ ನಡೆದ
ಈ ಪದಕ ವಿತರಣಾ ಸಮಾರಂಭದಲ್ಲಿ ರಾಜ್ಯದ ಉನ್ನತ ಮಟ್ಟದ ಅಧಿಕಾರಿಗಳು ಸೇರಿದಂತೆ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು ಈ ಸಂದರ್ಭದಲ್ಲಿ ಅವರೊಂದಿಗೆ 22ಪೊಲೀಸ್ ಅಧಿಕಾರಿಗಳಿಗೆ ಸಿಬ್ಬಂದಿಗಳಿಗೆ ಈ ಪದಕ ಪ್ರದಾನ ಮಾಡಿ ಗೌರವಿಸಲಾಯಿತು.
ಪ್ರೇಕ್ಷಕರ ಗ್ಯಾಲರಿಯಲ್ಲಿ ಐಪಿಎಸ್ ಎಡಿಜಿಪಿ ಹೇಮಂತ್ ನಿಂಬಾಳ್ಕರ್ ಅವರ ಧರ್ಮಪತ್ನಿ ಮಾಜಿ ಶಾಸಕಿ ಎಐಸಿಸಿ ಕಾರ್ಯದರ್ಶಿ ಡಾಕ್ಟರ್ ಅಂಜಲಿ ನಿಂಬಾಳ್ಕರ್ ಸೇರಿದಂತೆ ಅವರ ಮಗಳು ರಕಮ್ಮಾ ನಿಂಬಾಳ್ಕರ್ ಅವರು ಉಪಸ್ಥಿತರಿದ್ದು ಸಂತಸದ ಕ್ಷಣವನ್ನು ಕಣ್ತುಂಬಿಕೊಂಡರು.
Laxmi News 24×7