ಕಲಬುರಗಿ, ಏಪ್ರಿಲ್ 03: ಆತ ಸರ್ಕಾರಿ ನೌಕರ. ಮದುವೆಯಾಗಿ ಸುಖಃ ಸಂಸಾರ ನಡೆಸುತ್ತಿದ್ದ. ಅದಕ್ಕೆ ಸಾಕ್ಷಿವೆಂಬಂತೆ ಎರಡು ಮಕ್ಕಳು ಸಹ ಇದ್ದರು.
ಆದರೆ ಅದೇನಾಯ್ತೋ ಗೊತ್ತಿಲ್ಲ, ಡೆತ್ನೋಟ್ (Death Note) ಬರೆದಿಟ್ಟು ತನ್ನ ಪತ್ನಿ ಸೇರಿದಂತೆ ಇಬ್ಬರು ಮಕ್ಕಳನ್ನು ಕೊಂದು (kill) ತಾನು ಕೂಡ ನೇಣಿಗೆ ಶರಣಾಗಿರುವಂತಹ ಘಟನೆ ನಗರದ ಗಾಬರೆ ಲೇಔಟ್ನ ಅಪಾರ್ಟ್ಮೆಂಟ್ನಲ್ಲಿ ಘಟನೆ ನಿನ್ನೆ ನಡೆದಿದೆ. ಈ ಘನಘೋರ ಕೃತ್ಯ ಕಂಡು ಇಡೀ ಕಲಬುರಗಿ ಬೆಚ್ಚಿಬಿದ್ದಿದೆ. ಸ್ಟೇಷನ್ ಬಜಾರ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
ಕಲಬುರಿಗಿ ಘನಘೋರ ಮತ್ತು ಕರಳು ಹಿಂಡುವ ಘಟನೆಯೊಂದಕ್ಕೆ ಸಾಕ್ಷಿಯಾಗಿದೆ. ಇಂತಹದೊಂದು ದೊಡ್ಡ ಅನಾಹುತಕ್ಕೆ ಕಾರಣವಾಗಿದ್ದು, ಸಂತೋಷ್ ಕೊರಳಿ ಎಂಬ ವ್ಯಕ್ತಿ.
ಕಲಬುರಗಿಯ ಟೆಸ್ಕಾಂನಲ್ಲಿ ಸೀನಿಯರ್ ಅಕೌಂಟೆಂಟ್ ಆಗಿದ್ದ ಸಂತೋಷ್ ತನ್ನ ಪತ್ನಿ ಹಾಗೂ ಇಬ್ಬರು ಮಕ್ಕಳನ್ನ ಕೊಂದು ತಾನೂ ನೇಣಿಗೆ ಶರಣಾಗಿದ್ದಾನೆ. ಕೌಟುಂಬಿಕ ಕಲಹ ಹಿನ್ನಲೆ ಪತ್ನಿ ಇಬ್ಬರು ಮಕ್ಕಳ್ಳನ್ನ ಕೊಲೆ ಮಾಡಿರುವ ಸಂತೋಷ್ ಕೊನೆಗೆ ತಾನೂ ಕೂಡ ಮನೆಯ ಫ್ಯಾನ್ಗೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
Laxmi News 24×7