ಹಾವೇರಿ: ಜಿಲ್ಲೆಯ ಸವಣೂರು ತಾಲೂಕಿನ ಜಲ್ಲಾಪುರ ಗ್ರಾಮದಲ್ಲಿ ಎರಡು ನಾಡಬಾಂಬ್ ಪತ್ತೆಯಾಗಿದೆ.ಒಂದು ನಾಡಬಾಂಬ್ ಅನ್ನು ಕಚ್ಚಿ ಶ್ವಾನ ಸಾವನ್ನಪ್ಪಿದೆ. ಪ್ರಾಣಿಗಳನ್ನು ಬೇಟೆಯಾಡಲು ಬೇಟೆಗಾರರು ನಾಡಬಾಂಬ್ ಇಟ್ಟಿರುವ ಬಗ್ಗೆ ಅಧಿಕಾರಿಗಳು ಅನುಮಾನ ವ್ಯಕ್ತಪಡಿಸಿದ್ದಾರೆ. ಗ್ರಾಮದ ಮಲ್ಲಿಕಾರ್ಜುನ ಗೌಡ ಎಂಬವರ ಜಮೀನಿನಲ್ಲಿ ನಾಡಬಾಂಬ್ಗಳು ಪತ್ತೆಯಾಗಿವೆ.
ನಾಡಬಾಂಬ್ಗಳಿಗೆ ಪ್ರಾಣಿಯ ಕೊಬ್ಬು ಸವರಿದ್ದರಿಂದ ನಾಯಿ ಕಚ್ಚಿದೆ ಎನ್ನಲಾಗುತ್ತಿದೆ. ಸ್ಫೋಟಕ ಅಧಿನಿಯಮದ ಅಡಿಯಲ್ಲಿ ವಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಸ್ಥಳಕ್ಕೆ ಬಾಂಬ್ ನಿಷ್ಕ್ರಿಯ ದಳದವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Laxmi News 24×7