Breaking News

ಬಂಡೀಪುರದಲ್ಲಿ ರಾತ್ರಿ ಸಂಚಾರ ನಿಷೇಧ ಮುಂದುವರೆಸುವಂತೆ ಬೃಹತ್ ಜಾಥಾ

Spread the love

ಚಾಮರಾಜನಗರ: ಗುಂಡ್ಲುಪೇಟೆ ತಾಲೂಕಿನ ಬಂಡೀಪುರದಲ್ಲಿ ರಾತ್ರಿ ಸಂಚಾರ ನಿಷೇಧ ಮುಂದುವರೆಸಬೇಕು, ಯಾವುದೇ ಸಡಿಲಿಕೆ ಇರಬಾರದು ಎಂದು ಆಗ್ರಹಿಸಿ ಪರಿಸರಪ್ರೇಮಿಗಳು ಇಂದು ಬೃಹತ್ ಕಾಲ್ನಡಿಗೆ ಜಾಥಾ ನಡೆಸಿದರು.

ಕೇರಳಕ್ಕೆ ಹಾದುಹೋಗುವ ಕಗ್ಗಳದಹುಂಡಿ ಗೇಟ್​ನಿಂದ ಮದ್ದೂರು ಚೆಕ್​ಪೋಸ್ಟ್ ವರೆಗೆ ಪರಿಸರ ಹೋರಾಟಗಾರರು, ರೈತರು, ಟೆಕ್ಕಿಗಳು, ಕೇರಳದ ಪರಿಸರ ಹೋರಾಟಗಾರರು, ಸ್ಥಳೀಯ ಯುವಕರು ಸೇರಿದಂತೆ ಸಹಸ್ರಾರು ಮಂದಿ ಜಾಥಾದಲ್ಲಿ ಭಾಗಿಯಾದರು.

ಕೇರಳದ ವಯನಾಡ್ ಪ್ರಕೃತಿ ಸಂರಕ್ಷಣಾ ಸಮಿತಿಯ ಬಾದೂಷಾ ಮಾತನಾಡಿ, “ನಾವು ಕೂಡ ರಾತ್ರಿ ಸಂಚಾರ ಬೇಡ ಎಂದೇ ಹೇಳುತ್ತಿದ್ದೇವೆ. ರಾತ್ರಿ ಸಂಚಾರ ಆರಂಭಗೊಂಡರೆ ಹವಾಲ‌ಮನಿ, ಗೋಲ್ಡ್ ಸ್ಮಗ್ಲಿಂಗ್ ನಡೆಯುತ್ತದೆ. ವಯನಾಡಿನ ಬಹುತೇಕ ಮಂದಿ ರಾತ್ರಿ ಸಂಚಾರ ಬೇಡ ಎನ್ನುತ್ತಿದ್ದಾರೆ. ಆದರೆ ಬೆರಳೆಣಿಕೆ ಮಂದಿ ಕೇಳುತ್ತಿದ್ದಾರೆ ಅಷ್ಟೇ. ಕರ್ನಾಟಕ ಸರ್ಕಾರ ಯಾವುದೇ ಕಾರಣಕ್ಕೂ ರಾತ್ರಿ ಸಂಚಾರಕ್ಕೆ ಅವಕಾಶ ಕೊಡಬಾರದು” ಎಂದು ಒತ್ತಾಯಿಸಿದರು.ರೈತ ಮುಖಂಡ ಹಳ್ಳಿಕೆರೆಹುಂಡಿ ಭಾಗ್ಯರಾಜು ಮಾತನಾಡಿ, “ಕ್ರಾಂತಿ ಇಲ್ಲದೆ ಶಾಂತಿ ಸ್ಥಾಪನೆ ಸಾಧ್ಯವಿಲ್ಲ. ಶಾಂತಿಯಿಂದ ಹೋರಾಟ ಮಾಡಿದರೆ ಇಲ್ಲಿ ಯಾರಿಗೂ ಕಿವಿ ಕೇಳುವುದಿಲ್ಲ. ನಮ್ಮ ಭಾಗದ ಪರಿಸರ ಹಾಳು ಮಾಡುತ್ತಿರುವವರಿಗೆ ಬುದ್ಧಿ ಕಲಿಸಬೇಕು. ಕೇರಳ ಸರ್ಕಾರದ ಒತ್ತಡಕ್ಕೆ ಮಣಿಯಲು ಕಾಂಗ್ರೆಸ್ ಸರ್ಕಾರ ಮುಂದಾಗಿದೆ. ಸರ್ಕಾರ, ಲೋಕಸಭಾ ಸದಸ್ಯರು ಇಲ್ಲಿನ ನೈಜತೆ ತಿಳಿಸಬೇಕು” ಎಂದು ಹೇಳಿದರು.


Spread the love

About Laxminews 24x7

Check Also

2028ಕ್ಕೆ ಕಾಂಗ್ರೆಸ್​ ಕ್ರಾಂತಿ ಎಬ್ಬಿಸುತ್ತೆ: ಸಚಿವ ಚಲುವರಾಯಸ್ವಾಮಿ

Spread the loveಮಂಡ್ಯ : ನವೆಂಬರ್ ಕ್ರಾಂತಿನೂ ಇಲ್ಲ, ಸಂಕ್ರಾಂತಿ ಕ್ರಾಂತಿನೂ ಇಲ್ಲ, ಯುಗಾದಿಗೂ ಇಲ್ಲ. 2028ಕ್ಕೆ ಮತ್ತೆ ನಾವೇ, ಕಾಂಗ್ರೆಸ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ