Breaking News

ಖಾಸಗಿ ವಾಹನಗಳು ರಸ್ತೆಗಿಳಿಯಲು ಬಿಡುವುದಿಲ್ಲ ಎಂದು ಎಚ್ಚರಿಕೆ ನೀಡಿದ್ದಾರೆ. ಸಾರಿಗೆ ನೌಕರ

Spread the love

ಬೆಳಗಾವಿ: ಸಾರಿಗೆ ನೌಕರರ ಮುಷ್ಕರ ಹಿನ್ನೆಲೆಯಲ್ಲಿ ನಾಳೆಯಿಂದ ಖಾಸಗಿ ಬಸ್ ಗಳ ಸಂಚಾರಕ್ಕೆ ವ್ಯವಸ್ಥೆ ಮಾಡಲು ಸರ್ಕಾರ ಮುಂದಾಗಿರುವ ಬೆನ್ನಲ್ಲೇ ಮುಷ್ಕರ ನಿರತ ನೌಕರರ ಆಕ್ರೋಶ ಭುಗಿಲೆದ್ದಿದ್ದು, ಖಾಸಗಿ ವಾಹನಗಳು ರಸ್ತೆಗಿಳಿಯಲು ಬಿಡುವುದಿಲ್ಲ ಎಂದು ಎಚ್ಚರಿಕೆ ನೀಡಿದ್ದಾರೆ.

ಬೆಳಗಾವಿ ಬಸ್ ನಿಲ್ದಾಣದಲ್ಲಿ ಮಾತನಾಡಿದ ಮುಷ್ಕರ ನಿರತ ಸಿಬ್ಬಂದಿ, ನಾಳೆ ಬೆಳಗಾವಿಯಲ್ಲಿ ಯಾವುದೇ ಖಾಸಗಿ ಬಸ್ ಸಂಚಾರಕ್ಕೂ ಅವಕಾಶ ನೀಡಲ್ಲ. ಒಂದು ವೇಳೆ ಖಾಸಗಿ ಬಸ್ ಗಳ ಓಡಾಟ ಆರಂಭವಾದರೆ ಕಲ್ಲು ತೂರಾಟದಂತಹ ಘಟನೆ ನಡೆದು, ಬಸ್ ಗಳಿಗೆ ಹಾನಿಯಾದರೆ ನಾವು ಜವಾಬ್ದಾರರಲ್ಲ. ಇಂತಹ ಘಟನೆಗೆ ಅವಕಾಶ ನೀಡಬಾರದು ಎಂದರು.

ಖಾಸಗಿ ಬಸ್ ಚಾಲಕರು ಈ ಬಗ್ಗೆ ಎಚ್ಚರಿಕೆ ವಹಿಸಬೇಕು. ಇಂದು ನಮಗಾದ ಅನ್ಯಾಯ ನಾಳೆ ನಿಮಗೂ ಆಗುತ್ತದೆ. ದಯವಿಟ್ಟು ಖಾಸಗಿ ವಾಹನ ಚಾಲಕರು ನಾಳೆ ಸಂಚಾರಕ್ಕೆ ಮುಂದಾಗಬಾರದು ನಮ್ಮ ಹೋರಾಟಕ್ಕೆ ಸಹಕಾರ ನೀಡಬೇಕು ಇಲ್ಲವಾದಲ್ಲಿ ಮುಂದಾಗುವ ಘಟನೆಗಳಿಗೆ ನೀವೇ ಜವಾಬ್ದಾರಿ ಎಂದು ಎಚ್ಚರಿಕೆ ನೀಡಿದ್ದಾರೆ.


Spread the love

About Laxminews 24x7

Check Also

ಘೋಡಗೇರಿ ಜಿ.ಪಂ ವ್ಯಾಪ್ತಿಯ ಹುಕ್ಕೇರಿ ವಿದ್ಯುತ್ ಸಹಕಾರ ಸಂಘದ ಪ್ರಚಾರ ಸಭೆ

Spread the loveಘೋಡಗೇರಿ ಜಿ.ಪಂ ವ್ಯಾಪ್ತಿಯ ಹುಕ್ಕೇರಿ ವಿದ್ಯುತ್ ಸಹಕಾರ ಸಂಘದ ಪ್ರಚಾರ ಸಭೆ ವಿರೋಧಿಗಳ ಸುಳ್ಳು ವದಂತಿಗಳಿಗೆ ಕಿವಿಗೋಡಬೇಡಿ, …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ