ಬಾಗಲಕೋಟೆ : ಪಿಯು ಪರೀಕ್ಷೆಯಲ್ಲಿ ಫೇಲ್, ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ
ಬಾಗಲಕೋಟೆ ಜಿಲ್ಲೆ ಮುಧೋಳ ತಾಲೂಕಿನ ಲೋಕಾಪುರ ಪಟ್ಟಣದಲ್ಲಿ ಪಿಯು ಪರೀಕ್ಷೆಯಲ್ಲಿ ಫೇಲ್ ಆಗಿದ್ದರಿಂದ ಮನನೊಂದು ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ
ಪಿಯುಸಿ ವಾಣಿಜ್ಯ ವಿಭಾಗದ ಅಕೌಂಟೆನ್ಸಿ ಪರೀಕ್ಷೆಯಲ್ಲಿ ಫೇಲ್ ಆಗಿದ್ದು ಅದಕ್ಕಾಗಿ ಮನನೊಂದು ವಿದ್ಯಾರ್ಥಿ ಮಹೇಶ ಬಸಪ್ಪ ತೇಲಿ ಲೋಕಾಪುರದಲ್ಲಿರುವ ಅಕ್ಕ ಸಾವಿತ್ರಿ ಅವರ ಮನೆಯ ಮಹಡಿ ಮೇಲಿನ ಕೋಣೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ