ಬೆಳಗಾವಿ : ಕೆ.ಎಲ್.ಎಸ್ ರಾಜಾ ಲಖಮ್ಗೌಡಾ ಕಾನೂನು ಕಾಲೇಜಿನಲ್ಲಿ 134 ನೇ ಅಂಬೇಡ್ಕರ್ ಜಯಂತಿಯನ್ನು ಆಚರಿಸಲಾಯಿತು. ಡಾ. ಎ.ಎಚ್ ಹವಾಲ್ಡಾರ್ ಪ್ರಾಂಶುಪಾಲರು ಈ ಸಮಾರಂಭಕ್ಕೆ ಮುಖ್ಯ ಅತಿಥಿಯಾಗಿದ್ದರು. ವಿದ್ಯಾರ್ಥಿಗಳನ್ನು ಉದ್ದೇಶಿಸಿ ಅವರು ಡಾ. ಬಿ.ಆರ್ ಅಂಬೇಡ್ಕರ್ ಅವರ ತ್ಯಾಗ, ಮತ್ತು ಸಾಧನೆಗಳ ಬಗ್ಗೆ ಮಾತನಾಡಿದರು.
ಈ ಸಮಾರಂಭವನ್ನು ಕಾಲೇಜಿನ ಐ.ಕ್ಯೂ.ಎ.ಸಿ ಮತ್ತು ಎನ್ಎಸ್ಎಸ್ ವಿಭಾಗ ಆಯೋಜಿಸಿತ್ತು. ಕಾಲೇಜಿನಲ್ಲಿ ಆಯೋಜಿಸಲಾದ ವಿವಿಧ ಸ್ಪರ್ಧೆಗಳ ಬಹುಮಾನ ವಿತರಣೆಯನ್ನು ಈ ಸಂದರ್ಭದಲ್ಲಿ ಮಾಡಲಾಯಿತು. ಎಲ್ಲಾ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಕಾರ್ಯಕ್ಕಾಗಿ ಹೆಚ್ಚಿನ ಸಂಖ್ಯೆಯಲ್ಲಿ ಹಾಜರಿದ್ದರು
Laxmi News 24×7