ಬೆಳಗಾವಿ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಎಲ್ ಆ್ಯಂಡ್ ಟಿ ಕಂಪನಿಯ ಸಬ್ಗುತ್ತಿಗೆದಾರರಿಂದ ಅನುಷ್ಠಾನಗೊಳ್ಳುತ್ತಿದ್ದ
ಒಳಚರಂಡಿ ಪೈಪ್ಲೈನ್ ಕಾಮಗಾರಿಯ ಸಂದರ್ಭದಲ್ಲಿ ಮೂಡಲಗಿ ತಾಲೂಕಿನ ಇಬ್ಬರು ಕಾರ್ಮಿಕರು ಮಣ್ಣು ಕುಸಿದು ಮೃತಪಟ್ಟಿರುವ ಹೃದಯ ವಿದ್ರಾವಕ ವಿಷಯ ತಿಳಿದು ತೀವ್ರ ದುಃಖಿತನಾಗಿದ್ದೇನೆ.
ಮೂಡಲಗಿ ತಾಲೂಕಿನ ಪಟಗುಂದಿ ಗ್ರಾಮದ ಶಿವಲಿಂಗ ಮಾರುತಿ ಸರವೆ (ವಯಸ್ಸು 20) ಮತ್ತು ಬಸವರಾಜ ಸರವೆ (ವಯಸ್ಸು 38) ಎಂಬ ಕೂಲಿ ಕಾರ್ಮಿಕರು ಈ ದುರ್ಘಟನೆಯಲ್ಲಿ ದುರ್ಮರಣ ಹೊಂದಿದ್ದು, ಅವರ ಕುಟುಂಬದವರಿಗೆ ನನ್ನ ಸಂತಾಪಗಳನ್ನು ತಿಳಿಸುತ್ತೇನೆ.
ಈ ಘಟನೆ ಕುರಿತು ಸಮಗ್ರ ತನಿಖೆ ನಡೆಸಿ ತಕ್ಷಣ ಕ್ರಮ ಕೈಗೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಮೃತ ಕಾರ್ಮಿಕರ ಕುಟುಂಬಗಳಿಗೆ ಸೂಕ್ತ ಪರಿಹಾರ ಒದಗಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುವುದು
Laxmi News 24×7