Breaking News

ಶ್ರೀರಾಮ ಸೇನೆಯಿಂದ ಮಹಿಳೆಯರಿಗೆ ತ್ರಿಶುಲ ದೀಕ್ಷೆ ಮತ್ತು ಲವ್ ಜಿಹಾದ್ ಪುಸ್ತಕ ಬಿಡುಗಡೆ

Spread the love

ಶ್ರೀರಾಮ ಸೇನೆಯಿಂದ ಮಹಿಳೆಯರಿಗೆ ತ್ರಿಶುಲ ದೀಕ್ಷೆ ಮತ್ತು ಲವ್ ಜಿಹಾದ್ ಪುಸ್ತಕ ಬಿಡುಗಡೆ
ನೇಹಾ ಹಿರೇಮಠ ಹತ್ಯೆಗೆ ಇಂದು ಒಂದು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ನೇಹಾ ಸಾವಿಗೆ ನ್ಯಾಯಕ್ಕಾಗಿ ಆಗ್ರಹಿಸಿ ಶ್ರೀರಾಮ ಸೇನೆ ಇಲ್ಲಿನ ಮಿನಿವಿಧಾನಸೌಧದ ಮುಂಭಾಗದಲ್ಲಿರುವ ಶಿವಕೃಷ್ಣ ಮಂದಿರದಲ್ಲಿ ಸ್ವರಕ್ಷಣೆಗಾಗಿ ಮಹಿಳೆಯರಿಗೆ ತ್ರಿಶುಲ ದೀಕ್ಷೆ ಮತ್ತು ಲವ್ ಜಿಹಾದ್ ಪುಸ್ತಕ ಬಿಡುಗಡೆ ಮಾಡಿತು.
May be an image of 5 people, flute, temple and text
ಇದಕ್ಕೂ ಮೊದಲು ನೇಹಾ ಹಿರೇಮಠ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, ಪೂರ್ಣಾಹುತಿ ಹೋಮ, ಹವನ ಮಾಡಲಾಯಿತು. ಅಲ್ಲದೇ ಮೌನಾಚರಣೆ ಮೂಲಕ ಶ್ರದ್ಧಾಂಜಲಿ ಸಲ್ಲಿಸಲಾಯಿತು.
ಈ ವೇಳೆ ಶ್ರೀರಾಮ ಸೇನೆಯ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಮಾತನಾಡಿ, ಏ.18 ರಂದು 2025 ರಂದು ನೇಹಾ ಹಿರೇಮಠ ಎಂಬ ವಿದ್ಯಾರ್ಥಿಯನ್ನು ಹಾಡಹಗಲೇ ಹತ್ಯೆ ಮಾಡಲಾಗಿತ್ತು.
ಈ ಘಟನೆಗೆ ಇಂದು ಒಂದು ವರ್ಷ ಆಗಿದೆ. ಈ ಹಿನ್ನೆಲೆ ಶ್ರೀರಾಮ ಸೇನೆ ಸಂಘಟನೆ ವಾರ್ಷಿಕ ಶ್ರದ್ಧಾಂಜಲಿ ಸಲ್ಲಿಸುತ್ತಿದ್ದೇವೆ. ಅಪರಾಧಿಗಳಿಗೆ ತಕ್ಕ ಶಿಕ್ಷೆ ನೀಡುವಲ್ಲಿ ಕೋರ್ಟ್, ಪೊಲೀಸ್ ಠಾಣೆ, ರಾಜಕಾರಣಿಗಳು ವಿಫಲರಾಗಿದ್ದಾರೆ. ಈ ಪ್ರಕರಣದಲ್ಲಿ ಯಾವುದೇ ಪ್ರಕ್ರಿಯೆ ಆಗಿಲ್ಲ, ಇದು ಗಂಭೀರವಾಗಿದೆ.
May be an image of 1 person
ಇದೇ ಮಾದರಿಯಲ್ಲಿ ಕೆಲವು ದಿನಗಳ ಹಿಂದೆ ಹುಬ್ಬಳ್ಳಿಯಲ್ಲಿ ಐದು ವರ್ಷದ ಮಗುವಿನ ಮೇಲೆ ಅತ್ಯಾಚಾರ ಮಾಡಿ ಕೊಲೆ ಮಾಡಲಾಗಿತ್ತು. ಇದಕ್ಕೆ ಕಾರಣ ರಾಜಕಾರಣಿಗಳು, ಕಾಂಗ್ರೆಸ್, ಕೋರ್ಟ್, ಪೊಲೀಸರು, ಮೇಲಿಂದ ಮೇಲೆ ಆಗುತ್ತಿರುವ ಘಟನೆಗಳಿಗೆ ನಿರ್ಣಯ ಕೊಡದೇ ನಿರ್ಲಕ್ಷ್ಯವಹಿಸುತ್ತಿರುವುದೇ ಇಂತಹ ಘಟನೆಗಳಿಗೆ ಕಾರಣವಾಗಿದೆ ಎಂದು ಆರೋಪಿಸಿದರು.
ಮಹಿಳೆಯರ ಸುರಕ್ಷತೆ ರಾಜಕಾರಣಿಗಳಿಗೆ ಬೇಡಾಗಿದೆ. ಈ ಹಿನ್ನೆಲೆಯಲ್ಲಿ ಕೋರ್ಟ್ ವಿಫಲವಾಗಿದೆ, ಶ್ರೀರಾಮ ಸೇನೆಯಿಂದ ಒಂದು ಸಾವಿರ ಮಹಿಳೆಯರಿಗೆ ಶ್ರೀಶೂಲ ದೀಕ್ಷೆ ಕೊಡಲಾಗಿದೆ. ಇವತ್ತು ಸಾಂಕೇತಿಕವಾಗಿ ಚಾಲನೆ ನೀಡಿದ್ದೇವೆ, ಮಹಿಳೆಯರಲ್ಲಿ ಧೈರ್ಯ, ಸ್ಥೈರ್ಯ, ಸುರಕ್ಷತೆ ಒದಗಿಸುವ ನಿಟ್ಟಿನಲ್ಲಿ ಈ ಕ್ರಮ ಕೈಗೊಂಡಿದ್ದೇವೆ, ಹಿಂದೂ ಮಹಿಳೆಯರ ಸುರಕ್ಷತೆಗಾಗಿ ಇದೇ ತ್ರಿಶೂಲದಿಂದ ಉತ್ತರ ಕೊಡುವ ದೃಷ್ಟಿಯಿಂದ ಇದನ್ನು ಆಚರಣೆ ಮಾಡುತ್ತಿದ್ದೇವೆ ಎಂದರು.
ಈ ಹಿಂದೆ ನೇಹಾ ಹಿರೇಮಠ ಪ್ರಕರಣದಲ್ಲಿ ಎನ್ಕೌಂಟರ್ ಮಾಡಿದ್ರೆ, ಮುಂದೆ ಇಂತಹ ಘಟನೆಗಳು ನಡೆಯುತ್ತಿರಲಿಲ್ಲ, ಯಾಕೆಂದರೆ ಎನ್ಕೌಂಟರ್ ಮಾಡದೇ ಇರುವುದು, ಕೋರ್ಟ್ ನಿರ್ಣಯ ವಿಳಂಬಗಳೇ ಇದಕ್ಕೆ ಕಾರಣವಾಗಿವೆ. ರಾಜಕಾರಣಿಗಳ ನಿರ್ಲಕ್ಷ್ಯ ಇದಕ್ಕೆ ಕಾರಣವಾಗಿದೆ ಎಂದು ಹರಿಹಾಯ್ದರು.
ಹುಬ್ಬಳ್ಳಿಯಲ್ಲಿ ನಡೆದ ಎನ್ಕೌಂಟರ್ ಮಾದರಿಯಲ್ಲಿ ಅಪರಾಧಿಗಳಿಗೆ ಉತ್ತರ ಕೊಡಬೇಕು, ಜೈಲಿಗೆ ಹೋಗಬಾರದು, ಘಟನೆ ನಡೆದ ತಕ್ಷಣವೇ ಉತ್ತರ ಕೊಡಬೇಕು ಎಂದು ಎಚ್ಚರಿಕೆ ನೀಡಿದರು. ಇನ್ನು ಶಿವಮೊಗ್ಗ ನಗರದಲ್ಲಿ ಪರೀಕ್ಷೆ ಸಮಯದಲ್ಲಿ ಜನಿವಾರವನ್ನು ತೆಗೆಸಿ ಕಸದ ಬುಟ್ಟಿಯಲ್ಲಿ ಹಾಕಿದ್ದು ಅಪರಾಧ, ಅಂತವರನ್ನು ಅಮಾನತು ಮಾಡಬೇಕು. ಧಾರ್ಮಿಕ ಸಂಕೇತಗಳಿಗೆ ದಕ್ಕೆ ತರುವ ಕೆಲಸ ಖಂಡನೀಯ, ಇಂತಹ ಘಟನೆಗಳು ಕಾಂಗ್ರೆಸ್ ನಡೆಯಿಂದ ನಡೆಯುತ್ತಿದೆ ಎಂದು ಆರೋಪಿಸಿದರು.
ಈ ಸಂದರ್ಭದಲ್ಲಿ ಶ್ರೀರಾಮ ಸೇನೆಯ ಕಾರ್ಯಕರ್ತರು, ನೂರಾರು ಯುವತಿಯರು, ಮಹಿಳೆಯರು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

Spread the love

About Laxminews 24x7

Check Also

ಎನ್.ಕೆ. ಎಜುಕೇಶನ್ ಸೊಸೈಟಿಯ ಎಸ್‌ಎಸ್‌ಎ ಪಿಯು ಕಾಲೇಜಿನ ಅದ್ಭುತ ಫಲಿತಾಂಶ

Spread the loveಎನ್.ಕೆ. ಎಜುಕೇಶನ್ ಸೊಸೈಟಿಯ ಎಸ್‌ಎಸ್‌ಎ ಪಿಯು ಕಾಲೇಜಿನ ಅದ್ಭುತ ಫಲಿತಾಂಶ ಬೆಳಗಾವಿ: ಎನ್.ಕೆ. ಎಜುಕೇಶನ್ ಸೊಸೈಟಿಯ ಅಧೀನದಲ್ಲಿರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ