Breaking News

ತಮ್ಮ ಮೇಲೆ ಗುಂಡಿನ ದಾಳಿ ಮಾಡಿದವರ ಹೆಸರು ಬಿಚ್ಚಿಟ್ಟ ರಿಕ್ಕಿ ರೈ

Spread the love

ರಾಮನಗರ, ಏಪ್ರಿಲ್​ 20: ಬೆಂಗಳೂರು (Bengaluru) ಭೂಗತಲೋಕದ ಮಾಜಿ ಡಾನ್​ ಮುತ್ತಪ್ಪ ರೈ (Muthappa Rai) ಪುತ್ರ ರಿಕ್ಕಿ ರೈ ಮೇಲೆ ಫೈರಿಂಗ್ ಮಾಡಿ ದುಷ್ಕರ್ಮಿಗಳು ಪರಾರಿ ಆಗಿದ್ದಾರೆ. ಆದರೆ ರಿಕ್ಕಿ ರೈ (Ricky Rai) ಜಸ್ಟ್ ಮಿಸ್ ಆಗಿದ್ದು, ಕೊಲೆ ಯತ್ನದ ಹಿಂದೆ ಸಾಕಷ್ಟು ಸಂಶಯ ಹುಟ್ಟಿಕೊಂಡಿದೆ. ಫೈರಿಂಗ್​ನಲ್ಲಿ ಗಾಯಗೊಂಡಿರುವ ರಿಕ್ಕಿ ರೈ ಅವರು ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಪೊಲೀಸರು ಮಣಿಪಾಲ್​ ಆಸ್ಪತ್ರೆಗೆ ತೆರೆಳಿ ರಿಕ್ಕಿ ರೈ ಹೇಳಿಕೆ‌ ಪಡೆದಿದ್ದು, ಹಲವು ವಿಚಾರಗಳು ಬಹಿರಂಗಗೊಂಡಿವೆ.

ಆಸ್ತಿ ವಿಚಾರವಾಗಿ ಗುಂಡಿನ ದಾಳಿ ನಡೆದಿದೆ ಎಂದು ರಿಕ್ಕಿ ರೈ ಹೇಳಿದ್ದಾರೆ. ತಮ್ಮ ಮೇಲೆ ನಡೆದ ಗುಂಡಿನ ದಾಳಿ ಹಿಂದೆ ರಾಕೇಶ್ ಮಲ್ಲಿ, ಅನುರಾಧಾ, ನಿತೀಶ್ ಶೆಟ್ಟಿ, ವೈದ್ಯನಾಥನ್ ಕೈವಾಡವಿದೆ ಎಂದು ಆರೋಪಿಸಿದ್ದಾರೆ. “ನಾನು ರಷ್ಯಾದಲ್ಲಿದ್ದೆ, ಜಮೀನು ವಿವಾದ ಸಂಬಂಧ ಕೋರ್ಟ್‌ನಲ್ಲಿ ಕೇಸ್ ಇತ್ತು. ಹೀಗಾಗಿ, ನಾನು ರಷ್ಯಾದಿಂದ ಬೆಂಗಳೂರಿಗೆ ಬಂದಿದ್ದೆ. ನಾನು ಬೆಂಗಳೂರಿಗೆ ಬಂದಾಗ ಸದಾಶಿವನಗರ ಮತ್ತು ಬಿಡದಿಯಲ್ಲಿ ಇರುತ್ತೇನೆ. ಬಿಡದಿಯಿಂದ ಸದಾಶಿವನಗರದ ಮನೆಗೆ ಹೋಗುವಾಗ ದಾಳಿ ನಡೆದಿದೆ. ಗಾಯಗೊಂಡಿದ್ದ ನನ್ನನ್ನು ಸ್ನೇಹಿತರು, ಕಾರು ಚಾಲಕ ಆಸ್ಪತ್ರೆಗೆ ಸೇರಿಸಿದರು” ಎಂದು ರಿಕ್ಕಿ ರೈ ಹೇಳಿದ್ದಾರೆ.

ಘಟನೆ ಸಂಬಂಧ ರಿಕ್ಕಿ ರೈ ಅವರ ಕಾರು ಚಾಲಕ ಬಸವರಾಜು ಅವರು ಬಿಡದಿ ಪೊಲೀಸ್​ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಬಿಡದಿ ಪೊಲೀಸ್​ ಠಾಣೆಯಲ್ಲಿ ಈ ನಾಲ್ವರ ವಿರುದ್ಧ ಎಫ್​ಐಆರ್ ದಾಖಲಾಗಿದೆ. ಎಫ್​ಐಆರ್ ದಾಖಲಾಗುತ್ತಿದ್ದಂತೆ ಆರೋಪಿ ರಾಕೇಶ್ ಮಲ್ಲಿ ಫೋನ್​ ಸ್ವಿಚ್​ಆಫ್​ ಮಾಡಿಕೊಂಡಿದ್ದಾರೆ. ಇನ್ನು ಪ್ರಕರಣದ ಎರಡನೇ ಆರೋಪಿ ಅನುರಾಧಾ ವಿದೇಶಕ್ಕೆ ತೆರಳಿದ್ದಾರೆ.


Spread the love

About Laxminews 24x7

Check Also

ನಾಲ್ಕು ರಾಜ್ಯಗಳ ಉಪಚುನಾವಣೆ: ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ

Spread the loveಭಾರತೀಯ ಜನತಾ ಪಾರ್ಟಿ (ಬಿಜೆಪಿ) ಗೋವಾ ಸೇರಿದಂತೆ ನಾಲ್ಕು ರಾಜ್ಯಗಳ ಐದು ವಿಧಾನಸಭಾ ಕ್ಷೇತ್ರಗಳಿಗೆ ನಡೆಯಲಿರುವ ಉಪಚುನಾವಣೆಗಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ