Breaking News

ಕರ್ನಾಟಕ ರಾಜ್ಯ ಗೊಲ್ಲ (ಯಾದವ) ಹಣಬರ ಸಮಾಜದ ಶತಮಾನೋತ್ಸವ,

Spread the love

ಚಿಕ್ಕೋಡಿ ಪಟ್ಟಣದಲ್ಲಿ ರಾಜ್ಯಾಧ್ಯಕ್ಷರಾದ ಶ್ರೀ ಡಿ. ಟಿ. ಶ್ರೀನಿವಾಸ ಹಾಗೂ ಶ್ರೀಮತಿ ಪೂರ್ಣಿಮಾ ಶ್ರೀನಿವಾಸ ಅವರ ನೇತೃತ್ವದಲ್ಲಿ,

ಕರ್ನಾಟಕ ರಾಜ್ಯ ಗೊಲ್ಲ (ಯಾದವ) ಹಣಬರ ಸಮಾಜದ ಶತಮಾನೋತ್ಸವ, ಶ್ರೀ ಶ್ರೀ ಶ್ರೀ ಕೃಷ್ಣ ಯಾದವಾನಂದ ಸ್ವಾಮಿಗಳ 16ನೇ ಪಟ್ಟಾಭಿಷೇಕ ಮಹೋತ್ಸವ ಹಾಗೂ ರಾಜ್ಯ ಮಟ್ಟದ ಬೃಹತ್ ಯಾದವ ಹಣಬರ ಗೊಲ್ಲ ಸಮಾವೇಶ ಭವ್ಯವಾಗಿ ನಡೆಯಿತು.

ಈ ಮಹತ್ವದ ಸಮಾರಂಭದಲ್ಲಿ ರಾಜ್ಯದ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ, ಸಚಿವರಾದ ಸತೀಶ ಜಾರಕಿಹೊಳಿ ಅವರು ಹಾಗೂ ಗಣ್ಯರು ಜೊತೆಗೆ ಸೇರಿ ವೀರಕೇಸರಿ ಅಮಟೂರು ಬಾಳಪ್ಪ ಅವರ ಪ್ರತಿಮೆಯನ್ನು ಅನಾವರಣ ಗೊಳಿಸಲಾಯಿತು. ಯಾದವ ಸಮಾಜದ ಏಳಿಗೆ, ಒಗ್ಗಟ್ಟು ಹಾಗೂ ಹಕ್ಕುಗಳ ಕಾಪಾಡುವ ನಿಟ್ಟಿನಲ್ಲಿ ಈ ಸಮಾವೇಶ ದಿಕ್ಕು ತೋರಿಸುವ ಬೆಳಕು ಆಗಲಿ ಎಂಬ ಆಶಯವನ್ನು ವ್ಯಕ್ತಪಡಿಸುತ್ತೇವೆ.

ಸಚಿವರಾದ ಭೈರತಿ ಸುರೇಶ, ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಶಾಸಕರಾದ ಗಣೇಶ ಹುಕ್ಕೇರಿ, ಅಶೋಕ ಪಟ್ಟಣ, ಮತ್ತು ರಾಜು ಕಾಗೆ, ವಿ.ಪ. ಸದಸ್ಯ ನಾಗರಾಜ ಯಾದವ, ಉಪಸ್ಥಿತರಿದ್ದರು.

#priyankajarkiholi #Chikkdoi


Spread the love

About Laxminews 24x7

Check Also

ನಾಲ್ಕು ರಾಜ್ಯಗಳ ಉಪಚುನಾವಣೆ: ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ

Spread the loveಭಾರತೀಯ ಜನತಾ ಪಾರ್ಟಿ (ಬಿಜೆಪಿ) ಗೋವಾ ಸೇರಿದಂತೆ ನಾಲ್ಕು ರಾಜ್ಯಗಳ ಐದು ವಿಧಾನಸಭಾ ಕ್ಷೇತ್ರಗಳಿಗೆ ನಡೆಯಲಿರುವ ಉಪಚುನಾವಣೆಗಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ