Breaking News

ಕೊಲೆಯತ್ನ ಕೇಸ್: ಹೈಕೋರ್ಟ್​ ಮೊರೆ ಹೋದ ವಿಂಗ್ ಕಮಾಂಡರ್ ಶಿಲಾದಿತ್ಯ ಬೋಸ್

Spread the love

ಬೆಂಗಳೂರು, ಏಪ್ರಿಲ್ 25: ಕಾರಿಗೆ ಬೈಕ್ ಟಚ್ ಆಯ್ತು ಅನ್ನೋ ಕ್ಷುಲ್ಲಕ ಕಾರಣಕ್ಕೆ ವಿಂಗ್ ಕಮಾಂಡರ್ ಶಿಲಾದಿತ್ಯ ಬೋಸ್ (Wing Commander Shiladitya Bose)​ ಏಕಾಏಕಿ ಬೈಕ್ ಸವಾರ ವಿಕಾಸ್​​ ಮೇಲೆ ಹಲ್ಲೆ ಮಾಡಿದ್ದರು. ಈ ಘಟನೆ ಕರ್ನಾಟಕದಲ್ಲಿ ಸಾಕಷ್ಟು ಚರ್ಚೆಗೆ ಗ್ರಾಸವಾಗಿತ್ತು.

ಬಳಿಕ ಶಿಲಾದಿತ್ಯ ಬೋಸ್ ವಿರುದ್ಧ ಕೊಲೆಯತ್ನ ಕೇಸ್​ ದಾಖಲಾಗಿತ್ತು. ಸದ್ಯ ಈ ಕೊಲೆಯತ್ನ ಪ್ರಕರಣ ರದ್ದು ಕೋರಿ ಶಿಲಾದಿತ್ಯ ಬೋಸ್​ ಹೈಕೋರ್ಟ್​ಗೆ (High Cour) ಅರ್ಜಿ ಸಲ್ಲಿಸಿದ್ದು, ಅವರ ವಿರುದ್ಧ ಬಲವಂತದ ಕ್ರಮ ಕೈಗೊಳ್ಳಬಾರದು ಎಂದು ನ್ಯಾ. ಹೇಮಂತ್ ಚಂದನಗೌಡರ್ ಅವರಿದ್ದ ಹೈಕೋರ್ಟ್ ಪೀಠ ಮಧ್ಯಂತರ ಆದೇಶ ಹೊರಡಿಸಿದೆ. ಜೊತೆಗೆ ದೂರುದಾರ ವಿಕಾಸ್ ಕುಮಾರ್​ಗೂ ನೋಟಿಸ್ ಜಾರಿಗೆ ಆದೇಶಿಸಿದೆ.

ಶಿಲಾದಿತ್ಯ ಬೋಸ್ ಪರ ಹಿರಿಯ ವಕೀಲ ಅರುಣ್ ಶ್ಯಾಮ್ ವಾದ ಮಂಡಿಸಿದ್ದು, ವಿಕಾಸ್ ಹಲ್ಲೆಯಿಂದ ಶಿಲಾದಿತ್ಯ ಬೋಸ್​ಗೆ ಗಂಭೀರ ಗಾಯವಾಗಿದೆ. ವಿಕಾಸ್​ಗೆ ಸಣ್ಣ ಗಾಯವೆಂದು ಎಫ್ಐಆರ್​ನಲ್ಲೇ ಉಲ್ಲೇಖವಾಗಿದೆ. ಆದರೂ ಶಿಲಾದಿತ್ಯ ವಿರುದ್ಧ ಕೊಲೆಯತ್ನದ FIR ದಾಖಲಿಸಲಾಗಿದೆ. 12 ಗಂಟೆ ವಿಳಂಬವಾಗಿ ದೂರು ದಾಖಲಿಸಲಾಗಿದೆ ಎಂದು ವಾದ ಮಂಡಿಸಿದ್ದಾರೆ.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ