Breaking News

ತುಮಕೂರು: ಕೊಳಕುಮಂಡಲ ಹಾವು ಮತ್ತು 43 ಮರಿಗಳ ರಕ್ಷಣೆ

Spread the love

ತುಮಕೂರು : ನಗರದ ಮಹಾಲಕ್ಷ್ಮಿ ಬಡಾವಣೆಯ ವಾಸಿ ಶಿವಣ್ಣ ಟೈರ್ಸ್ ಮಾಲೀಕರಾದ ಕಾರ್ತಿಕ್ ಅವರ ಕಟ್ಟಡ ಕಾರ್ಮಿಕರ ಶೆಡ್​ನಲ್ಲಿ 4 ಅಡಿ ಉದ್ದದ ಕೊಳಕುಮಂಡಲ ಹಾವು ಹಾಗೂ ಅದರ 43 ಮರಿಗಳು ಕಾಣಿಸಿಕೊಂಡಿವೆ.

ಈ ವಿಷಯ ತಿಳಿದ ವನ್ಯಜೀವಿ ಜಾಗೃತಿ ಹಾಗೂ ಉರಗ ಸಂರಕ್ಷಣಾ ಸಂಸ್ಥೆಯ (ವಾರ್ಕೊ) ಉರಗ ರಕ್ಷಕರಾದ ಚಂದನ್, ಮನು ಅಗ್ನಿವಂಶಿ ಮತ್ತು ಕಾರ್ತಿಕ್ ಸಿಂಗ್ ಅವರು ಸುರಕ್ಷಿತವಾಗಿ ಹಾವಿನ ಮರಿಗಳನ್ನು ರಕ್ಷಿಸಿ, ಸಮೀಪದ ದೇವರಾಯನ ದುರ್ಗಾ ಅರಣ್ಯ ಪ್ರದೇಶಕ್ಕೆ ಬಿಟ್ಟಿದ್ದಾರೆ.

ಈ ಹಾವುಗಳು ನವೆಂಬರ್, ಡಿಸೆಂಬರ್​​ನಲ್ಲಿ ಮಿಲನಗೊಂಡು ಪೂರ್ವ ಮುಂಗಾರು ಸಮಯದಲ್ಲಿ ಸಂತಾನೋತ್ಪತಿ ಮಾಡುತ್ತವೆ. ಕೊಳಕುಮಂಡಲ ಹಾವುಗಳ(Ovoviviparous)ಲ್ಲಿ ತಾಯಿಯ ದೇಹದೊಳಗೆ ಮೊಟ್ಟೆಗಳು ಬೆಳೆದು ಹೊಟ್ಟೆ ಒಳಗಿನಿಂದಲೇ ಜೀವಂತ ಮರಿಗಳು ಹೊರಬರುತ್ತವೆ.

ತುಮಕೂರು ನಗರ ಹಾಗೂ ಹೊರವಲಯಗಳಲ್ಲಿ ಈ ಪ್ರಕ್ರಿಯೆ ಪ್ರಸ್ತುತ ಪ್ರಾರಂಭವಾಗಿದ್ದು, ಸಾರ್ವಜನಿಕರು ಹೆಚ್ಚು ಜಾಗೃತವಾಗಿರಬೇಕು, ಮನೆಯ ಸುತ್ತಮುತ್ತ ಸ್ವಚ್ಛತೆಯನ್ನು ಕಾಪಾಡಿಕೊಳ್ಳಬೇಕು. ಸಂಜೆ ಹಾಗೂ ಕತ್ತಲು ಸಮಯದಲ್ಲಿ ಟಾರ್ಚ್ ಬಳಸಿ ಹಾಗೂ ಶೂಗಳನ್ನು ಧರಿಸುವ ಮುನ್ನ ಪರೀಕ್ಷಿಸಿಕೊಳ್ಳಿ ಎಂದು ಉರಗ ರಕ್ಷಕ ಮನವಿ ಮಾಡಿಕೊಂಡಿದ್ದಾರೆ.


Spread the love

About Laxminews 24x7

Check Also

ಸಿದ್ದಗಂಗಾ ಮಠಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಭೇಟಿ

Spread the loveತುಮಕೂರಿನ ಸುಕ್ಷೇತ್ರ ಶ್ರೀ ಸಿದ್ದಗಂಗಾ ಮಠದಲ್ಲಿ ಗೌರವಾನ್ವಿತ ರಾಷ್ಟ್ರಪತಿಗಳಾದ  ದ್ರೌಪದಿ ಮುರ್ಮು ಅವರ‌ ಘನ ಉಪಸ್ಥಿತಿ ಹಾಗೂ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ