ಸಾರ್ವಜನಿಕ ಸ್ಥಳದಲ್ಲಿ ತಲ್ವಾರ್ ಝಳಪಿಸಿದ ಇಬ್ಬರು ಯುವಕರು ಅಂದರ್…
ಸಾರ್ವಜನಿಕ ಸ್ಥಳದಲ್ಲಿ ತಲ್ವಾರ್ ಝಳಪಿಸಿದ ಇಬ್ಬರು ಯುವಕರು
ಇಬ್ಬರನ್ನು ವಶಕ್ಕೆ ಪಡೆದ ಯಮಕನಮರ್ಡಿ ಪೊಲೀಸರು
ಶಾಂತಿಭಂಗಕ್ಕೆ ಯತ್ನಿಸಿದ ಆರೋಪ
ಯಮಕನಮರ್ಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು
ಸಾರ್ವಜನಿಕ ಸ್ಥಳದಲ್ಲಿ ಮಾರಕಾಸ್ತ್ರಗಳನ್ನು ಝಳಪಿಸಿ ಶಾಂತಿಭಂಗಕ್ಕೆ ಯತ್ನಿಸುತ್ತಿದ್ದ ಇಬ್ಬರನ್ನು ಯಮಕನಮರ್ಡಿ ಪೊಲೀಸರು ಬಂಧಿಸಿದ್ದಾರೆ.
ಯಮಕನಮರ್ಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಚಿಕ್ಕಲದಿನ್ನಿ ಗ್ರಾಮದ ಹಾಲಪ್ಪ ಕಾಟಾಬಳಿ ಮತ್ತು ನಾಗರಾಜ್ ಕಾಟಾಬಳಿ ಹುಕ್ಕೇರಿಯ ಶಹಾಬಂದರ ಕ್ರಾಸ್ ವಾಲ್ಮೀಕಿ ಸರ್ಕಲ್ ಹತ್ತಿರ ಮಾರಕಾಸ್ತ್ರಗಳನ್ನು ಝಳಪಿಸಿ, ಅವಾಚ್ಯ
ಶಬ್ಧಗಳಿಂದ ನಿಂದಿಸಿ ಶಾಂತಿ ಭಂಗಕ್ಕೆ ಯತ್ನಿಸಿದ ಆರೋಪದ ಹಿನ್ನೆಲೆ ಇವರನ್ನು ಪೊಲೀಸರು ಬಂಧಿಸಿದ್ದು, ಯಮಕನಮರ್ಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Laxmi News 24×7