Breaking News

ಆರ್​ಸಿಬಿ – ಸಿಎಸ್​ಕೆ ಪಂದ್ಯ: 1200 ರೂ. ಮುಖಬೆಲೆಯ ಟಿಕೆಟ್​ ₹12 ಸಾವಿರಕ್ಕೆ ಮಾರಾಟ, ನಾಲ್ವರ ಬಂಧನ

Spread the love

ಬೆಂಗಳೂರು: ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಇಂದಿನ ಆರ್​ಸಿಬಿ ಹಾಗೂ ಸಿಎಸ್​ಕೆ ನಡುವಿನ ಜಿದ್ದಾಜಿದ್ದಿನ ಪಂದ್ಯಕ್ಕೆ ಕಾಳಸಂತೆಯಲ್ಲಿ ಟಿಕೆಟ್ ಮಾರಾಟ ಮಾಡುತ್ತಿದ್ದ ನಾಲ್ವರು ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

Four accused arrested for selling IPL tickets at double the fixed price

ಚರಣ್ ರಾಜ್, ಹರ್ಷವರ್ಧನ್, ವಿನಯ್ ಹಾಗೂ ವೆಂಕಟಸ್ವಾಮಿ ಎಂಬುವರನ್ನು ಬಂಧಿಸಿ 38,400 ಮೌಲ್ಯದ 32 ಐಪಿಎಲ್ ಟಿಕೆಟ್​ಗಳು ಹಾಗೂ ನಾಲ್ಕು ಮೊಬೈಲ್ ಫೋನ್​ಗಳನ್ನು ವಶಕ್ಕೆ ಪಡೆದುಕೊಂಡಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.ಯಶವಂತಪುರದಲ್ಲಿ ಚರಣ್ ರಾಜ್ ಹಾಗೂ ಇನ್ನಿತರ ಆರೋಪಿಗಳು ಮಿಲ್ಲರ್ ರಸ್ತೆಯಲ್ಲಿ ಟಿಕೆಟ್​ಗಳನ್ನು ಮಾರಾಟ ಮಾಡುತ್ತಿದ್ದರು. 1,200 ರೂಪಾಯಿ ಮುಖಬೆಲೆಯ ಟಿಕೆಟ್ ಅನ್ನು 12 ಸಾವಿರಕ್ಕೆ ಮಾರಾಟ ಮಾಡಿ ಅಕ್ರಮವಾಗಿ ಹಣ ಸಂಪಾದನೆ ಮಾಡಿಕೊಳ್ಳುತ್ತಿದ್ದರು.

IPL tickets and mobile phones seized

ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿ ದಂಧೆಕೋರರನ್ನು ಬಂಧಿಸಲಾಗಿದೆ. ಆರೋಪಿಗಳ ವಾಟ್ಸಾಪ್ ಪರಿಶೀಲಿಸಿದಾಗ ಈ ಹಿಂದೆ ಐಪಿಎಲ್ ಟಿಕೆಟ್ ಮಾರಾಟ ಮಾಡಿರುವ ಸಾಕ್ಷ್ಯಾಧಾರ ದೊರಕಿವೆ. ಆರೋಪಿಗಳಿಗೆ ಟಿಕೆಟ್ ಎಲ್ಲಿ? ಮತ್ತು ಹೇಗೆ ಖರೀದಿ ಮಾಡುತ್ತಿರುವ ಎಂಬುದರ ಬಗ್ಗೆ ಹೆಚ್ಚಿನ ವಿಚಾರಣೆಗೊಳಪಡಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.


Spread the love

About Laxminews 24x7

Check Also

ಎನ್.ಕೆ. ಎಜುಕೇಶನ್ ಸೊಸೈಟಿಯ ಎಸ್‌ಎಸ್‌ಎ ಪಿಯು ಕಾಲೇಜಿನ ಅದ್ಭುತ ಫಲಿತಾಂಶ

Spread the loveಎನ್.ಕೆ. ಎಜುಕೇಶನ್ ಸೊಸೈಟಿಯ ಎಸ್‌ಎಸ್‌ಎ ಪಿಯು ಕಾಲೇಜಿನ ಅದ್ಭುತ ಫಲಿತಾಂಶ ಬೆಳಗಾವಿ: ಎನ್.ಕೆ. ಎಜುಕೇಶನ್ ಸೊಸೈಟಿಯ ಅಧೀನದಲ್ಲಿರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ