Breaking News

ನೀಟ್​ ಪರೀಕ್ಷೆಯಲ್ಲೂ ಜನಿವಾರ ತೆಗೆಸಿದ ಆರೋಪ: ಕಲಬುರಗಿಯಲ್ಲಿ ರಸ್ತೆಯಲ್ಲೇ ಕುಳಿತು ಆಕ್ರೋಶ, ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

Spread the love

ಕಲಬುರಗಿ: ಬೀದರ್​​ನಲ್ಲಿ ಇತ್ತೀಚೆಗೆ ಸಿಇಟಿ ಪರೀಕ್ಷೆ ಬರೆಯಲು ಬಂದ ವಿದ್ಯಾರ್ಥಿಗೆ ಜನಿವಾರ ತೆಗೆಸಿದ್ದ ಪ್ರಕರಣ ಮಾಸುವ ಮುನ್ನವೇ ಕಲಬುರಗಿಯಲ್ಲಿ ಅದೇ ರೀತಿಯ ಆರೋಪ ಕೇಳಿಬಂದಿದೆ. ಭಾನುವಾರ ನೀಟ್ ಪರೀಕ್ಷೆ ಬರೆಯಲು ಬಂದಿದ್ದ ವಿದ್ಯಾರ್ಥಿಗೆ ಜನಿವಾರ ತೆಗೆಯುವಂತೆ ಹೇಳಲಾಗಿದೆ ಎಂದು ಆರೋಪಿಸಲಾಗಿದೆ.

ಬೇಕೇ ಬೇಕು.. ನ್ಯಾಯ ಬೇಕು ಅಂತ ಘೋಷಣೆ ಕೂಗುತ್ತ ನಿಂತಿರೋ ಹಿಂದೂ ಕಾರ್ಯಕರ್ತರು.. ಮತ್ತೊಂದೆಡೆ, ಜನಿವಾರವನ್ನು ಕೈಯಲ್ಲಿ ಹಿಡಿದುಕೊಂಡು ನಿಂತಿರುವ ವಿದ್ಯಾರ್ಥಿಯ ತಂದೆ.. ಈ ದೃಶ್ಯ ಕಂಡು ಬಂದಿದ್ದು ಕಲಬುರಗಿಯ ಸೈಂಟ್ ಮೇರಿ ಶಾಲೆಯ ಮುಂಭಾಗದಲ್ಲಿ.

ಬೀದರ್ ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ಶ್ರೀಪಾದ ಪಾಟೀಲ್​ ಎಂಬ ವಿದ್ಯಾರ್ಥಿಗೆ ನೀಟ್​ ಪರೀಕ್ಷೆಯಲ್ಲಿ ಜನಿವಾರ ವಿಚಾರವಾಗಿ ಸಮಸ್ಯೆಯಾಗಿದೆ ಎಂಬ ಆರೋಪ ಕೇಳಿಬಂದಿದೆ. ಈ ವಿದ್ಯಾರ್ಥಿ ನೀಟ್ ಪರೀಕ್ಷೆ ಬರೆಯಲು ಕಲಬುರಗಿಗೆ ಬಂದಿದ್ದ. ಮಧ್ಯಾಹ್ನ 1 ಗಂಟೆಗೆ ಪರೀಕ್ಷಾ ಕೇಂದ್ರಕ್ಕೆ ಎಂಟ್ರಿ ಆಗುವ ಸಂದರ್ಭದಲ್ಲಿ ಜನಿವಾರ ತೆಗೆದು ಬನ್ನಿ ಅಂತ ಪರೀಕ್ಷಾ ಸಿಬ್ಬಂದಿ ಹೇಳಿದ್ದಾರೆ. ಜನಿವಾರ ತೆಗೆದು ಬರದಿದ್ರೆ ಪರೀಕ್ಷೆ ಬರೆಯಲು ಅವಕಾಶ ನೀಡಲ್ಲ ಅಂತ ಹೇಳಿದ್ದಕ್ಕೆ ನನ್ನ ಮಗ ಪರೀಕ್ಷೆ ಬರಿಯಲ್ಲ ಅಂತ ಹೇಳಿದ್ದ. ಆದ್ರೆ ಪರೀಕ್ಷೆ ಬರೆಯಲ್ಲ ಅಂದ್ರೆ ಸರಿಯಲ್ಲ, ಒಂದು ವರ್ಷದಿಂದ ನೀನು ಪರೀಕ್ಷೆಗೆ ತಯಾರಿ ಮಾಡಿದಿಯಾ. ಮೊದ್ಲು ಹೋಗಿ ಪರೀಕ್ಷೆ ಬರಿ ಅಂತ ಮಗನಿಗೆ ಸಮಜಾಯಿಸಿ ಹೇಳಿ ಪರೀಕ್ಷೆ ಬರೆಯಲು ಕಳುಹಿಸಿದ್ದೆ ಅಂತಾ ನೊಂದ ವಿದ್ಯಾರ್ಥಿಯ ಶ್ರೀಪಾದ್​ ಅವರ ತಂದೆ ಸುಧೀರ್​ ಪಾಟೀಲ್ ಹೇಳಿದರು.


Spread the love

About Laxminews 24x7

Check Also

ಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ!

Spread the loveಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ! …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ