Breaking News

ಲಂಚ ಪಡೆಯುತ್ತಿದ್ದ ಕುಂದಗೋಳ ತೋಟಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕನನ್ನು ಎಸಿಬಿ ಅಧಿಕಾರಿಗಳು ಬಂಧಿಸಿದ್ದಾರೆ.

Spread the love

ಹುಬ್ಬಳ್ಳಿ (ಡಿ. 16): ಲಂಚ ಪಡೆಯುತ್ತಿದ್ದ ಕುಂದಗೋಳ ತೋಟಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕನನ್ನು ಎಸಿಬಿ ಅಧಿಕಾರಿಗಳು ಬಂಧಿಸಿದ್ದಾರೆ. ಹುಬ್ಬಳ್ಳಿಯ ಮುತ್ತುಗೌಡ ಗಂಗನಗೌಡರ ಎಂಬುವವರ ಜಮೀನು ಕುಂದಗೋಳದ ಬೆಳ್ಳಿಗಟ್ಟಿ ಬಳಿ ಇದೆ‌. ಹೆದ್ದಾರಿ ನಿರ್ಮಾಣ ಕಾಮಗಾರಿಗೆ ಹೆದ್ದಾರಿ ಪ್ರಾಧಿಕಾರದವರು ಜಮೀನನ್ನು ವಶಕ್ಕೆ ಪಡೆದಿದ್ದಾರೆ. ಜಮೀನು ಸ್ವಾಧೀನ ಪಡಿಸಿಕೊಂಡ ನಂತರ ಅದರಲ್ಲಿ ಎಷ್ಟು ಮರಗಳಿದ್ದವು ಎಂಬ ಮಾಹಿತಿಯನ್ನ ತೋಟಗಾರಿಕೆ ಇಲಾಖೆಯಿಂದ ಪಡೆಯಬೇಕಿತ್ತು. ಮರಗಳ ಮಾಹಿತಿ ನೀಡಿದರೆ ಹೆದ್ದಾರಿ ಪ್ರಾಧಿಕಾರದವರು ಪರಿಹಾರ ಹಣವನ್ನು ಕೊಡುತ್ತಿದ್ದರು. ಮಾಹಿತಿ ನೀಡಲು‌ ತೋಟಗಾರಿಕೆ ಇಲಾಖೆ ಸಹಾಯಕ ನಿರ್ದೇಶಕ ಪರಶುರಾಮ ಹಲಕುರ್ಕಿ ಲಂಚದ ಹಣ ಕೇಳಿದ್ದರು.

ಮುತ್ತುಗೌಡನ ಬಳಿ 50 ಸಾವಿರಕ್ಕೆ ಡಿಮ್ಯಾಂಡ್ ಮಾಡಿದ್ದ ಅಧಿಕಾರಿಗೆ ಮೊದಲು 10 ಸಾವಿರ ರೂಪಾಯಿ ಕೊಡಲಾಗಿತ್ತು. ಉಳಿದ 40 ಸಾವಿರ ರೂಪಾಯಿ ಕೊಡುವಾಗ ಎಸಿಬಿ ದಾಳಿ ನಡೆದಿದ್ದು, ಅಧಿಕಾರಿ ಹಣದ ಸಮೇತ ಸಿಕ್ಕು ಬಿದ್ದಿದ್ದಾನೆ. ಎಸಿಬಿ ಡಿಎಸ್ಪಿ ವೇಣುಗೋಪಾಲ, ಇನ್ಸಪೆಕ್ಟರ್‌ಗಳಾದ ಜಾಧವ ಮತ್ತು ಹಿರೇಮಠ ಅವರು ದಾಳಿಯಲ್ಲಿ ಭಾಗವಹಿಸಿದ್ದರು.


Spread the love

About Laxminews 24x7

Check Also

ಧಾರವಾಡ 10ನೇವಾರ್ಡನ್ ಶಿವಶಕ್ತಿ ನಗರದ ಫಲಾನುಭವಿಗಳಿಗೆ ಹಕ್ಕು ಪತ್ರ ವಿತರಣೆ.. 41 ಕುಟುಂಬಗಳಿಗೆ ಹಕ್ಕು ಪತ್ರ ವಿತರಣೆ ಮಾಡಿದ ಶಾಸಕ ಅರವಿಂದ ಬೆಲ್ಲದ.

Spread the love ಧಾರವಾಡ 10ನೇವಾರ್ಡನ್ ಶಿವಶಕ್ತಿ ನಗರದ ಫಲಾನುಭವಿಗಳಿಗೆ ಹಕ್ಕು ಪತ್ರ ವಿತರಣೆ.. 41 ಕುಟುಂಬಗಳಿಗೆ ಹಕ್ಕು ಪತ್ರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ