ದಾವಣಗೆರೆ: ವೈಯಕ್ತಿಕ ದ್ವೇಷ ಹಾಗೂ ಹಣಕಾಸಿನ ವ್ಯವಹಾರ ಸಂಬಂಧ ರೌಡಿಶೀಟರ್ ಸಂತೋಷ್ ಕುಮಾರ್ ಆಲಿಯಾಸ್ ಕಣುಮ ಕೊಲೆಯಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಈವರೆಗೂ ಒಟ್ಟು 20 ಜನರನ್ನು ಬಂಧಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್ ತಿಳಿಸಿದರು.
ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕೊಲೆ ಮಾಡಿದವರು ಸೇರಿ 10 ಮಂದಿಯನ್ನು ಈಗಾಗಲೇ ವಿದ್ಯಾನಗರ ಠಾಣೆಯ ಪೊಲೀಸರು ಬಂಧಿಸಿದ್ದರು. ಇದೀಗ ಘಟನೆ ಸಂಬಂಧ ಒಟ್ಟು 20 ಜನರನ್ನು ಬಂಧಿಸಲಾಗಿದೆ. ಬಂಧಿತರನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದೇವೆ. ಪೊಲೀಸ್ ಕಸ್ಟಡಿಗೆ ತೆಗೆದುಕೊಂಡು ಹೆಚ್ಚಿನ ತನಿಖೆ ಮಾಡಬೇಕಿದೆ ಎಂದರು.ವೈಯಕ್ತಿಕ ದ್ವೇಷ ಮತ್ತು ಹಣಕಾಸಿನ ವ್ಯವಹಾರದಲ್ಲಿ ಜಗಳದ ಕಾರಣದಿಂದ ಆರೋಪಿಗಳು ಕೊಲೆ ಮಾಡಿದ್ದಾರೆ. ಕೆಲವರು ಘಟನಾ ಸ್ಥಳಕ್ಕಾಗಮಿಸಿ ಕೊಲೆ ಮಾಡಿದ್ದಾರೆ. ಚಾವಳಿ ಸಂತು ಈ ಕೊಲೆಯ ಪ್ರಮುಖ ಆರೋಪಿಯಾಗಿದ್ದಾನೆ. ಕೆಲ ವಿಚಾರಕ್ಕೆ ನಮ್ಮ ಮೇಲೆ ದಬ್ಬಾಳಿಕೆ ಮಾಡ್ತಿದ್ದರಿಂದ ಕೊಲೆ ಮಾಡಿದ್ದೇವೆ ಎಂದು ಚಾವಳಿ ಸಂತು ತಪ್ಪೊಪ್ಪಿಕೊಂಡಿದ್ದಾನೆ ಎಂದು ಹೇಳಿದರು.
Laxmi News 24×7