Breaking News

ನವಲಗುಂದ ಪಟ್ಟಣದ ಬೈಪಾಸ್ ರಸ್ತೆಗೆ ಕೇಂದ್ರದಿಂದ ಗ್ರೀನ್ ಸಿಗ್ನಲ್:ಜೋಶಿ

Spread the love

ನವಲಗುಂದ ಪಟ್ಟಣದ ಬೈಪಾಸ್ ರಸ್ತೆಗೆ ಕೇಂದ್ರದಿಂದ ಗ್ರೀನ್ ಸಿಗ್ನಲ್… ರಾಜ್ಯ ಸರ್ಕಾರ ಟೆಂಡರ್ ಕರೆದು ಕಾಮಗಾರಿ ಆರಂಭಿಸಲು ಕೇಂದ್ರ ಸಚಿವ ಜೋಶಿ ಅಗ್ರಹ
ಧಾರವಾಡ ಜಿಲ್ಲೆ ನವಲಗುಂದ ಪಟ್ಟಣದ ಬೈಪಾಸ್ ರಸ್ತೆ ನಿರ್ಮಾಣಕ್ಕಾಗಿ ಈ ಹಿಂದೆಯೇ ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರಿಗೆ ಪ್ರಸ್ತಾವನೆ ಸಲ್ಲಿಸಲಾಗಿತ್ತು. ಅದರಂತೆ ಇದೀಗ ಕಾಮಗಾರಿಗೆ ಅನುಮೋದನೆ ದೊರಕಿದೆ ಎಂದು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಲಾದ ಜೋಶಿ ತಿಳಿಸಿದ್ದಾರೆ.
ಈ ಕುರಿತು ಸೊಸಿಯಲ್ ಮೀಡೊಯಾದಲ್ಲಿ ಮಾಹಿತಿ ಹಂಚಿಕೊಂಡರುವ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಯವರು, ಈ ಬೈಪಾಸ್ ಸಂಬಂಧ ಸಲ್ಲಿಸಿದ್ದ ಜೋಡಣೆ ಮತ್ತು ವಿವರವಾದ ಯೋಜನಾ ವರದಿಗೆ ಸಚಿವಾಲಯದ ಉನ್ನತ ಸಮಿತಿ ಅನುಮೋದನೆ ನೀಡಿದೆ. ನವಲಗುಂದ ಪಟ್ಟಣಕ್ಕೆ 10.575 ಕಿ.ಮೀ. ಉದ್ದದ ಬೈಪಾಸ್‌ ರಸ್ತೆ ನಿರ್ಮಾಣವಾಗಲಿದೆ. ಬೆಣ್ಣೆಹಳ್ಳ ಮತ್ತು ಅದನ್ನು ಸೇರುವ ಸಣ್ಣನಾಲಾಗಳು ಮಳೆಗಾಲದಲ್ಲಿ ತುಂಬಿ ಹರಿದು ಪ್ರವಾಹ ಪರಿಸ್ಥಿತಿ ಎದುರಾಗುತ್ತಿತ್ತು.
ಇದರಿಂದ ಕೃಷಿ ಭೂಮಿಯಲ್ಲಿ ಬೆಳೆ ಹಾನಿ ಸಂಭವಿಸುತ್ತಿತ್ತು ಮತ್ತು ಅನೇಕ ಕಡೆ ಸಂಪರ್ಕ ಕಡಿತಗೊಳ್ಳುತ್ತಿತ್ತು. ಇದಕ್ಕೆ ಶಾಶ್ವತ ಪರಿಹಾರ ಕಂಡುಕೊಳ್ಳಲು ಬೈಪಾಸ್ ನಿರ್ಮಾಣಕ್ಕೆ ಪ್ರಯತ್ನ ನಡೆಸಲಾಗಿತ್ತು ಎಂದು ಅವರು ಹೇಳಿದ್ದಾರೆ.

Spread the love

About Laxminews 24x7

Check Also

ಹಾಸ್ಟೆಲ್ ನಾಲ್ಕನೇ ಮಹಡಿಯಿಂದ ಬಿದ್ದು ವಿದ್ಯಾರ್ಥಿಯೊಬ್ಬ ಮೃತಪಟ್ಟಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.

Spread the loveಹುಬ್ಬಳ್ಳಿ: ಕಾಲೇಜಿನ ವಿದ್ಯಾರ್ಥಿಯೊಬ್ಬ ಹಾಸ್ಟೆಲ್ ನಾಲ್ಕನೇ ಮಹಡಿಯಿಂದ ಬಿದ್ದು ಅನುಮಾನಸ್ಫದವಾದ ರೀತಿಯಲ್ಲಿ ಸಾವನ್ನಪ್ಪಿದ ಘಟನೆ ಭೈರಿದೇರಕೊಪ್ಪದಲ್ಲಿರುವ ಸನಾ ಕಾಲೇಜಿನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ