Breaking News

ಬರಡು ನೆಲದ ಬಸವನಬಾಗೇವಾಡಿ ಬಂಗಾರದ ಕಡ್ಡಿಯಾಗಲಿದೆ: ಸಚಿವ ಶಿವಾನಂದ ಪಾಟೀಲ

Spread the love

ಬರಡು ನೆಲದ ಬಸವನಬಾಗೇವಾಡಿ ಬಂಗಾರದ ಕಡ್ಡಿಯಾಗಲಿದೆ: ಸಚಿವ ಶಿವಾನಂದ ಪಾಟೀಲ
ಕೃಷ್ಣಾ ಮೇಲ್ದಂಡೆ ಯೋಜನೆಯಿಂದಾಗಿ ಮುಳುಗಡೆಯಾಗಿರುವ ವಿಜಯಪುರ ಜಿಲ್ಲೆಯ ಕೊಲ್ಹಾರ ಪುರ್ನವಸತಿ ಪಟ್ಟಣ ನಿರ್ಮಾಣವಾಗಿ 25 ವರ್ಷ ಕಳೆದಿವೆ. ಈ ನನ್ನ ಅವಧಿಯಲ್ಲಿ ಕೊಲ್ಹಾರ ಪಟ್ಟಣ ಸಮಗ್ರ ಅಭಿವೃದ್ಧಿ ಯಾಗಿದ್ದು, ಮೇ 23 ರಂದು ಬೃಹತ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಲಿದ್ದಾರೆ ಎಂದು ಸಕ್ಕರೆ, ಕಬ್ಬು ಅಭಿವೃದ್ಧಿ ಹಾಗೂ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ಹೇಳಿದರು.
ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ ಪಟ್ಟಣದ ಗವಿಮಠದ ಶ್ರೀಪವಾಡ ಬಸವೇಶ್ವರ ಕಲ್ಯಾಣ ಮಂಟಪದಲ್ಲಿ ಹಮ್ಮಿ ಕೊಂಡಿದ್ದ ರಾಜ್ಯ ಸರ್ಕಾರದ ದ್ವಿತಿಯ ವರ್ಷದ ಸಾಧನೆ ಸಮಾವೇಶ ನಡೆಯಲಿರುವ ಹೊಸಪೇಟೆ ಬೃಹತ್ ಸಮಾವೇಶದ ಪೂರ್ವ ಸಿದ್ಧತಾ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಕೊಲ್ಹಾರದಲ್ಲಿ ನಡೆಯಲಿರುವ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳ ಅನುಷ್ಠಾನ ಸಮಾವೇಶಕ್ಕೆ ಶೀಘ್ರವೇ ಪೂರ್ವ ಸಿದ್ಧತಾ ಸಭೆ ಕರೆಯುವುದಾಗಿ ಹೇಳಿದರು. ಸ್ವಯಂ ಕೊಲ್ಹಾರ ಪಟ್ಟಣದವರನ್ನೇ ಶಾಸಕರನ್ನಾಗಿ ಮಾಡಿದರೂ ಪುನರ್ವಸತಿ ಗ್ರಾಮದ ಅಭಿವೃದ್ಧಿ ಮಾಡಲಾಗಿರಲಿಲ್ಲ.
ನಾನು ಬಸವನಬಾಗೇವಾಡಿ ಕ್ಷೇತ್ರದ ಶಾಸಕನಾಗಿ ಆಯ್ಕೆಯಾಗುತ್ತಲೇ ಕೊಲ್ಹಾರ ಪಟ್ಟಣದ ಸಮಗ್ರ ಅಭಿವೃದ್ಧಿಗೆ ಆಧ್ಯತೆ ನೀಡಿದ್ದೇನೆ. ಇಡೀ ಕೃಷ್ಣಾ ಮೇಲ್ದಂಡೆ ಯೋಜನೆಯ ಮುಳುಗಡೆ ಪ್ರದೇಶಗಳಲ್ಲಿ ಬಾಗಲಕೋಟೆ ನಗರವನ್ನು ಹೊರತುಪಡಿಸಿದರೆ ಕೊಲ್ಹಾರ ಪಟ್ಟಣವೇ ಸಮಗ್ರ ಅಭಿವೃದ್ಧಿ ಕಂಡಿರುವ ಬೃಹತ್ ಪುನರ್ವತಿ ಕೇಂದ್ರ ಎನಿಸಿದೆ. ಪಟ್ಟಣ ಪಂಚಾಯತ್ ದರ್ಜೆ ಸ್ಥಾನ ನೀಡಿದ್ದು, ತಾಲೂಕ ಕೇಂದ್ರವಾಗಿ ರೂಪಿಸಿ ಜನತೆ ಆಶಯದಂತೆ ಸಮಗ್ರ ಅಭಿವೃದ್ಧಿ ಮಾಡುವ ಬದ್ಧತೆ ತೋರಿದ್ದೇನೆ ಎಂದರು. ಹುಸಿ ಭರವಸೆಗಳ ಮೂಲಕ ಜನರನ್ನು ದಾರಿ ತಪ್ಪಿಸುತ್ತಿದ್ದ ಬಿಜೆಪಿ ಸರ್ಕಾರದ ಅವಧಿಯಲ್ಲಿ ಅಂದಾಜು ಪತ್ರಿಕೆಯೂ ಇಲ್ಲದೇ 70 ಸಾವಿರ ಕೋಟಿ ರೂ. ವೆಚ್ಚದ ಯೋಜನೆ ಘೋಷಿಸಿ, ಬಿಟ್ಟು ಹೋಗಿದ್ದರು. ಆದರೆ ನಾವು ಬಂದಮೇಲೆ ಅವರು ಘೋಷಿಸಿದ ಯೋಜನೆಗಳನ್ನು ಮುಗಿಸಿ, ಬಿಲ್ ಪಾವತಿಸಿದ್ದೇವೆ. ಬಿಜೆಪಿ ನಾಯಕರು ಪಂಚ ಗ್ಯಾರಂಟಿ ಯೋಜನೆಗಳಿಂದ ಖಜಾನೆ ಬರಿದು ಎಂದು ಆರೋಪಿಸಿದರೂ, ಸಿದ್ಧರಾಮಯ್ಯ-ಡಿ.ಕೆ.ಶಿವಕುಮಾರ ನೇತೃತ್ವದಲ್ಲಿ ನಮ್ಮ ಸರ್ಕಾರ ಬಡವರು ಕಲ್ಯಾಣ ಕಾರ್ಯಕ್ರಮಗಳನ್ನು ಅನುಷ್ಠಾನಕ್ಕೆ ತಂದಿದ್ದು, ಇತರೆ ಯೋಜನೆಗಳಿಗೂ ಅನುದಾನ ನೀಡುತ್ತಿದೆ.
ಆದರೆ ಬಡವರ ಪರ ಕಾರ್ಯಕ್ರಮಗಳನ್ನು ಅಮರ್ಥವಾಗಿ ಅನುಷ್ಠಾನಕ್ಕೆ ತಂದಿರುವುದನ್ನು ಬಿಜೆಪಿ ಪಕ್ಷದವರಿಗೆ ಸಹಿಸಲು ಸಾಧ್ಯವಾಗುತ್ತಿಲ್ಲ ಎಂದು ವಾಗ್ದಾಳಿ ನಡೆಸಿದರು. ಇನ್ನೂ ಸರ್ಕಾರದ ದ್ವಿತಿಯ ವರ್ಷದ ಸಾಧನಾ ಸಮಾವೇಶದ ಪೂರ್ವ ಸಿದ್ಧತಾ ಸಭೆಗೆ ಚಾಲನೆ ನೀಡಿದ ಕಾನೂನು, ಪ್ರವಾಸೋದ್ಯಮ ಸಚಿವ ಎಚ್.ಕೆ.ಪಾಟೀಲ, ರಾಜ್ಯದ ಜನತೆಗೆ ಪಂಚ ಗ್ಯಾರಂಟಿ ಯೋಜನೆ ಅನುಷ್ಠಾನದ ಕುರಿತು ಚುನಾವಣೆಯಲ್ಲಿ ಸಂಕಲ್ಪ ಮಾಡಿದಂತೆ ನಾವು ನೀಡಿದ ಲಿಖಿತ ಭರವಸೆಗಳನ್ನು ಅಧಿಕಾರಕ್ಕೆ ಬಂದ ಮೂರು ತಿಂಗಳಲ್ಲಿ ಸಂಪೂರ್ಣ ಜಾರಿಗೆ ತಂದಿದ್ದೇವೆ. ಸರ್ಕಾರ ಎರಡು ವರ್ಷಗಳನ್ನು ಪೂರೈಸಿರುವ ಈ ಹಂತದಲ್ಲಿ ಹೊಸಪೇಟೆಯಲ್ಲಿ ಮೇ 20 ರಂದು ಬೃಹತ್ ಸಮಾವೇಶ ಹಮ್ಮಿಕೊಂಡಿದ್ದು, ನಿಮಗೆಲ್ಲ ಆಹ್ವಾನ ಕೊಡಲು ಇಲ್ಲಿಗೆ ಬಂದಿದ್ದೇನೆ. ಐತಿಹಾಸಿಕವಾಗಲಿರುವ ಈ ಸಮಾವೇಶಕ್ಕೆ ಆಗಮಿಸಿ ನೀವೆಲ್ಲ ಸಾಕ್ಷಿಯಾಗಬೇಕು ಎಂದು ಮನವಿ ಮಾಡಿದರು.
ಗ್ಯಾರಂಟಿ ಯೋಜನೆಗಳಿಂದ ರಾಜ್ಯದ ಬೊಕ್ಕಸ ಬರಿದಾಗಿ, ಸರ್ಕಾರ ಪತನವಾಗಲಿದೆ ಎಂದು ಬಿಜೆಪಿ ಟೀಕೆಗೆ ನಮ್ಮ ಸರ್ಕಾರ ಸತತ ಎರಡು ವರ್ಷವೂ ಯೋಜನೆ ಅನುಷ್ಠಾನ ಮಾಡಿ ತಕ್ಕ ಉತ್ತರ ನೀಡಿದೆ. ಸರ್ಕಾರವೂ ಸುಭದ್ರವಾಗಿದೆ, ಭ್ರಷ್ಟಾಚಾರಕ್ಕೆ ಅವಕಾಶ ಇಲ್ಲದಂತೆ, ಮಧ್ಯವರ್ತಿಗಳಿಲ್ಲದೇ ಪಂಚ ಗ್ಯಾರಂಟಿ ಯೋಜನೆಗಳನ್ನು ಶೇ.98.5 ರಷ್ಟು ಅನುಷ್ಠಾನ ಮಾಡಿದ್ದು, 1.20 ಕೋಟಿ ಕುಟುಂಬಗಳನ್ನು ಬಡತನರೇಖೆಗಿಂತ ಮೇಲೆತ್ತಿದ್ದು, ಇದು ನಮ್ಮ ಸರ್ಕಾರದ ಐತಿಹಾಸಿಕ ಸಾಧನೆ ಎಂದು ಬಣ್ಣಿಸಿದರು.
ಈ ಸಂದರ್ಭದಲ್ಲಿ ಜಿ.ಪಂ. ಮಾಜಿ ಅಧ್ಯಕ್ಷರಾದ ಚಂದ್ರಶೇಖರ ಪಾಟೀಲ, ಜಿ.ಪಂ. ಮಾಜಿ ಸದಸ್ಯರಾದ ಕಲ್ಲಪ್ಪ ದೇಸಾಯಿ, ಬಸವನ ಬಾಗೇವಾಡಿ ಪುರಸಭೆ ಅಧ್ಯಕ್ಷೆ ಜಗದೇವಿ ಗುಂಡಳ್ಳಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಬಸವನಬಾಗೇವಾಡಿಯ ಅಶೋಕ ಹಾರಿವಾಳ, ಕೊಲ್ಹಾರದ ರಫೀಕ್ ಪಕಾಲಿ, ಪಕ್ಷದ ಮುಖಂಡರಾದ ಐ.ಸಿ.ಪಟ್ಟಣಶೆಟ್ಟಿ, ಎ.ಎಂ.ಪಾಟೀಲ ಉಕ್ಕಲಿ, ಗ್ರಾಮೀಣ ವಿದ್ಯಾವರ್ಧಕ ಸಂಘದ ಅಧ್ಯಕ್ಷರಾದ ಸಿದ್ಧಣ್ಣ ನಾಗಠಾಣ, ಗಣ್ಯ ವ್ಯಾಪಾರಿಗಳಾದ ಲೋಕನಾಥ ಅಗರವಾಲ್, ರಮೇಶ ಸೂಳಿಭಾವಿ, ಸಂಗಮೇಶವ ಓಲೇಕಾರ, ಶ್ರೀಶಿವಾನಂದ ಪಾಟೀಲ ಅಭಿಮಾನಿ ಬಳಗದ ಅಧ್ಯಕ್ಷ ತಾನೋಜಿ ಸೇರಿದಂತೆ ಇತರರು ಉಪಸ್ಥಿತರಿದ್ದರು.

Spread the love

About Laxminews 24x7

Check Also

ಎನ್.ಕೆ. ಎಜುಕೇಶನ್ ಸೊಸೈಟಿಯ ಎಸ್‌ಎಸ್‌ಎ ಪಿಯು ಕಾಲೇಜಿನ ಅದ್ಭುತ ಫಲಿತಾಂಶ

Spread the loveಎನ್.ಕೆ. ಎಜುಕೇಶನ್ ಸೊಸೈಟಿಯ ಎಸ್‌ಎಸ್‌ಎ ಪಿಯು ಕಾಲೇಜಿನ ಅದ್ಭುತ ಫಲಿತಾಂಶ ಬೆಳಗಾವಿ: ಎನ್.ಕೆ. ಎಜುಕೇಶನ್ ಸೊಸೈಟಿಯ ಅಧೀನದಲ್ಲಿರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ