Breaking News

ಈ ವೇಳೆ ರಾಹುಲ್​ ಗಾಂಧಿಯವರಿಗೆ ಮಾತನಾಡದಲು ಸಮಿತಿ ಅಧ್ಯಕ್ಷರು ಅವಕಾಶ ನೀಡಲಿಲ್ಲ. ಈ ಹಿನ್ನಲೆ ಕಾಂಗ್ರೆಸ್​ ನಾಯಕರು ಸಭೆಯಿಂದ ಹೊರ ನಡೆಯಲು ನಿರ್ಧರಿಸಿದರು ಎಂದು ಅವರು ತಿಳಿಸಿದ್ದಾರೆ. ಈ ವೇಳೆ ಮತ್ತಿಬ್ಬರು ನಾಯಕರಾದ ಸತ್ವ ಹಾಗೂ ರೆಡ್ಡಿ ಕೂಡ ಅವರ ಹಾದಿ ಹಿಡಿದರು.

Spread the love

ರಕ್ಷಣಾ ಸಂಸದೀಯ ಸಮಿತಿ ಸಭೆಯಿಂದ ಮಧ್ಯಭಾಗದಲ್ಲಿಯೇ ಕಾಂಗ್ರೆಸ್​ ನಾಯಕ ರಾಹುಲ್​ ಗಾಂಧಿ ಹೊರ ನಡೆದಿದ್ದಾರೆ. ಇವರ ಜೊತೆಗೆ ಕಾಂಗ್ರೆಸ್​ ಸಂಸದರಾದ ರಾಜೀವ್​ ಸತ್ವ ಹಾಗೂ ರೇವಂತ್​ ರೆಡ್ಡಿ ಕೂಡ ಹೊರ ನಡೆದಿದ್ದಾರೆ. ಸಭೆಯಲ್ಲಿ ರಾಷ್ಟ್ರೀಯ ಭದ್ರತಾ ಸಮಸ್ಯೆ ಕುರಿತು ಚರ್ಚೆ ನಡೆಸುವ ಬದಲು ಸಶಸ್ತ್ರ ಪಡೆಗಳ ಸಮವಸ್ತ್ರ ಕುರಿತು ಚರ್ಚಿಸುವ ಮೂಲಕ ಸಮಯ ವ್ಯರ್ಥ ಮಾಡಲಾಗುತ್ತಿದೆ ಎಂದು ಅವರು ಆರೋಪಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಸಭೆಯಲ್ಲಿ ಚೀನಾದ ಆಕ್ರಮಣಶೀಲತೆ ಮತ್ತು ಲಡಾಖ್​ ಗಡಿಯಲ್ಲಿ ಸೈನಿಕರನ್ನು ಸಿದ್ಧಗೊಳಿಸುವ ಕುರಿತು ಧ್ವನಿ ಎತ್ತದಂತೆ ಸಮಿತಿ ಮುಖ್ಯಸ್ಥ ಜುವಾಲ್​ ಓರಾಮ್​ ರಾಹುಲ್​ ಗಾಂಧಿಗೆ ನಿರ್ಬಂಧಿಸಿದ್ದರು ಎನ್ನಲಾಗಿದೆ. ಈ ಕುರಿತು ಬಳಿಕ ನ್ಯೂಸ್​ 18ಗೆ ಮಾತನಾಡಿದ ಓರಾಮ್​ , ರಾಹುಲ್​ ಗಾಂಧಿಯವರು ಕಾರ್ಯಸೂಚಿಯಲ್ಲಿ ಪಟ್ಟಿ ಮಾಡದಿರು ಪ್ರಶ್ನೆಗಳನ್ನು ಕೇಳುತ್ತಿದ್ದರು. ಪಟ್ಟಿ ಮಾಡದ ವಿಷಯಗಳನ್ನು ಸಭೆಯಲ್ಲಿ ಕೇಳಿದಾಗ ಆ ಕುರಿತು ನನಗೆ ಕೇಳುವ ಹಕ್ಕಿದೆ ಎಂದು ಅವರು ತಿಳಿಸಿದ್ದಾರೆ.

ಭೂ, ವಾಯು ಹಾಗೂ ನೌಕ ಸೇನಾ ಸಮವಸ್ತ್ರಗಳ ಕುರಿತು ರಕ್ಷಣಾ ಮುಖ್ಯಸ್ಥ ಬಿಪಿನ್​ ರಾವತ್​ ಸಮ್ಮುಖದಲ್ಲಿ ಚರ್ಚೆ ನಡೆಸಲಾಗುತ್ತಿತ್ತು. ಈ ಚರ್ಚೆಯಲ್ಲಿ ಮಧ್ಯಪ್ರವೇಶಿಸಿದ ರಾಹುಲ್​ ಗಾಂಧಿ ರಾಷ್ಟ್ರೀಯ ವಿಷಯಗಳ ಚರ್ಚಿಸುವ ಕುರಿತು ಪ್ರಸ್ತಾಪಿಸಿದರು. ಜೊತೆಗೆ ಲಡಾಖ್​ನಲ್ಲಿ ಚೀನಾದ ವಿರುದ್ಧ ಹೋರಾಡಲು ಹೇಗೆ ಸೇನೆಯನ್ನು ಬಲಪಡಿಸಬೇಕು ಎಂಬ ಕುರಿತು ಧ್ವನಿ ಎತ್ತಿದ್ದರು.ಈ ವೇಳೆ ರಾಹುಲ್​ ಗಾಂಧಿಯವರಿಗೆ ಮಾತನಾಡದಲು ಸಮಿತಿ ಅಧ್ಯಕ್ಷರು ಅವಕಾಶ ನೀಡಲಿಲ್ಲ. ಈ ಹಿನ್ನಲೆ ಕಾಂಗ್ರೆಸ್​ ನಾಯಕರು ಸಭೆಯಿಂದ ಹೊರ ನಡೆಯಲು ನಿರ್ಧರಿಸಿದರು ಎಂದು ಅವರು ತಿಳಿಸಿದ್ದಾರೆ. ಈ ವೇಳೆ ಮತ್ತಿಬ್ಬರು ನಾಯಕರಾದ ಸತ್ವ ಹಾಗೂ ರೆಡ್ಡಿ ಕೂಡ ಅವರ ಹಾದಿ ಹಿಡಿದರು.


Spread the love

About Laxminews 24x7

Check Also

ಕರ್ನಾಟಕ ಹವಾಮಾನ ವರದಿ: ರಾಜ್ಯದ ಹಲವೆಡೆ ಇಂದು ಗುಡುಗು ಸಹಿತ ಲಘು ಮಳೆಯ ಸೂಚನೆ

Spread the loveಬೆಂಗಳೂರು: ರಾಜ್ಯದಲ್ಲಿ ಹಲವು ದಿನಗಳಿಂದ ಶುಷ್ಕ ವಾತಾವರಣವೇ ಆವರಿಸಿದ್ದು, ಇನ್ನು ಕೆಲ ದಿನಗಳಲ್ಲಿ ಬೆಂಗಳೂರು ಬಿಸಿಲಿನ ಬೇಗೆಯಿಂದ ತತ್ತರಿಸಲಿದೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ