Breaking News

ಡಿಜಿ-ಐಜಿಪಿ ಎಂ ಎ ಸಲೀಂ ಆಯ್ಕೆ ಪ್ರಶ್ನಿಸಿ ಪತ್ರ: ಕೋರ್ಟ್​ಗೆ ಹೋಗುವ ಎಚ್ಚರಿಕೆ ನೀಡಿದ ವಕೀಲೆ

Spread the love

ಬೆಂಗಳೂರು, ಮೇ 26: ಕರ್ನಾಟಕದ ಪ್ರಭಾರಿ ಡಿಜಿ-ಐಜಿಪಿಯಾಗಿ ನೇಮಕವಾಗಿರುವ ಎಂ.ಎ.ಸಲೀಂ (MA Salim) ಅವರಿಗೆ ಸಂಕಷ್ಟ ಎದುರಾಗಿದೆ. ಕನ್ನಡಿಗ, ಹಿರಿಯ ಐಪಿಎಸ್​ ಅಧಿಕಾರಿ ಡಾ. ಎಂ.ಎ ಸಲೀಂ ಅವರನ್ನು ರಾಜ್ಯದ ಪೊಲೀಸ್​ ಮಹಾನಿರ್ದೇಶಕರನ್ನಾಗಿ (ಪ್ರಭಾರ) ನೇಮಕ ಮಾಡಿ ರಾಜ್ಯ ಸರ್ಕಾರ (Karnataka Government) ಕಳೆದ ಬುಧವಾರ (ಮೇ.21) ಆದೇಶ ಹೊರಡಿಸಿತ್ತು. ಈ ಆದೇಶ ಹಿಂಪಡೆಯುವಂತೆ ವಕೀಲೆ ಸುಧಾ ಕಟ್ವಾ ಅವರು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದಿದ್ದಾರೆ.

ಸುಪ್ರೀಂ ಕೋರ್ಟ್​ನ ಆದೇಶದಂತೆ ಪ್ರಭಾರ ಡಿಜಿ-ಐಜಿಪಿ ನೇಮಿಸುವಂತಿಲ್ಲ. ಯಾವುದೇ ವಿಶೇಷ ಕಾರಣ ನೀಡದೆ, ಅವಧಿ ಉಲ್ಲೇಖಿಸದೆ ಡಿಜಿ-ಐಜಿಪಿ ನೇಮಕ‌ ಮಾಡಲಾಗಿದೆ. ಈ ಮೂಲಕ ಸಂವಿಧಾನ ಮತ್ತು ಕಾನೂನು ಉಲ್ಲಂಘಿಸಲಾಗಿದೆ. ಹೀಗಾಗಿ. ಡಾ. ಎಂ.ಎ.ಸಲೀಂ ಅವರ ನೇಮಕಾತಿ ಹಿಂಪಡೆಯಬೇಕು. ಸುಪ್ರೀಂಕೋರ್ಟ್ ಮಾರ್ಗಸೂಚಿಯಂತೆ ನೇಮಕ ಮಾಡಲಿ. ಏಳು ದಿನಗಳಲ್ಲಿ ನಿಯಮ ಪಾಲಿಸದಿದ್ದರೆ ಪಿಐಎಲ್​ ಸಲ್ಲಿಸುವುದಾಗಿ ಎಚ್ಚರಿಕೆ ನೀಡಿದ್ದಾರೆ.

ಎಂ.ಎ ಸಲೀಂ ನೇಮಕ

ಬುಧವಾರ (ಮೇ.21) ಹಿರಿಯ ಐಪಿಎಸ್​ ಅಧಿಕಾರಿ ಡಾ. ಎಂ. ಎ ಸಲೀಂ ಅವರನ್ನು ಪ್ರಭಾರ ರಾಜ್ಯ ಪೊಲೀಸ್​ ಮಹಾನಿರ್ದೇಶಕರಾಗಿ ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿತ್ತು. ಡಿಜಿ-ಐಜಿಪಿ ಡಾ. ಅಲೋಕ್​ ಮೋಹನ್​ ಅವರ ಸೇವಾವಧಿ ಮುಕ್ತಾಯಗೊಂಡ ಹಿನ್ನೆಲೆಯಲ್ಲಿ ಡಾ. ಎಂ. ಎ ಸಲೀಂ ಅವರನ್ನು ಪ್ರಭಾರ ಡಿಜಿ-ಐಜಿಪಿಯಾಗಿ ನೇಮಕ ಮಾಡಿದೆ. ಈ ನೇಮಕವನ್ನು ಪ್ರಶ್ನಿಸಿ ವಕೀಲೆಯೊಬ್ಬರು ಸರ್ಕಾರದ ಸಿಎಸ್​​​ಗೆ ಪತ್ರ ಬರೆದಿದ್ದಾರೆ.


Spread the love

About Laxminews 24x7

Check Also

ರಾಜ್ಯದ 368 ನ್ಯಾಯಾಧೀಶರ ವರ್ಗಾವಣೆ! ವಿನಯ್ ಕುಲಕರ್ಣಿ ದೋಷಿ ಆದೇಶಿಸಿದ ಜಡ್ಜ್ ಕೂಡ ಟ್ರಾನ್ಸ್​ಫರ್​

Spread the loveಬೆಂಗಳೂರು: ಆಡಳಿತಾತ್ಮಕ ಉದ್ದೇಶಗಳಿಗಾಗಿ ರಾಜ್ಯದ್ಯಂತ 368 ನ್ಯಾಯಾಧೀಶರನ್ನು ವರ್ಗಾವಣೆ ಮಾಡಿ ಎಂದು ಹೈಕೋರ್ಟ್​ ಗುರುವಾರ (ಏ.16) ಆದೇಶ ಹೊರಡಿಸಿದೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ