ಬೆಂಗಳೂರು, ಮೇ 26: ಕರ್ನಾಟಕದ ಪ್ರಭಾರಿ ಡಿಜಿ-ಐಜಿಪಿಯಾಗಿ ನೇಮಕವಾಗಿರುವ ಎಂ.ಎ.ಸಲೀಂ (MA Salim) ಅವರಿಗೆ ಸಂಕಷ್ಟ ಎದುರಾಗಿದೆ. ಕನ್ನಡಿಗ, ಹಿರಿಯ ಐಪಿಎಸ್ ಅಧಿಕಾರಿ ಡಾ. ಎಂ.ಎ ಸಲೀಂ ಅವರನ್ನು ರಾಜ್ಯದ ಪೊಲೀಸ್ ಮಹಾನಿರ್ದೇಶಕರನ್ನಾಗಿ (ಪ್ರಭಾರ) ನೇಮಕ ಮಾಡಿ ರಾಜ್ಯ ಸರ್ಕಾರ (Karnataka Government) ಕಳೆದ ಬುಧವಾರ (ಮೇ.21) ಆದೇಶ ಹೊರಡಿಸಿತ್ತು. ಈ ಆದೇಶ ಹಿಂಪಡೆಯುವಂತೆ ವಕೀಲೆ ಸುಧಾ ಕಟ್ವಾ ಅವರು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದಿದ್ದಾರೆ.
ಸುಪ್ರೀಂ ಕೋರ್ಟ್ನ ಆದೇಶದಂತೆ ಪ್ರಭಾರ ಡಿಜಿ-ಐಜಿಪಿ ನೇಮಿಸುವಂತಿಲ್ಲ. ಯಾವುದೇ ವಿಶೇಷ ಕಾರಣ ನೀಡದೆ, ಅವಧಿ ಉಲ್ಲೇಖಿಸದೆ ಡಿಜಿ-ಐಜಿಪಿ ನೇಮಕ ಮಾಡಲಾಗಿದೆ. ಈ ಮೂಲಕ ಸಂವಿಧಾನ ಮತ್ತು ಕಾನೂನು ಉಲ್ಲಂಘಿಸಲಾಗಿದೆ. ಹೀಗಾಗಿ. ಡಾ. ಎಂ.ಎ.ಸಲೀಂ ಅವರ ನೇಮಕಾತಿ ಹಿಂಪಡೆಯಬೇಕು. ಸುಪ್ರೀಂಕೋರ್ಟ್ ಮಾರ್ಗಸೂಚಿಯಂತೆ ನೇಮಕ ಮಾಡಲಿ. ಏಳು ದಿನಗಳಲ್ಲಿ ನಿಯಮ ಪಾಲಿಸದಿದ್ದರೆ ಪಿಐಎಲ್ ಸಲ್ಲಿಸುವುದಾಗಿ ಎಚ್ಚರಿಕೆ ನೀಡಿದ್ದಾರೆ.
ಎಂ.ಎ ಸಲೀಂ ನೇಮಕ
ಬುಧವಾರ (ಮೇ.21) ಹಿರಿಯ ಐಪಿಎಸ್ ಅಧಿಕಾರಿ ಡಾ. ಎಂ. ಎ ಸಲೀಂ ಅವರನ್ನು ಪ್ರಭಾರ ರಾಜ್ಯ ಪೊಲೀಸ್ ಮಹಾನಿರ್ದೇಶಕರಾಗಿ ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿತ್ತು. ಡಿಜಿ-ಐಜಿಪಿ ಡಾ. ಅಲೋಕ್ ಮೋಹನ್ ಅವರ ಸೇವಾವಧಿ ಮುಕ್ತಾಯಗೊಂಡ ಹಿನ್ನೆಲೆಯಲ್ಲಿ ಡಾ. ಎಂ. ಎ ಸಲೀಂ ಅವರನ್ನು ಪ್ರಭಾರ ಡಿಜಿ-ಐಜಿಪಿಯಾಗಿ ನೇಮಕ ಮಾಡಿದೆ. ಈ ನೇಮಕವನ್ನು ಪ್ರಶ್ನಿಸಿ ವಕೀಲೆಯೊಬ್ಬರು ಸರ್ಕಾರದ ಸಿಎಸ್ಗೆ ಪತ್ರ ಬರೆದಿದ್ದಾರೆ.
Laxmi News 24×7