Breaking News

ಸುಪ್ರೀಂಕೋರ್ಟ್‌ ನ್ಯಾಯಮೂರ್ತಿಯಾಗಿ ಎನ್.ವಿ. ಅಂಜಾರಿಯಾ

Spread the love

ಬೆಂಗಳೂರು : ಕರ್ನಾಟಕ ಹೈಕೋರ್ಟ್​ನ ಮುಖ್ಯನ್ಯಾಯಮೂರ್ತಿ ಎನ್.ವಿ. ಅಂಜಾರಿಯಾ ಅವರನ್ನು ಸುಪ್ರೀಂಕೋರ್ಟ್ ನ್ಯಾಯಮೂರ್ತಿಯನ್ನಾಗಿ ಪದೋನ್ನತಿ ಮಾಡಲು ಸುಪ್ರೀಂಕೋರ್ಟ್ ಕೊಲಿಜಿಯಂ ಕೇಂದ್ರ‌ ಸರ್ಕಾರಕ್ಕೆ ಶಿಫಾರಸು ಮಾಡಿದೆ.

ಸುಪ್ರೀಂಕೋರ್ಟ್​ನ ಮುಖ್ಯನ್ಯಾಯಮೂರ್ತಿ ಬಿ.ಆರ್. ಗವಾಯಿ, ನ್ಯಾಯಮೂರ್ತಿಗಳಾದ ಸೂರ್ಯ ಕಾಂತ್, ಬಿ.ವಿ. ನಾಗರತ್ನ, ವಿಕ್ರಮ್ ನಾಥ್ ಮತ್ತು ಜೆ.ಕೆ. ಮಹೇಶ್ವರಿ ಅವರನ್ನೊಳಗೊಂಡ ಕೊಲಿಜಿಯಂ ಮೇ 26ರಂದು ನಡೆದ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಂಡಿದ್ದರು.

ಇದೇ ವೇಳೆ ಗೌಹಟಿ ಹೈಕೋರ್ಟ್​ನ ಮುಖ್ಯನ್ಯಾಯಮೂರ್ತಿ ವಿಜಯ್ ಬಿಶ್ಣೋಯಿ ಮತ್ತು ಬಾಂಬೆ ಹೈಕೋರ್ಟ್​ನ ನ್ಯಾಯಮೂರ್ತಿ ಎ.ಎಸ್. ಚಂದೂರ್ಕರ್ ಅವರನ್ನು ಸುಪ್ರೀಂಕೋರ್ಟ್ ನ್ಯಾಯಾಮೂರ್ತಿಗಳನ್ನಾಗಿ ಪದೋನ್ನತಿ ನೀಡಲು ಶಿಫಾರಸು ಮಾಡಿ ಆದೇಶಿಸಿದೆ.


Spread the love

About Laxminews 24x7

Check Also

ನಾಳೆ ರಾಜ್ಯ ಬಜೆಟ್:‌ ಬಸ್‌ ನಿಲ್ದಾಣಗಳಲ್ಲಿ ನೇರ ಪ್ರಸಾರ

Spread the loveಬೆಂಗಳೂರು: ನಾಳೆ ರಾಜ್ಯ ಬಜೆಟ್‌ ಮಂಡನೆಯಾಗಲಿದ್ದು, ಸಿಎಂ ಸಿದ್ದರಾಮಯ್ಯ ದಾಖಲೆಯ 17ನೇ ಬಜೆಟ್‌ ಮಂಡನೆ ಮಾಡಲಿದ್ದಾರೆ. ರಾಜ್ಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ