Breaking News

ಹನುಮನ ಜನ್ಮಸ್ಥಳದ ದೇಗುಲದ ಪ್ರಧಾನ ಅರ್ಚಕರನ್ನು ತೆಗೆಯಬೇಡಿ: ಕರ್ನಾಟಕಕ್ಕೆ ಸುಪ್ರೀಂ ಕೋರ್ಟ್ ಆದೇಶ

Spread the love

ನವದೆಹಲಿ: ಶ್ರೀರಾಮನ ಭಕ್ತ ಹನುಮ ಜನಿಸಿದ ಸ್ಥಳ ಎಂದೇ ಖ್ಯಾತಿಯಾಗಿರುವ ಕೊಪ್ಪಳದ ಅಂಜನಾದ್ರಿ ದೇವಸ್ಥಾನವನ್ನು ಮುಜರಾಯಿ ಇಲಾಖೆ ವ್ಯಾಪ್ತಿಗೆ ತೆಗೆದುಕೊಂಡ ರಾಜ್ಯ ಸರ್ಕಾರದ ನಿರ್ಧಾರ ಸುಪ್ರೀಂ ಕೋರ್ಟ್​ ಮೆಟ್ಟಿಲೇರಿದೆ. ಈ ಕುರಿತ ಅರ್ಜಿ ವಿಚಾರಣೆ ಕೈಗೆತ್ತಿಕೊಂಡ ಸುಪ್ರೀಂ ಕೋರ್ಟ್, ಹನುಮನ ಜನ್ಮಸ್ಥಳದ ದೇಗುಲದ ಪ್ರಧಾನ ಅರ್ಚಕರನ್ನು ತೆಗೆಯಬೇಡಿ ಎಂದು ಕರ್ನಾಟಕ ಸರ್ಕಾರಕ್ಕೆ ಆದೇಶ ನೀಡಿದೆ.

ಕರ್ನಾಟಕ ಸರ್ಕಾರಕ್ಕೆ ನೋಟಿಸ್: ದೇವಸ್ಥಾನದ ಮುಖ್ಯ ಅರ್ಚಕ ವಿದ್ಯಾದಾಸ್​ ಬಾಬಾ ಅವರು, ತಮ್ಮ ಪೂಜೆಗೆ ಸರ್ಕಾರ ಅಡ್ಡಿ ಮಾಡುತ್ತಿದೆ. ಹೈಕೋರ್ಟ್​ ಆದೇಶ ಉಲ್ಲಂಘಿಸಲಾಗಿದೆ ಎಂದು ಸುಪ್ರೀಂ ಕೋರ್ಟ್​​ಗೆ ಅರ್ಜಿ ಸಲ್ಲಿಸಿದ್ದಾರೆ. ಇಂದು (ಮಂಗಳವಾರ) ಇದರ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಸೂರ್ಯಕಾಂತ್ ಮತ್ತು ದೀಪಂಕರ್ ದತ್ತ ಅವರಿದ್ದ ಪೀಠವು, ಕರ್ನಾಟಕ ಸರ್ಕಾರಕ್ಕೆ ನೋಟಿಸ್​ ಜಾರಿ ಮಾಡಿತು.

ವಿವಾದದ ಕುರಿತು ಹೈಕೋರ್ಟ್​ ನೀಡಿದ ಆದೇಶವನ್ನು ಪಾಲಿಸಬೇಕು. ವಿದ್ಯಾದಾಸ್​ ಬಾಬಾ ಅವರು ದೇವಸ್ಥಾನದಲ್ಲಿ ಪೂಜೆ ಸಲ್ಲಿಸಲು ಅವಕಾಶ ನೀಡಬೇಕು ಎಂದು ಕೋರ್ಟ್​ ಹೇಳಿದೆ.

ಅರ್ಚಕರ ಪೂಜೆಗೆ ಅಡ್ಡಿ: ಅರ್ಜಿದಾರರ ಪರವಾಗಿ ಹಾಜರಿದ್ದ ವಕೀಲ ವಿಷ್ಣು ಶಂಕರ್ ಜೈನ್, ತಮ್ಮ ಕಕ್ಷಿದಾರರು ದೇವಾಲಯದಲ್ಲಿ ಮುಖ್ಯ ಅರ್ಚಕರಾಗಿದ್ದಾರೆ. ರಾಮನಂದಿ ಸಂಪ್ರದಾಯದ ಅವ ಕುಟುಂಬವು 120 ವರ್ಷಗಳಿಂದ ಈ ದೇವಾಲಯದಲ್ಲಿ ಪೂಜೆ ಸಲ್ಲಿಸುತ್ತಿದೆ. ಇದೀಗ, ರಾಜ್ಯ ಸರ್ಕಾರ ದೇವಾಲಯವನ್ನು ತನ್ನ ಸುಪರ್ದಿಗೆ ಪಡೆದು, ಅರ್ಚಕರ ಪೂಜೆಗೆ ನಿರಾಕರಿಸುತ್ತಿದೆ ಎಂದು ವಾದಿಸಿದರು.

2018ರಲ್ಲಿ ಇದ್ದಕ್ಕಿದ್ದಂತೆ ಈ ದೇವಾಲಯವನ್ನು ಸಂಪೂರ್ಣವಾಗಿ ಕಾನೂನುಬಾಹಿರ ರೀತಿಯಲ್ಲಿ ಸರ್ಕಾರವು ಸ್ವಾಧೀನಪಡಿಸಿಕೊಂಡಿದೆ. ಇದು ಕರ್ನಾಟಕ ಕಾಯ್ದೆಯ ನಿಬಂಧನೆಗಳನ್ನು ಉಲ್ಲಂಘಿಸುತ್ತದೆ ಎಂದು ವಕೀಲರು ಕೋರ್ಟ್​ ಗಮನಕ್ಕೆ ತಂದರು


Spread the love

About Laxminews 24x7

Check Also

ಅಂಬೇಡ್ಕರ ಜಿ ಅವರು ನಿಪ್ಪಾಣಿಗೆ ಭೇಟಿ ನೀಡಿದ ಹಿನ್ನಲೆ,ದೇಶದಲ್ಲೇ ಗಮನ ಸೆಳೆಯುವಂತಹ ಅಂಬೇಡ್ಕರ ಮ್ಯೂಸಿಯಂ ಪ್ರವಾಸಿ ತಾಣ ನಿರ್ಮಾಣ”

Spread the love“ಅಂಬೇಡ್ಕರ ಜಿ ಅವರು ನಿಪ್ಪಾಣಿಗೆ ಭೇಟಿ ನೀಡಿದ ಹಿನ್ನಲೆ,ದೇಶದಲ್ಲೇ ಗಮನ ಸೆಳೆಯುವಂತಹ ಅಂಬೇಡ್ಕರ ಮ್ಯೂಸಿಯಂ ಪ್ರವಾಸಿ ತಾಣ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ