Breaking News

ಪ್ರತಿ ತಾಲೂಕಿನಲ್ಲೂ ಕನಿಷ್ಟ ಬೆಂಬಲ‌ ಬೆಲೆಯ ಖರೀದಿ ಕೇಂದ್ರ ಸ್ಥಾಪಿಸಲು ಹೈಕೋರ್ಟ್ ಆದೇಶ

Spread the love

ಬೆಂಗಳೂರು, ಮೇ 28: ಪ್ರತಿ ತಾಲೂಕಿನಲ್ಲೂ ಖರೀದಿ ಕೇಂದ್ರ ಸ್ಥಾಪಿಸಲು ಕರ್ನಾಟಕ ಹೈಕೋರ್ಟ್ (High Court) ಬುಧವಾರ ಆದೇಶ ಹೊರಡಿಸಿದೆ.

ರೈತ ಸೇನೆ ಸಲ್ಲಿಸಿದ್ದ ಪಿಐಎಲ್ ಅರ್ಜಿ (PIL application) ವಿಚಾರಣೆ ಮಾಡಿದ ಹೈಕೋಟ್​​, ಕನಿಷ್ಟ ಬೆಂಬಲ‌ ಬೆಲೆಯ ಖರೀದಿ ಕೇಂದ್ರ ಆರಂಭಿಸಲು ಸಿಜೆ ಎನ್.ವಿ.ಅಂಜಾರಿಯಾ ಮತ್ತು ನ್ಯಾ.ಕೆ.ವಿ.ಅರವಿಂದ್​​ರಿದ್ದ ಪೀಠ ಆದೇಶ ನೀಡಿದೆ.ಜಿಲ್ಲಾಧಿಕಾರಿ ಬೆಳೆಗಳ ಲಭ್ಯತೆಯ ವೈಜ್ಞಾನಿಕ ಅಧ್ಯಯನ ನಡೆಸಬೇಕು.

ಅಗತ್ಯವಿದ್ದಷ್ಟು ಕನಿಷ್ಟ ಬೆಂಬಲ ಬೆಲೆಯ ಖರೀದಿ ಕೇಂದ್ರ ಸ್ಥಾಪಿಸಬೇಕು. ಪ್ರತಿ ತಾಲೂಕಿನಲ್ಲೂ ಒಂದು ಖರೀದಿ ಕೇಂದ್ರ ಸ್ಥಾಪಿಸಬೇಕು. ನಿಗದಿತ ಅವಧಿಗಿಂತ ಕನಿಷ್ಟ 2 ತಿಂಗಳು ಖರೀದಿ ಕೇಂದ್ರದ ಅವಧಿ ವಿಸ್ತರಿಸಬೇಕು ಎಂದು ಪೀಠ ನಿರ್ದೇಶನ ನೀಡಿದೆ.


Spread the love

About Laxminews 24x7

Check Also

ನಾಲ್ಕು ರಾಜ್ಯಗಳ ಉಪಚುನಾವಣೆ: ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ

Spread the loveಭಾರತೀಯ ಜನತಾ ಪಾರ್ಟಿ (ಬಿಜೆಪಿ) ಗೋವಾ ಸೇರಿದಂತೆ ನಾಲ್ಕು ರಾಜ್ಯಗಳ ಐದು ವಿಧಾನಸಭಾ ಕ್ಷೇತ್ರಗಳಿಗೆ ನಡೆಯಲಿರುವ ಉಪಚುನಾವಣೆಗಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ