Breaking News

ಹಳೆ ಹುಬ್ಬಳ್ಳಿಯ ಪೊಲೀಸ್ ಠಾಣೆಯ ಮೇಲೆ ದಾಳಿ ಪೊಲೀಸರ ಮೇಲೆ ಹಲ್ಲೆ ಮಾಡಿದ ಆರೋಪಿಗಳ ಪ್ರಕರಣವನ್ನು ಹಿಂಪಡೆದಿದ್ದ ಸಿಎಂ ಸಿದ್ದರಾಮಯ್ಯ ಸಚಿವ ಸಂಪುಟದ ನಿರ್ಧಾರಕ್ಕೆ ಹೈಕೋರ್ಟ್ ರದ್ದು

Spread the love

ಹಳೆ ಹುಬ್ಬಳ್ಳಿಯ ಪೊಲೀಸ್ ಠಾಣೆಯ ಮೇಲೆ ದಾಳಿ ಪೊಲೀಸರ ಮೇಲೆ ಹಲ್ಲೆ ಮಾಡಿದ ಆರೋಪಿಗಳ ಪ್ರಕರಣವನ್ನು ಹಿಂಪಡೆದಿದ್ದ ಸಿಎಂ ಸಿದ್ದರಾಮಯ್ಯ ಸಚಿವ ಸಂಪುಟದ ನಿರ್ಧಾರಕ್ಕೆ ಹೈಕೋರ್ಟ್ ರದ್ದು ಮಾಡಿರುವುದು ಸಿದ್ದರಾಮಯ್ಯನವರಿಗೆ ಮುಖಭಂಗವಾಗಿದೆ ಎಂದು ಮಾಜಿ ಸಿಎಂ, ಸಂಸದ ಜಗದೀಶ್ ಶೆಟ್ಟರ್ ಹೇಳಿದರು.
ಗುರುವಾರ ಬೆಳಗಾವಿಯ ಕಾಡಾ ಕಾರ್ಯಾಲಯದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಹಳೆ ಹುಬ್ಬಳ್ಳಿಯ ಪ್ರಕರಣದಲ್ಲಿ ಭಾಗಿಯಾದ ಆರೋಪಿಗಳಿಗೆ ಈ ಹಿಂದಿನ ಸರಕಾರ ಹಾಗೂ ಅಂದಿನ ಅಧಿಕಾರಿಗಳು ಕಠಿಣ ಕಾನೂನು ಕ್ರಮ ಜರುಗಿಸುತ್ತು.
ಆದರೆ ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೇತೃತ್ವದ ಸರಕಾರ ಕಾನೂನು ಬಾಹಿರವಾಗಿ ಆ ಪ್ರಕರಣದಲ್ಲಿ ಶಿಕ್ಷೆ ಅನುಭವಿಸುತ್ತಿದ್ದ ಆರೋಪಿಗಳ ಪರ ನಿಂತು ಸಚಿವ ಸಂಪುಟದಲ್ಲಿ ಅದನ್ನು ಹಿಂಪಡೆಯುವ ನಿರ್ಧಾರ ಮಾಡಿದ್ದನ್ನು ಪ್ರಶ್ನಿಸಿ ಕೆಲವರು ಹೈಕೋರ್ಟ್ ಮೊರೆ ಹೋಗಿದ್ದರು.
ಇದಕ್ಕೆ ಹೈಕೋರ್ಟ್ ಸರಕಾರದ ನಿರ್ಧಾರ ತಪ್ಪು ಎಂದಿರುವುದು ಸರಕಾರಕ್ಕೆ ದೊಡ್ಡ ಮುಖಭಂಗವಾಗಿದೆ ಎಂದರು.ಮುಖ್ಯಮಂತ್ರಿ ಸಿದ್ದರಾಮಯ್ಯನವರು ಇಂಥ ಪ್ರಕರಣಗಳ ಬಗ್ಗೆ ನಿರ್ಧಾರ ತೆಗೆದುಕೊಳ್ಳುವಾಗ ಹಿರಿಯ ಅಧಿಕಾರಿಗಳ ಮಾತುಗಳನ್ನು ಒಮ್ಮೆ ಕೇಳಿ ತೆಗೆದುಕೊಳ್ಳಬೇಕು. ಕಾನೂನು ಇಲಾಖೆಯ ಅನುಮತಿ ಪಡೆದು ಅದರಲ್ಲಿನ ಪೂರಕವಾದ ನಿರ್ಧಾರ ಬಂದರೆ ಒಪ್ಪಿಗೆ ಇದೆ. ಕಾನೂನು ಬಾಹಿರ ಚಟುವಟಿಕೆ ಮಾಡುವವರ ಬೆನ್ನಿಗೆ ನಿಂತಿರುವ ಸರಕಾರಕ್ಕೆ ಹೈಕೋರ್ಟ್ ಚಾಟಿ ಬಿಸಿದೆ. ಹಳೆ ಹುಬ್ಬಳ್ಳಿಯ ಪೊಲೀಸ್ ಠಾಣೆಯ ಮೇಲೆ ದಾಳಿ ಮಾಡಿದ ಎಲ್ಲರೂ ಮುಸ್ಲಿಮ್ ಸಮುದಾಯದವರು ಅವರು ಒಂದು ಸಮುದಾಯದ ಪರವಾಗಿ ನಿಂತಿರುವುದಕ್ಕೆ ಜನರು ಸರಕಾರದ ವಿರುದ್ಧ ತಿರುಗಿ ಬಿಳುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದರು.
ಹಿಡಕಲ್ ಜಲಾಶಯದಿಂದ ಧಾರವಾಡ ಕೈಗಾರಿಕಾ ಪ್ರದೇಶಕ್ಕೆ ಕುಡಿಯುವ ನೀರಿನ ಪೈಪ್ ಲೈನ್ ಕಾಮಗಾರಿಯ ವಿಚಾರಕ್ಕೆ ಉತ್ತರಿಸಿದ ಅವರು, ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಇದೆ. ಇಲ್ಲಿನ ಶಾಸಕ, ಸಚಿವರು ಏನು ಮಾಡುತ್ತಿದ್ದಾರೆ. ಮೊದಲು ಇದಕ್ಕೆ ಉತ್ತರ ಕೊಡಲಿ, ಕೈಗಾರಿಕೆ ಇಲಾಖೆಯವರು ಯಾಕೆ ತೆಗೆದುಕೊಂಡರು ಎನ್ನುವುದನ್ನು ಮೊದಲು ಸರಕಾರದ ಇಲಾಖೆಯಲ್ಲಿ ಪರಸ್ಪರ ಹೊಂದಾಣಿಕೆ ಇಲ್ಲ. ಜಿಲ್ಲಾ ಉಸ್ತುವಾರಿ ಸಚಿವರ ಗಮನಕ್ಕೆ ಇಲ್ಲದೆ, ಕಾಮಗಾರಿ ನಡೆಸಿರುವುದು ವಿಪರ್ಯಾಸ ಎಂದರು. ನನ್ನ ಊರು ಧಾರವಾಡ ಎಂದು ನಾನು ಅಧಿಕಾರಿಗಳಿಗೆ ಸೂಚಿಸಿಲ್ಲ. ಆದರೆ ಸರಕಾರ ಮಾಡಿರುವ ನಿರ್ಧಾರಕ್ಕೆ ಜನರು ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಮೊದಲು ಸರಕಾರ ಇದರ ಬಗ್ಗೆ ಸ್ಪಷ್ಟ ನಿಲುವು ಪಡಿಸಬೇಕು ಎಂದರು. 
ಕೊವಿಡ್ ಬಗ್ಗೆ ಸರಕಾರ ನಿರ್ಲಕ್ಷ್ಯ ಮಾಡಬಾರದು. ಎಲ್ಲಿ ಉದ್ಬವವಾಗಿರುತ್ತದೆಯೋ ಅಲ್ಲಿ ಅದನ್ನು ನಿವಾರಣೆ ಮಾಡುವ ಕೆಲಸವನ್ನು ಸರಕಾರ ಮಾಡಬೇಕು. ಜಾಗರೂಕತೆಯಿಂದ ಎಚ್ಚರವಹಿಸಬೇಕು. ಜಿಲ್ಲೆಯಲ್ಲಿ ಕೊವಿಡ್‌ನಿಂದ ವ್ಯಕ್ತಿ ಮೃತಪಟ್ಟಿರುವುದು ವಿಪರ್ಯಾಸ. ಇದು ಆಗ ಬಾರದಿತ್ತು. ರಾಜ್ಯ ಸರಕಾರ ಎಲ್ಲ ರೀತಿಯ ಸಿದ್ಧತೆ ಮಾಡಿಕೊಳ್ಳಬೇಕು. ವೈದ್ಯರ ಸಲಹೆ ಪಡೆದುಕೊಂಡು ಜನರಿಗೆ ಚಿಕಿತ್ಸೆ ಕೊಡಿಸುವ ಕೆಲಸ ಸರಕಾರ ಮಾಡಬೇಕು ಎಂದರು. 
ಸವದತ್ತಿ ಯಲ್ಲಮ್ಮನ ದೇವಸ್ಥಾನದ ಅಭಿವೃದ್ಧಿ ಮಾಡುತ್ತಿರುವುದು ಕೇಂದ್ರ ಸರಕಾರ. ನಮ್ಮ ವಿಶೇಷ ಪ್ರಯತ್ನದಿಂದ ನಾವು ಯಲ್ಲಮ್ಮನ ದೇವಸ್ಥಾನಕ್ಕೆ ವಿಶೇಷ ಅನುದಾನ ತಂದಿದ್ದೇವೆ. ಆದರೆ ರಾಜ್ಯ ಸರಕಾರ ಅನುದಾನ ಬಿಡುಗಡೆ ಮಾಡುವ ಹಾಗೆ ತಿರುಪತಿ ಮಾದರಿಯಲ್ಲಿ ಯಲ್ಲಮ್ಮನ ದೇವಸ್ಥಾನ ಅಭಿವೃದ್ಧಿ ಮಾಡುವುದಾಗಿ ಹೇಳುತ್ತಿರುವ ರಾಜ್ಯ ಸರಕಾರ ಮೊದಲೇ ಯಾಕೆ ಇದನ್ನು ಮಾಡಲಿಲ್ಲ ಎಂದು ಪ್ರಶ್ನಿಸಿದರು.

Spread the love

About Laxminews 24x7

Check Also

ಧಾರವಾಡದ ನವಲೂರು ಬಳಿ ಹೆಚ್‌ಡಿ ಬಿಆರ್‌ಟಿ‌ಎಸ್ ಸೇತುವೆ ಮೇಲೆ ಸರಣಿ ಅಪಘಾತ, ತಪ್ಪಿದ ಅನಾಹುತ…… ಎರಡು ಕಾರ್‌ಗಳ ಮುಂಭಾಗ ಜಖಂ.

Spread the love ಧಾರವಾಡದ ನವಲೂರು ಬಳಿ ಹೆಚ್‌ಡಿ ಬಿಆರ್‌ಟಿ‌ಎಸ್ ಸೇತುವೆ ಮೇಲೆ ಸರಣಿ ಅಪಘಾತ, ತಪ್ಪಿದ ಅನಾಹುತ…… ಎರಡು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ