Breaking News

ಪುನೀತ್ ರಾಜ್​ಕುಮಾರ್ ಮೂರ್ತಿಗೆ ಪೂಜೆ ಸಲ್ಲಿಸಿ, ಆರ್‌ಸಿಬಿ ಗೆಲುವಿಗೆ ಪ್ರಾರ್ಥನೆ

Spread the love

ಹಾವೇರಿ: ದಿವಂಗತ ಪುನೀತ್ ರಾಜ್​ಕುಮಾರ್ ಅವರು ಐಪಿಎಲ್‌ನಲ್ಲಿ ಆರ್‌ಸಿಬಿ ಕಪ್ ಗೆಲ್ಲುವ ಕನಸು ಕಂಡಿದ್ದರು. ನಮ್ಮ ತಂಡ ಫೈನಲ್ ಪ್ರವೇಶಿಸಬೇಕು, ಮೈದಾನದಲ್ಲಿ ಫೈನಲ್ ಪಂದ್ಯವನ್ನು ಕುಳಿತು ನೋಡಬೇಕು ಎಂದು ಅವರು ಹೇಳುತ್ತಿದ್ದರು. ಆದರೆ, ಆ ಆಸೆ ಈಡೇರಲಿಲ್ಲ.

ಇದೀಗ ಆರ್‌ಸಿಬಿ ಫೈನಲ್ ತಲುಪಿದೆ. ನಾಳೆ ಸಂಜೆ ನಡೆಯುವ ಪಂದ್ಯದಲ್ಲಿ ಎದುರಾಳಿ ಪಂಜಾಬ್ ಕಿಂಗ್ಸ್ ಜೊತೆ ಸೆಣಸಲಿದೆ. ಈ ಮಧ್ಯೆ ಹಾವೇರಿ ತಾಲೂಕು ಯಲಗಚ್ಚ ಗ್ರಾಮದಲ್ಲಿ ಪುನೀತ್​ ರಾಜ್​ಕುಮಾರ್ ದೇವಾಲಯ ಕಟ್ಟಿಸಿರುವ ಪ್ರಕಾಶ್ ಎಂಬವರು, ಆರ್​ಸಿಬಿ ಗೆಲುವಿಗಾಗಿ ಪೂಜೆ ಸಲ್ಲಿಸಿದ್ದಾರೆ. ದೇವಾಲಯದಲ್ಲಿರುವ ಪುನೀತ್ ಮೂರ್ತಿಗೆ ವಿಭೂತಿ, ಕುಂಕುಮ ಹಚ್ಚಿ, ತಿಲಕವಿಟ್ಟು ಪೂಜೆ ಸಲ್ಲಿಸಿದರು. ತನ್ನ ನೆಚ್ಚಿನ ನಾಯಕನ ಕನಸು ನನಸಾಗಲೆಂದು ಪ್ರಾರ್ಥಿಸಿದರು.

ಪುನೀತ್ ರಾಜ್​ಕುಮಾರ್ ದೇವಾಲಯಕ್ಕೆ ವಿಶೇಷ ಅಲಂಕಾರ ಮಾಡಲಾಗಿತ್ತು. ತೆಂಗಿನಕಾಯಿ ಮೇಲೆ ಕರ್ಪೂರ ಇಟ್ಟು ಬೆಳಗಲಾಯಿತು. ನಂತರ ತೆಂಗಿನಕಾಯಿ ಒಡೆದು ಬಾಳೆಹಣ್ಣು ನೈವೇದ್ಯ ಸಲ್ಲಿಸಲಾಯಿತು. ಯಲಗಚ್ಚ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯ ಮಕ್ಕಳು ಪಾಲ್ಗೊಂಡಿದ್ದರು. ದೇವಾಲಯದಲ್ಲಿ ಕೇಕ್ ಕಟ್ ಮಾಡಿದ ಪ್ರಕಾಶ್, ಚಾಕೊಲೇಟ್ ಹಂಚಿ ಸಂಭ್ರಮಿಸಿದರು.

“ಡಾ.ಪುನೀತ್​ ರಾಜ್​ಕುಮಾರ್ ಅವರು ಕನ್ನಡ ನಾಡು, ನುಡಿ, ಭಾಷೆ ವಿಚಾರದಲ್ಲಿ ಯಾವಾಗಲೂ ಮುಂದಿರುತ್ತಿದ್ದರು. ಹಲವು ಸಂಸ್ಥೆಗಳಿಗೆ ಉಚಿತವಾಗಿ ಅಂಬಾಸಿಡರ್ ಆಗಿದ್ದರು. ಆರ್‌ಸಿಬಿ ತಂಡದ ಅಂಬಾಸಿಡರ್ ಸಹ ಆಗಿದ್ದರು. ನಮ್ಮ ತಂಡ ಫೈನಲ್ ಗೆಲ್ಲಬೇಕು, ಐಪಿಎಲ್ ಕಪ್ ಎತ್ತಿ ಹಿಡಿಯಬೇಕು ಎಂದು ಕನಸು ಕಂಡಿದ್ದರು. ಆದರೆ, ದುರಾದೃಷ್ಟವಶಾತ್ ಅವರು ಈಗ ನಮ್ಮ ಜೊತೆಗಿಲ್ಲ. ಆದರೆ ಆರ್‌ಸಿಬಿ ಫೈನಲ್ ತಲುಪಿದೆ. ಆರ್​ಸಿಬಿ ಫೈನಲ್ ಗೆದ್ದರೆ ಪುನೀತ್​ ರಾಜ್​ಕುಮಾರ್ ಅವರ ಕನಸು ನನಸಾಗಲಿದೆ” ಎಂದು ಪ್ರಕಾಶ್ ತಿಳಿಸಿದರು.

ವಿದ್ಯಾರ್ಥಿನಿ ಸಿಂಧೂ ಮಾತನಾಡಿ, “ಆರ್‌ಸಿಬಿ ಫೈನಲ್‌ನಲ್ಲಿ ಗೆಲ್ಲಲೆಂದು ನಾವು ಬಯಸುತ್ತೇವೆ. ಈ ಸಲ ಕಪ್ ನಮ್ದೇ ಆಗಲಿ ಎಂದು ಅಪ್ಪು ಸರ್ ಬಳಿ ಬೇಡಿಕೊಳ್ಳಲು ಬಂದಿದ್ದೇವೆ” ಎಂದರು.


Spread the love

About Laxminews 24x7

Check Also

ಬಂಗಾರ ಪ್ರಿಯರಿಗೆ ಗುಡ್‌ ನ್ಯೂಸ್‌ – 10 ಗ್ರಾಂ ಚಿನ್ನದ ಬೆಲೆ 2,900 ರೂ. ಇಳಿಕೆ

Spread the loveಬೆಂಗಳೂರು: ಕೊಲ್ಲಿ ರಾಷ್ಟ್ರಗಳ ಯುದ್ಧದ ಬಿಸಿ ನಡುವೆಯೂ ಬಂಗಾರ ಪ್ರಿಯರಿಗೆ ಗುಡ್‌ನ್ಯೂಸ್‌ ಸಿಕ್ಕಿದೆ. ಸತತ ಏರುಗತಿಯಲ್ಲಿ ಸಾಗುತ್ತಿದ್ದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ