Breaking News

ಆದಷ್ಟು ಬೇಗನೆ ಯತ್ನಾಳ್​​​​ಗೆ ಸಿಹಿ ಸುದ್ದಿ;ರಮೇಶ್​ ಜಾರಕಿಹೊಳಿ

Spread the love

ಚಿಕ್ಕೋಡಿ, ಬೆಳಗಾವಿ: ಬಸನಗೌಡ ಪಾಟೀಲ್ ಯತ್ನಾಳ್ ಅವರಿಗೆ ಬಿಜೆಪಿ ಪಕ್ಷದಿಂದ ಆದಷ್ಟು ಬೇಗನೆ ಸಿಹಿ ಸುದ್ದಿ ಬರುತ್ತದೆ. ಒಂದು ಸ್ಥಾನ ಮಾನವೂ ಸಿಗುತ್ತದೆ ಎಂದು ಮಾಜಿ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಹೇಳಿದ್ದಾರೆ.

ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದಲ್ಲಿ ಮಾತನಾಡಿದ ಅವರು, ಬಿಜೆಪಿಯಿಂದ ಉಚ್ಚಾಟನೆ ಆಗಿರುವ ಯತ್ನಾಳ್​​​ಗೆ ಬಿಜೆಪಿ ಪಕ್ಷ ಸಂತೋಷದ ಸುದ್ದಿ ನೀಡುತ್ತದೆ. ಶಾಸಕ ಯತ್ನಾಳ ಅವರು ಕೂಡ ಮಾತಿನ ಮೇಲೆ ಹಿಡಿತ ಇಟ್ಟುಕೊಳ್ಳಬೇಕು ಎಂದು ಮಾದ್ಯಮಗಳ ಮುಖಾಂತರ ಮನವಿ ಮಾಡಿದರು.

ಬಿಜೆಪಿ ಪಕ್ಷದಿಂದ ಟಿ.ಸೋಮಶೇಖರ್ ಹಾಗೂ ಹೆಬ್ಬಾರ್ ಉಚ್ಚಾಟನೆ ಪಕ್ಷದ ತಿರ್ಮಾನವಾಗಿದ್ದು, ನಾನು ಅದನ್ನು ಸ್ವಾಗತಿಸುತ್ತೇನೆ. ಪಕ್ಷಕ್ಕಿಂತ ನಾನು ದೊಡ್ಡವನಲ್ಲ, ವರಿಷ್ಠರು ನಮಗೆ ತುಂಬಾ ಕಿಮ್ಮತ್ತು ಕೊಟ್ಟಿದ್ದಾರೆ. ನಮ್ಮ ಜೊತೆ ಚೆನ್ನಾಗಿದ್ದಾರೆ ಎಂದರು. ಪಕ್ಷದಲ್ಲಿ ಕೆಲವರಿಗೆ ನೊಟೀಸ್ ನೀಡಲಾಗಿದೆ, ಅವರು ಸದ್ಯಕ್ಕೆ ಬಾಯಿ ಮುಚ್ಚಿಕೊಂಡಿದ್ದಾರೆ, ಏನಾದರೂ ಪಕ್ಷದ ಚೌಕಟ್ಟು ಬಿಟ್ಟರೆ ಅವರನ್ನು ಉಚ್ಚಾಟನೆ ಮಾಡುತ್ತಾರೆ ಎಂದರು.


Spread the love

About Laxminews 24x7

Check Also

ಬೆಟಗೇರಿ ಕೃಷ್ಣ್ಣಶರ್ಮರು ಮಾತೃ ಹೃದಯದ ಆಶ್ರಯದಲ್ಲಿ ಬೆಳೆದವರು

Spread the love ಬೆಳಗಾವಿ: ಡಾ.ಬೆಟಗೇರಿ ಕೃಷ್ಣ್ಣಶರ್ಮರು ಮಾತೃ ಹೃದಯದ ಆಶ್ರಯದಲ್ಲಿ ಬೆಳೆದವರು. ಹೀಗಾಗಿ, ಅವರ ಕೃತಿಗಳಲ್ಲಿ ಸ್ತ್ರೀತ್ವದ ಅಂಶಗಳು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ