Breaking News

ಧಾರವಾಡ ಜಿಲ್ಲೆಯಾದ್ಯಂತ ಚುರುಕುಗೊಂಡ ಕೃಷಿ ಚಟುವಟಿಕೆ… ಮುಂಗಾರು ಬಿತ್ತನೆಗೆ ಮುಂದಾದ ಅನ್ನದಾತರು

Spread the love

ಧಾರವಾಡ ಜಿಲ್ಲೆಯಾದ್ಯಂತ ಚುರುಕುಗೊಂಡ ಕೃಷಿ ಚಟುವಟಿಕೆ… ಮುಂಗಾರು ಬಿತ್ತನೆಗೆ ಮುಂದಾದ ಅನ್ನದಾತರು
ಕಳೆದ ಒಂದುವಾರದ ಹಿಂದೆ ಸುರಿದ ಪೀರ್ವ ಮುಂಗಾರಿನಿಂದ ರೈತ ಸಮುದಾಯ ಫುಲ್ ಖುಷ್ ಆಗಿದ್ದು, ಮಳೆ ಬೀಡುವಿನ ಹಿನ್ನೆಲೆಯಲ್ಲಿ ರೈತರು ಈಗ ತಮ್ಮ ತಮ್ಮ ಕೃಷಿ ಭೂಮಿಯಲ್ಲಿ ಬೂಸಿಯಾಗಿದ್ದಾರೆ.
ಮುಂಗಾರು ಬಿತ್ತನೆಗೆ ಕೆಲವರು ಪೂರ್ವ ತಯಾರಿ ಮಾಡಿಕೊಳ್ಳುತ್ತಿದ್ದು, ಇನ್ನೂ ಕೆಲವು ರೈತರು ಈಗ ಮಮಗಾರು ಬಿತ್ತನೆಗೆ ನಡೆಸುತ್ತಿದ್ದಾರೆ.
ಹೌದು ಧಾರವಾಡ ಜಿಲ್ಲೆಯಾದ್ಯಂತ ಉತ್ತಮ ಪೂರ್ವ ಮುಂಗಾರು ಮಳೆಯಾಗಿದ್ದು, ಇಜ ಹಿನ್ನೆಲೆಯಲ್ಲಿ ಈಗ ಜಿಲ್ಲೆಯಲ್ಲಿನ ಅನ್ನದಾತರು ಮುಂಗಾರು ಪೂರ್ವ ತಯಾರಿಯಲ್ಲಿ ತೊಡಗಿಸಿಕೊಂಡಿದ್ದಾರೆ. ಧಾರವಾಡ ತಾಲೂಕು, ಹುಬ್ಬಳ್ಳಿ, ಕಲಘಟಗಿ, ನವಲಗುಂದ ಹಾಗೂ ಕುಂದಗೋಳ, ಅಳ್ನಾವಾರ, ಅಣ್ಣಿಗೇರಿ ತಾಲೂಕುಗಳಲ್ಲಿ ರೈತರು ಮುಂಗಾರು ಬಿತ್ತನೆಗೆ ಬರದಿಂದ ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ.
ಕೆಲವು ರೈತರು ಹದ ಮಾಡಿಕೊಂಡ ಭೂಮಿಯಲ್ಲಿ ಈಗ ಬಿತ್ತನೆ ಕಾರ್ಯ ಕೈಗೊಂಡಿದ್ದಾರೆ. ಒಟ್ಟಿನಲ್ಲಿ ಧಾರವಾಡ ಜಿಲ್ಲೆಯಾದ್ಯಂತ ಸುರಿದ ಪೂರ್ವ ಮುಂಗಾರು ರೈತರಿಗೆ ಉತ್ತಮ ಮುಂಗಾರು ಬೆಳೆಯ ಭರವಸೆ ನೀಡಿದ್ದು, ಈಗ ಜಿಲ್ಲೆಯ ರೈತರು ಮುಂಗಾರು ಹಂಗಾಮಿನಲ್ಲಿ ಬ್ಯೂಸಿಯಾಗಿದ್ದಾರೆ.

Spread the love

About Laxminews 24x7

Check Also

ಗಣೇಶ ಚತುರ್ಥಿ ಹಾಗೂ ಸರಣಿ ರಜೆ ಹಿನ್ನೆಲೆ: ವಾಯುವ್ಯ ಸಾರಿಗೆಯಿಂದ ಹೆಚ್ಚುವರಿ ವಿಶೇಷ ಬಸ್​​ ಸೌಲಭ್ಯ

Spread the love ಹುಬ್ಬಳ್ಳಿ (ಧಾರವಾಡ): ಗಣೇಶ ಚತುರ್ಥಿ ಹಾಗೂ ಸರಣಿ ರಜೆ ಹಿನ್ನೆಲೆ ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಆಗಸ್ಟ್ 22 …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ