Breaking News

ದಲಿತ ಸಿಎಂ ವಿಚಾರ ಸದ್ಯಕ್ಕಿಲ್ಲ ಹೊಸದಾಗಿ ಬಂದ ಶಾಸಕರಿಗೆ ಸಚಿವ‌ ಸ್ಥಾನ ನೀಡಬಾರದು ಎಂಬ ನಿರ್ಧಾರ ಆಗಿದೆ.

Spread the love

ಹೊಸಪೇಟೆ (ಜೂ.18): ಹೊಸದಾಗಿ ಬಂದ ಶಾಸಕರಿಗೆ ಸಚಿವ‌ ಸ್ಥಾನ ನೀಡಬಾರದು ಎಂಬ ನಿರ್ಧಾರ ಆಗಿದೆ. ಆದರೂ, ಈ ಬಗ್ಗೆ ಮುಖ್ಯಮಂತ್ರಿ, ಹೈಕಮಾಂಡ್‌ ನಿರ್ಧಾರವೇ ಅಂತಿಮ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದರು. ನಗರದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಸಚಿವ ಸಂಪುಟ ವಿಸ್ತರಣೆ ಕುರಿತ ಪ್ರಶ್ನೆಗೆ ಪ್ರತಿಕ್ರಿಯಿಸಿ, ಹೊಸದಾಗಿ ಬಂದ ಶಾಸಕರಿಗೆ ಸಚಿವ‌ ಸ್ಥಾನ ನೀಡಬಾರದು ಎಂಬ ನಿರ್ಧಾರ ಆಗಿದೆ.

ಆದರೂ, ಈ ಬಗ್ಗೆ ಸಿಎಂ, ಹೈಕಮಾಂಡ್ ನವರು ನಿರ್ಣಯ ಕೈಗೊಳ್ಳುತ್ತಾರೆ ಎಂದರು. ಸಿಎಂ ಬದಲಾವಣೆ ಕುರಿತ ಪ್ರಶ್ನೆಗೆ, ನಮ್ಮದೇ ಸಚಿವ ಸ್ಥಾನ ಉಳಿಸಿಕೊಳ್ಳೋದು ಕಷ್ಟ ಆಗಿದೆ. ಇನ್ನು ಸಿಎಂ ಬದಲಾವಣೆಯಾಗ್ತಾರೆ ಅಂದರೆ ನಾವೇನು ಹೇಳೋದು, ನೀವು ಬೆಂಗಳೂರಿಗೆ ಬಂದರೆ ನಾನೇ ಸಿಎಂ ಅವರನ್ನು ಭೇಟಿ ಮಾಡಿಸ್ತೀನಿ, ಅವರನ್ನೇ ಕೇಳಿ. ಅಷ್ಟಕ್ಕೂ, ಸಿಎಂ, ಕೆಪಿಸಿಸಿ ಅಧ್ಯಕ್ಷರ ಸ್ಥಾನ ಬದಲಾವಣೆ ಮುಗಿದ ಅಧ್ಯಾಯ ಎಂದರು.

ದಲಿತ ಸಿಎಂ ವಿಚಾರ ಸದ್ಯಕ್ಕಿಲ್ಲ: ದಲಿತ ಮುಖ್ಯಮಂತ್ರಿ ಪ್ರಸ್ತಾವನೆಗೆ ಫುಲ್‌ಸ್ಟಾಪ್ ಹಾಕಲಾಗಿದ್ದು, ಸದ್ಯ ಆ ವಿಷಯದ ಕುರಿತು ಚರ್ಚೆ ಇಲ್ಲ ಎಂದು ಸಚಿವ ಸತೀಶ್‌ ಜಾರಕಿಹೊಳಿ ಸ್ಪಷ್ಟನೆ ನೀಡಿದ್ದಾರೆ. ನಗರದಲ್ಲಿ ಸುದ್ದಿಗರೊಂದಿಗೆ ಮಾತನಾಡಿ, ದಲಿತ ಸಿಎಂ ವಿಚಾರಕ್ಕೆ ಕಳೆದ 1 ವರ್ಷದಿಂದ ಫುಲ್‌ಸ್ಟಾಪ್ ಬಿದ್ದಿದ್ದು, ಈ ಅವಧಿಯಲ್ಲಿ ಆ ಬಗ್ಗೆ ಚರ್ಚೆ ಇಲ್ಲ. ಮುಂದಿನ ಅವಧಿಯಲ್ಲಿ ನೋಡೋಣ ಎನ್ನುವ ಮೂಲಕ ಮುಂದಿನ ವಿಧಾಸಸಭೆ ಚುನಾವಣೆ ಬಳಿಕ ಮತ್ತೇ ದಲಿತ ಸಿಎಂ ಕೂಗು ಎತ್ತುವ ಕುರಿತು ಮುನ್ಸೂಚನೆ ನೀಡಿದರು. ಸೆಪ್ಟೆಂಬರ್‌ನಲ್ಲಿ ಸಿಎಂ ಬದಲಾವಣೆ ಆಗಲಿದೆ ಎಂಬ ಎಚ್.ವಿಶ್ವನಾಥ್ ಹೇಳಿಕೆಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಅವರು, ಅವರ ಪಕ್ಷ ಬೇರೆ ನಮ್ಮ ಪಕ್ಷ ಬೇರೆ ಅವರ ಹೇಳಿಕೆಗೆ ನ್ಯಾನೇಕೆ ಉತ್ತರಿಸಬೇಕು? ಎಂದರು.


Spread the love

About Laxminews 24x7

Check Also

ಅಥಣಿ ನಗರದಲ್ಲಿ ಇಂದು ರೋಟರಿ ಸಂಸ್ಥೆ ಅಧೀನದಲ್ಲಿ ಶ್ರೀ ಜ್ಯೋತಿಬಾ ದೇವಸ್ಥಾನ ಆವರಣದಲ್ಲಿ ನೂತನವಾಗಿ ನಿರ್ಮಿಸಿದ ರೋಟರಿ ಉದ್ಯಾನವನ

Spread the loveಅಥಣಿ ನಗರದಲ್ಲಿ ಇಂದು ರೋಟರಿ ಸಂಸ್ಥೆ ಅಧೀನದಲ್ಲಿ ಶ್ರೀ ಜ್ಯೋತಿಬಾ ದೇವಸ್ಥಾನ ಆವರಣದಲ್ಲಿ ನೂತನವಾಗಿ ನಿರ್ಮಿಸಿದ ರೋಟರಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ