Breaking News

ಬಸ್ಸಿನ ಕಿಟಕಿ ಸೀಟಿಗಾಗಿ ಕಿತ್ತಾಟ…

Spread the love

ಬೆಳಗಾವಿ: ಬಸ್ಸಿನ ಕಿಟಕಿ ಸೀಟಿಗಾಗಿ ಕಿತ್ತಾಟ…
ಕಾಲೇಜು ವಿದ್ಯಾರ್ಥಿಗೆ ಹರಿತವಾದ ಆಯುಧದಿಂದ ಇರಿದು ಪರಾರಿಯಾದ ಅಪರಿಚಿತ ಯುವಕರ ಗುಂಪು
ಬಸ್’ನ ಕಿಟಕಿ ಸೀಟಗಾಗಿ ಕಿತ್ತಾಡಿಕೊಂಡು ಅಪರಿಚಿತ ಯುವಕರು ಕಾಲೇಜು ವಿದ್ಯಾರ್ಥಿಗೆ ಹರಿತವಾದ ಆಯುಧದಿಂದ ಇರಿದ ಘಟನೆ ಬೆಳಗಾವಿ ಕೇಂದ್ರ ಬಸ್ ನಿಲ್ದಾಣದಲ್ಲಿ ನಡೆದಿದೆ.
ಬೆಳಗಾವಿಯ ಕೇಂದ್ರ ಬಸ್ ನಿಲ್ದಾಣದಲ್ಲಿ ಬಸ್’ನ ಕಿಟಕಿ ಸೀಟಗಾಗಿ ಕಾಲೇಜು ವಿದ್ಯಾರ್ಥಿಯೊಂದಿಗೆ ಅಪರಿಚಿತ ಯುವಕರು ಜಗಳಕ್ಕಿಳಿದು, ಜಗಳ ವಿಕೋಪಕ್ಕೆ ಹೋಗಿ ವಿದ್ಯಾರ್ಥಿಯ ಎದೆಗೆ ಹರಿತವಾದ ಆಯುಧದಿಂದ ಇರಿದು ಪರಾರಿಯಾಗಿದ್ದಾರೆ. ಗಾಯಗೊಂಡ ವಿದ್ಯಾರ್ಥಿ ಬೆಳಗಾವಿ ತಾಲೂಕಿನ ಪಂತ ಬಾಳೇಕುಂದ್ರಿ ಗ್ರಾಮದ ಮಾಜ್ ಸನದಿ (19) ಗೆ ಬೆಳಗಾವಿ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಜಿಲ್ಲಾಸ್ಪತ್ರೆಗೆ ಡಿಸಿಪಿ ರೋಹನ್ ಜಗದೀಶ್ ಭೇಟಿ ನೀಡಿ ಪರಿಶೀಲನೆಯನ್ನು ನಡೆಸಿದ್ದಾರೆ. ಪಂತ ಬಾಳೇಕುಂದ್ರಿಯಿಂದ ಬೆಳಗಾವಿ ಕೇಂದ್ರ ಬಸ್ ನಿಲ್ದಾಣಕ್ಕೆ ಬರುವ ವರೆಗೂ ಜಗಳವಾಡಿ, ಅಪರಿಚಿತರು ಹರಿತವಾದ ಆಯುಧದಿಂದ ಇರಿದಿದ್ದಾರೆ. ಈಗಾಗಲೇ ಬಸ್ ಪತ್ತೆಯಾಗಿದ್ದು, ಅಪರಿಚಿತರನ್ನು ಪತ್ತೆ ಮಾಡಲು 3 ವಿಶೇಷ ತಂಡಗಳನ್ನು ರಚಿಸಲಾಗಿದೆ ಎಂದು ಇನ್ ನ್ಯೂಸ್’ಗೆ ಮಾಹಿತಿಯನ್ನು ನೀಡಿದರು.
ಕಾಲೇಜಿಗೆ ಬರುವ ವಿದ್ಯಾರ್ಥಿಗಳು ಪಠ್ಯಪುಸ್ತಕಗಳ ಬದಲೂ ಹರಿತ ಆಯುಧವನ್ನು ತರುತ್ತಿದ್ದಾರೆಂದರೇ, ದಿಗ್ಭ್ರಮೆಗೊಳಿಸುವ ವಿಷಯವಾಗಿದೆ. ಗಲಾಟೆಯಲ್ಲಿ ಗಾಯಗೊಂಡ ವಿದ್ಯಾರ್ಥಿಗೆ ಪರಿಸ್ಥಿತಿ ಗಂಭೀರವಾಗಿದೆ ಎಂದು ಇಮ್ರಾನ್ ಪೀರಜಾದೆ ಹೇಳಿದರು.
ಬೆಳಗಾವಿ ಮಾರ್ಕೆಟ್ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Spread the love

About Laxminews 24x7

Check Also

ಪ್ರವೀಣ್ ಭಾಯಿ ತೊಗಾಡಿಯಾ ಕಾರಿಗೆ ಬೆಂಗಾವಲು ವಾಹನ ಡಿಕ್ಕಿ…

Spread the love ಪ್ರವೀಣ್ ಭಾಯಿ ತೊಗಾಡಿಯಾ ಕಾರಿಗೆ ಬೆಂಗಾವಲು ವಾಹನ ಡಿಕ್ಕಿ… ಅಂತರರಾಷ್ಟ್ರೀಯ ಹಿಂದೂ ಪರಿಷತ್ ಸಂಸ್ಥಾಪಕ ಅಧ್ಯಕ್ಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ