ಬಾಗಲಕೋಟೆ ನೂತನ ಡಿಸಿಯಾಗಿ ಸಂಗಪ್ಪ ಎಂ. ಅಧಿಕಾರ ಸ್ವೀಕಾರ
ಬಾಗಲಕೋಟೆ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಸಂಗಪ್ಪ ಎಂ. ಅವರು ಬುಧವಾರ ಅಧಿಕಾರ ಸ್ವೀಕರಿಸಿದರು. ನಿಕಟಪೂರ್ವ ಜಿಲ್ಲಾಧಿಕಾರಿ ಜಾನಕಿ ಕೆ.ಎಂ ಅವರು ನೂತನ ಜಿಲ್ಲಾಧಿಕಾರಿಗೆ ಪುಷ್ಪ ನೀಡಿ ಸ್ವಾಗತಿಸುವ ಮೂಲಕ ಅಧಿಕಾರ ಹಸ್ತಾಂತರಿಸಿದರು.
ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಅಶೋಕ ತೇಲಿ, ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಶಿಧರ ಕುರೇರ, ಉಪವಿಭಾಗ ಅಧಿಕಾರಿಗಳಾದ ಸಂತೋಷ ಜಗಲಾಸರ, ಶ್ವೇತಾ ಬೀಡಿಕರ ಸೇರಿದಂತೆ ಆಯಾ ತಾಲೂಕಿನ ತಹಸೀಲ್ದಾರರು ಹಾಗೂ ಜಿಲ್ಲಾಮಟ್ಟದ ವಿವಿಧ ಇಲಾಖೆಯ ಅಧಿಕಾರಿಗಳು ಪುಷ್ಪ ಅರ್ಪಿಸಿ ನೂತನ ಜಿಲ್ಲಾಧಿಕಾರಿ ಸ್ವಾಗತಿಸಿದರು.
ನೂತನ ಜಿಲ್ಲಾಧಿಕಾರಿಗಳು ಬಾಗಲಕೋಟೆ ಜಿಲ್ಲೆ ಬೀಳಗಿ ತಾಲೂಕಿನವರಾಗಿದ್ದು, ಪ್ರಾಥಮಿಕ ಶಿಕ್ಷಣವನ್ನು ಬೀಳಗಿ, ಮುಧೋಳ, ಬಾಗಲಕೋಟೆಯಲ್ಲಿ ಮುಗಿಸಿದ್ದಾರೆ. ಮಾಧ್ಯಮಿಕ ಹಾಗೂ ಕಾಲೇಜು ಶಿಕ್ಷಣವನ್ನು ಬಾಗಲಕೋಟೆ ಬಸವೇಶ್ವರ ಮಹಾವಿದ್ಯಾಲಯದಲ್ಲಿ ಪಡೆದು ಎಂಎಸ್ಸಿ ಮೈಕ್ರೋ ಬಯಾಲಜಿ ಬೆಂಗಳೂರಿನ ಜಿಕೆವಿಕೆ ಮಹಾವಿದ್ಯಾಲಯದಲ್ಲಿ ಮುಗಿಸಿದ್ದಾರೆ.