Breaking News

ಅಶೋಕ ಚಂದರಗಿ ಅವರಿಗೆ ಚಂಪಾ ಸಿರಿಗನ್ನಡ ಪ್ರಶಸ್ತಿ”

Spread the love

ಬೆಳಗಾವಿಯ ಅಶೋಕ ಚಂದರಗಿ ಅವರಿಗೆ ಚಂಪಾ ಸಿರಿಗನ್ನಡ ಪ್ರಶಸ್ತಿ”
ಬೆಂಗಳೂರಿನ ಕರ್ನಾಟಕ ಸ್ವಾಭಿಮಾನಿ ವೇದಿಕೆಯ ವತಿಯಿಂದ ದಿ.ಚಂದ್ರಶೇಖರ ಪಾಟೀಲ ಅವರ ಸ್ಮರಣಾರ್ಥ ಪ್ರತಿವರ್ಷ ನೀಡುವ ” ಚಂಪಾ ಸಿರಿಗನ್ನಡ ಪ್ರಶಸ್ತಿ”ಯನ್ನು ಬೆಳಗಾವಿಯ ಅಶೋಕ ಚಂದರಗಿ ಅವರಿಗೆ ನೀಡಿ ಸನ್ಮಾನಿಸಲಾಯಿತು.
ಇಂದು ಬುಧವಾರ ಜೂನ್ 18 ರಂದು ಬೆಂಗಳೂರಿನ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದ ನಯನ ಸಭಾಂಗಣದಲ್ಲಿ ಕರ್ನಾಟಕ ಸ್ವಾಭಿಮಾನಿ ವೇದಿಕೆಯ ವತಿಯಿಂದ ದಿ.ಚಂದ್ರಶೇಖರ ಪಾಟೀಲ ಅವರ ಸ್ಮರಣಾರ್ಥ ಖ್ಯಾತ ಸಾಹಿತಿ ಡಾ.ಬರಗೂರು ರಾಮಚಂದ್ರಪ್ಪ ಅವರಿಂದ ಅಶೋಕ ಚಂದರಗಿ ಅವರಿಗೆ ” ಚಂಪಾ ಸಿರಿಗನ್ನಡ ಪ್ರಶಸ್ತಿ”ಯನ್ನು ನೀಡಿ ಸನ್ಮಾನಿಸಲಾಯಿತು.
ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪುರುಷೋತ್ತಮ ಬಿಳಿಮಲೆ ಅವರು ಅಧ್ಯಕ್ಷತೆ ವಹಿಸಿದ್ದರು.
ಚಂಪಾ ಅವರು ಪುತ್ರಿ ಮೀನಾ ಪಾಟೀಲ,ವೇದಿಕೆಯ ಅಧ್ಯಕ್ಷ ಶಂಕರ ಹೂಗಾರ,ಕನ್ನಡ ಜನಶಕ್ತಿ ಕೇಂದ್ರದ ಅಧ್ಯಕ್ಷ ಸಿ.ಕೆ.ರಾಮೇಗೌಡ ಸೇರಿದಂತೆ ಇನ್ನುಳಿದ ಗಣ್ಯರು ಈ ವೇಳೆ ಉಪಸ್ಥಿತರಿದ್ಧರು.

Spread the love

About Laxminews 24x7

Check Also

ಮಣ್ಣಿನ ಆರೋಗ್ಯ ಮತ್ತುನೀರಿನ ಸಮಗ್ರ ನಿರ್ವಹಣೆ ಯೋಜನೆಗೆ ಸಿಎಂಸಿದ್ದರಾಮಯ್ಯ ಚಾಲನೆ

Spread the loveಬೆಳಗಾವಿ: ನಮ್ಮದು ರೈತ ಪರ ಸರ್ಕಾರ. ಕಬ್ಬು ಬೆಳೆಯುವ ಪ್ರದೇಶದಲ್ಲಿ ಮಣ್ಣಿನ ಆರೋಗ್ಯ ಮತ್ತು ನೀರಿನ ಸಮಗ್ರ ನಿರ್ವಹಣೆಗೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ