ಬೆಂಗಳೂರು ಕಾಲ್ತುಳಿತ ಖಂಡಿಸಿ ಬನಹಟ್ಟಿಯಲ್ಲಿ ಬಿಜೆಪಿ ಪ್ರತಿಭಟನೆ
ಆರ್.ಸಿ.ಬಿ ವಿಜಯೋತ್ಸವದ ವೇಳೆ ನಡೆದ ಕಾಲ್ತುಳಿತ ಪ್ರಕರಣವನ್ನು ಖಂಡಿಸಿ ಬಾಗಲಕೋಟೆ ಜಿಲ್ಲೆ ಬನಹಟ್ಟಿ ನಗರದಲ್ಲಿ ಬಿಜೆಪಿಯ ವತಿಯಿಂದ ಪ್ರತಿಭಟನೆ ನಡೆಸಲಾಯಿತು.
ಬಾಗಲಕೋಟೆ ಜಿಲ್ಲೆ ಬನಹಟ್ಟಿ ನಗರದಲ್ಲಿ ತೇರದಾಳ ಕ್ಷೇತ್ರದ ಬಿಜೆಪಿ ಘಟಕದಿಂದ ವತಿಯಿಂದ ಪ್ರತಿಭಟನೆ ನಡೆಸಿ, ಆರ್.ಸಿ.ಬಿ ವಿಜಯೋತ್ಸವದ ವೇಳೆ ನಡೆದ ಕಾಲ್ತುಳಿತ ಪ್ರಕರಣವನ್ನು ಖಂಡಿಸಲಾಯಿತು.
ಬನಹಟ್ಟಿ ನಗರದಲ್ಲಿನ ಜಮಖಂಡಿ -ಮಿರಜ್ ರಸ್ತೆ ತಡೆದು ಬನಹಟ್ಟಿ ಬಿಜೆಪಿ ನಗರ ಘಟಕದ ಅಧ್ಯಕ್ಷ ಶ್ರೀಶೈಲ್ ಬೀಳಗಿ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು. ಕಾಲ್ತುಳಿತಕ್ಕೆ ಕಾಂಗ್ರೆಸ್ ಸರ್ಕಾರದ ವೈಫಲ್ಯತೆಯೇ ಕಾರಣ ಎಂದು ಬಿಜೆಪಿ ಕಾರ್ಯಕರ್ತರು ಘೋಷಣೆಗಳನ್ನು ಕೂಗಿ ಆಕ್ರೋಶ ಹೊರ ಹಾಕಿದರು.
Laxmi News 24×7