Breaking News

ಹೊಲಕ್ಕೆ ದಾರಿ ಬಿಡಿಸಿಕೊಡಲು ಆಗ್ರಹಿಸಿ ರೈತರಿಂದ ರಸ್ತೆ ಬಂದ್ ಮಾಡಿ ಪ್ರತಿಭಟನೆ

Spread the love

ಹೊಲಕ್ಕೆ ದಾರಿ ಬಿಡಿಸಿಕೊಡಲು ಆಗ್ರಹಿಸಿ ರೈತರಿಂದ ರಸ್ತೆ ಬಂದ್ ಮಾಡಿ ಪ್ರತಿಭಟನೆ
 ರೈತರು ತಮ್ಮ ಜಮೀನಿಗಳಿಗೆ ಹೋಗಲು ದಾರಿ ಬಿಡಿಸಿಕೊಡಲು ಆಗ್ರಹಿಸಿ ವಿಜಯಪುರ ಜಿಲ್ಲೆಯ ದೇವರ ಹಿಪ್ಪರಗಿ ತಾಲ್ಲೂಕಿನ ಯಾಳವಾರ ಹಾಗೂ ನಾಗರಾಳ ಡೋಣ ಗ್ರಾಮದ ರೈತರು ದೇವರಹಿಪ್ಪರಗಿ ತಾಳಿಕೋಟಿ ಮುಖ್ಯ ರಸ್ತೆ ಬಂದು ಮಾಡಿ ಪ್ರತಿಭಟನೆ ನಡೆಸಿದರು.
ದೇವರ ಹಿಪ್ಪರಗಿ ತಾಲೂಕಿನ ಯಾಳವಾರ ಹಾಗೂ ನಾಗರಾಳ ಡೋಣ ಗ್ರಾಮದ ರೈತರು ತಮ್ಮ ಜಮೀನಿಗಳಿಗೆ ಈಗ ಕೆಲ ಬಲಾಡ್ಯರು ದಾರಿಯನ್ನು ಬಿಡದೆ ಅಡ್ಡಪಡಿಸುತ್ತಿದ್ದಾರೆ ಎಂದು ತಹಶೀಲ್ದಾರ್ ಹಾಗೂ ಸಿಪಿಐ ಕಚೇರಿಗೆ ಮನವಿ ಪತ್ರ ಸಲ್ಲಿಸಲಾಗಿದೆ. ಹಲವಾರು ರೈತರು ಮಾತನಾಡಿ ಈಗಷ್ಟೇ ಮುಂಗಾರು ಕೃಷಿ ಚಟುವಟಿಕೆಗಳು ಪ್ರಾರಂಭ ವಾಗಿದೆ.ಸಂಬಂಧಪಟ್ಟ ಅಧಿಕಾರಿಗಳು ತುರ್ತು ಕ್ರಮ ಕೈಗೊಂಡು ರೈತರು ತಮ್ಮ ಹೊಲಗಳಿಗೆ ಹೋಗಲು ದಾರಿ ಬಿಡಿಸಿಕೊಡಬೇಕೆಂದು ಒತ್ತಾಯಿಸಿದರು. ರೈತರು ಹೊಲಗಳಿಗೆ ಹೋಗಲು ಕಾಲುದಾರಿ, ಬಂಡಿದಾರಿಗಳನ್ನು ಸಹ ಬಂದ್‌ ಮಾಡಲಾಗಿದೆ.
ಇದರಿಂದ ಜಮೀನುಗಳು ಇದ್ದು ಸಹ ಇಲ್ಲದಂತಹ ಸ್ಥಿತಿ ನಿರ್ಮಾಣವಾಗಿದೆ.ತಹಶೀಲ್ದಾರ್ ಅವರು ಬರುತ್ತೇನೆ ಎಂದು ಅನಿವಾರ್ಯ ಕಾರಣದಿಂದ ಬಾರದಕ್ಕೆ ದೇವರಹಿಪ್ಪರಗಿ ತಾಳಿಕೋಟೆ ರಸ್ತೆ ಬಂದ್ ಮಾಡಿ ಮುಳ್ಳು ಹಾಕಿ ತಮ್ಮ ಆಕ್ರೋಶ ವ್ಯಕ್ತಪಡಿಸಿದರು.
ಇದೇ ಸಂದರ್ಭದಲ್ಲಿ ಮುಖಂಡರುಗಳಾದ ವಿಜಯಕುಮಾರ ನಾಡಗೌಡ, ಸಂಗನಗೌಡ ತೆಗ್ಗಿನಮನಿ, ಸಂತೋಷ ಮುಸುಗುರಿ, ರಾಮನಗೌಡ ಉಮ್ಮಣ್ಣವರ, ಮಡಿವಾಳಪ್ಪ ಉಮ್ಮಣ್ಣವರ, ಬಸಯ್ಯ ಚರಂತಿಮಠ,ಬಸಯ್ಯ ಹಿರೇಮಠ,ಸೋಮಯ್ಯ ಹಿರೇಮಠ,ದೇವೇಂದ್ರ ಖಾನಾಪುರ, ಬಸನಗೌಡ ಬಿರಾದಾರ,ನಿಂಗನಗೌಡ ಖಾನಾಪುರ, ಭೀಮಣ್ಣ ಉಪ್ಪಾರ, ಬಸನಗೌಡ ದೊಡ್ಡಮನಿ, ರಮೇಶ್ ಗುರುಮಠ ಸೇರಿದಂತೆ ಎರಡು ಗ್ರಾಮದ ರೈತರು ಉಪಸ್ಥಿತರಿದ್ದರು.

Spread the love

About Laxminews 24x7

Check Also

ಜಾಮೀನಿಗಾಗಿ ನಕಲಿ ಆಧಾರ್, ಆರ್‌ಟಿಸಿ ಸಲ್ಲಿಕೆ: ಪತ್ತೆ ಹಚ್ಚಿದ ಕಾರವಾರ ನ್ಯಾಯಾಧೀಶರು

Spread the love ಕಾರವಾರ(ಉತ್ತರ ಕನ್ನಡ): ನಕಲಿ ಆಧಾರ್ ಕಾರ್ಡ್‌ಗಳು ಮತ್ತು ಆರ್‌ಟಿಸಿ (ಕಂದಾಯ ದಾಖಲೆಗಳು) ಬಳಸಿ ನ್ಯಾಯಾಲಯಕ್ಕೆ ವಂಚನೆ ಮಾಡಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ