Breaking News

ಮೂಡಲಗಿ | ಅವರಾದಿ ಸೇತುವೆ ಜಲಾವೃತ: ಸಂಪರ್ಕ ಸ್ಥಗಿತ

Spread the love

ಮೂಡಲಗಿ | ಅವರಾದಿ ಸೇತುವೆ ಜಲಾವೃತ: ಸಂಪರ್ಕ ಸ್ಥಗಿತ
ಮೂಡಲಗಿ: ಪಶ್ಚಿಮಘಟ್ಟ ಹಾಗೂ ಬೆಳಗಾವಿ ಜಿಲ್ಲೆಯಲ್ಲಿ ಬಿಡುವು ಇಲ್ಲದೆ ಮಳೆಯಾಗುತ್ತಿರುವುದರಿಂದ ಘಟಪ್ರಭಾ ನದಿಗೆ ಒಳಹರಿವು ಹೆಚ್ಚಾಗಿದೆ. ತಾಲ್ಲೂಕಿನ ಅವರಾದಿ ಬಳಿಯ ಘಟಪ್ರಭಾ ನದಿಗೆ ಇರುವ ಬ್ರಿಡ್ಜ್‌ ಕಂ ಬ್ಯಾರೆಜ್‌ ಬುಧವಾರ ಮಧ್ಯಾಹ್ನ ಜಲಾವೃತಗೊಂಡು ಹಲವು ಗ್ರಾಮಗಳ ಸಂಪರ್ಕ ಸ್ಥಗಿತಗೊಂಡಿದೆ.
ನದಿಯ ನೀರಿನ ಮಟ್ಟವು ಇನ್ನು ಏರಿಕೆಯಾಗುವ ಸಂಭವವಿದ್ದು ಮೂಡಲಗಿ ಸುಣಧೋಳಿ ಸಂಪರ್ಕ ಇರುವ ಸುಣಧೋಳಿ ಸೇತುವೆ, ವಡೇರಹಟ್ಟಿ ಸೇತುವೆ, ಕಮಲದಿನ್ನಿ ಸೇತುವೆಗಳು ಜಲಾವೃತವಾಗುವ ಸಾಧ್ಯತೆಗಳು ಇವೆ.
ಘಟಪ್ರಭಾ ನದಿಗೆ ಒಳಹರಿವು ಹೆಚ್ಚಾದಾಗ ತಾಲ್ಲೂಕಿನ ನಾಲ್ಕು ಸೇತುವೆಗಳು ಜಲಾವೃತಗೊಂಡು ಸಂಚಾರಕ್ಕೆ ತೊಂದರೆಯಾಗುತ್ತಿರುವುದು ಸಾಮಾನ್ಯವಾಗಿದೆ. ಸೇತುವೆ ಮೇಲೆ ರಭಸದ ನೀರು ಹರಿಯುತ್ತಿದ್ದಾಗಲೂ ಜನರು ಬೈಕ್‌, ಕಾಲ್ನಡಿಗೆಯಲ್ಲಿ ದಾಟುವ ಹುಚ್ಚು ಪ್ರಯತ್ನ ಮಾಡಿ ಅನೇಕ ಸಾವುಗಳು ಈ ಹಿಂದೆ ಇಲ್ಲಿ ಘಟಿಸಿವೆ.
ಬುಧವಾರ ಮಧ್ಯಾಹ್ನ ಅವರಾದಿ ಸೇತುವೆಗೆ ಭೇಟಿ ನೀಡಿದ್ದು ಮುನ್ನೆಚ್ಚರಿಕೆ ಕ್ರಮವನ್ನು ತೆಗೆದುಕೊಳ್ಳಲು ಪೊಲೀಸ್ ಇಲಾಖೆಗೆ ತಿಳಿಸಿದ್ದಾರೆ.

Spread the love

About Laxminews 24x7

Check Also

ನದಿ ತೀರದ ಜನರು ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಸಚಿವ ಸತೀಶ್‌ ಜಾರಕಿಹೊಳಿ ಮನವಿ

Spread the love ಬೆಳಗಾವಿ: ಭಾರತ ಹವಾಮಾನ ಇಲಾಖೆ ಆಗಸ್ಟ್ 19 ಮತ್ತು 20 ರಂದು ಬೆಳಗಾವಿ ಜಿಲ್ಲೆಗೆ ರೆಡ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ