Breaking News

ಮಾದಕ ವಸ್ತು ಮುಕ್ತ ಸಮಾಜ ನಿರ್ಮಿಸಲು ಕೈಜೋಡಿಸಿ; ಶಶಿಧರ ಕುರೇರ್

Spread the love

ಮಾದಕ ವಸ್ತು ಮುಕ್ತ ಸಮಾಜ ನಿರ್ಮಿಸಲು ಕೈಜೋಡಿಸಿ; ಶಶಿಧರ ಕುರೇರ್
ಇಂದು ಇಂಟರ್’ನ್ಯಾಷನಲ್ ಡ್ರಗ್ ಅಬ್ಯೂಸ್ ಡೇ ಹಿನ್ನೆಲೆ ಬಾಗಲಕೋಟೆ ಜಿಲ್ಲೆಯಾದ್ಯಂತ ಪ್ರತಿಜ್ಞಾ ವಿಧಿ ಬೋಧನೆ ಮಾಡಲಾಯಿತು.
ಇಂದು ಬಾಗಲಕೋಟೆ ಜಿಲ್ಲೆಯಾದ್ಯಂತ ವಿಶ್ವ ಮಾದಕ ವಸ್ತು ವಿರೋಧಿ ದಿನದ ಹಿನ್ನೆಲೆ ಜಿಲ್ಲೆಯ ಒಟ್ಟು 4 ಲಕ್ಷ ಶಾಲಾ, ಕಾಲೇಜು ವಿದ್ಯಾರ್ಥಿಗಳಿಗೆ ಪ್ರತಿಜ್ಞಾ ವಿಧಿ ಬೋಧನೆ ಮಾಡಲಾಯಿತು. ಈ ವೇಳೆ 1600 ಪೊಲೀಸ್, ಶಿಕ್ಷಣ ಇಲಾಖೆ, ಅರೋಗ್ಯ ಇಲಾಖೆ ಸಿಬ್ಬಂದಿ ಪ್ರತಿಜ್ಞಾ ವಿಧಿ ಬೋಧನೆ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.
ಈ ವೇಳೆ ಜಿಪಂ ಸಿಇಓ ಶಶಿಧರ ಕುರೇರ ಅವರು ಡ್ರಗ್ ಮುಕ್ತ ಸಮಾಜವನ್ನು ನಿರ್ಮಿಸಲು ಎಲ್ಲರೂ ಕೈಜೋಡಿಸಬೇಕು. ಯಾರಿಗಾದರೂ ಮಾದಕ ವಸ್ತು ಮಾರಾಟದ ಮಾಹಿತಿ ದೊರೆತಲ್ಲಿ ಪೊಲೀಸ್ ಇಲಾಖೆಯ ಗಮನಕ್ಕೆ ತರಬೇಕು. ಯುವಕರು ಮಾದಕ ವಸ್ತುಗಳಿಗೆ ಬಲಿಯಾಗಬಾರದು ಎಂದರು.
ಈ ಸಂದರ್ಭದಲ್ಲಿ ಬಾಗಲಕೋಟೆಯ ಜಿಲ್ಲಾಧಿಕಾರಿಗಳಾದ ಸಂಗಪ್ಪ ಎಂ, ಎಸ್ಪಿ ಅಮರನಾಥ ರೆಡ್ಡಿ ಸೇರಿದಂತೆ ಇನ್ನುಳಿದವರು ಉಪಸ್ಥಿತರಿದ್ಧರು.

Spread the love

About Laxminews 24x7

Check Also

ನಾಲ್ಕು ರಾಜ್ಯಗಳ ಉಪಚುನಾವಣೆ: ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ

Spread the loveಭಾರತೀಯ ಜನತಾ ಪಾರ್ಟಿ (ಬಿಜೆಪಿ) ಗೋವಾ ಸೇರಿದಂತೆ ನಾಲ್ಕು ರಾಜ್ಯಗಳ ಐದು ವಿಧಾನಸಭಾ ಕ್ಷೇತ್ರಗಳಿಗೆ ನಡೆಯಲಿರುವ ಉಪಚುನಾವಣೆಗಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ