Breaking News

ವರ್ಷಾಂತ್ಯಕ್ಕೆ ಭಾರಿ ಬದಲಾವಣೆ ಆಗಲ್ಲ, ಕೆಲ ಸಚಿವರ ಬದಲಾವಣೆಯಾಗಲಿದೆ: ಸಚಿವ ಸತೀಶ್ ಜಾರಕಿಹೊಳಿ

Spread the love

ಬೆಂಗಳೂರು: ”ವರ್ಷಾಂತ್ಯಕ್ಕೆ ಭಾರೀ ಬದಲಾವಣೆ ಆಗುವುದಿಲ್ಲ, ಸಣ್ಣಪುಟ್ಟ ಬದಲಾವಣೆಗಳಾಗಲಿವೆ” ಎಂದು ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದರು.

ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ”ವರ್ಷಾಂತ್ಯಕ್ಕೆ ಕಾಂಗ್ರೆಸ್​​ನಲ್ಲಿ ಭಾರೀ ಬದಲಾವಣೆ ಆಗಲಿದೆ ಎಂಬ ಚರ್ಚೆ ವಿಚಾರವಾಗಿ ಪ್ರತಿಕ್ರಿಯಿಸುತ್ತಾ, ಸಣ್ಣಪುಟ್ಟ ಬದಲಾವಣೆಗಳಾಗಲಿದೆ. ಹಾಗಂತ ಭಾರಿ ಬದಲಾವಣೆ ಯಾವುದೂ ಆಗುವುದಿಲ್ಲ. ಸರ್ಕಾರದ ಮಟ್ಟದಲ್ಲಿ ಯಾವುದೇ ದೊಡ್ಡ ಬದಲಾವಣೆ ಆಗಲ್ಲ. ಕೆಲ ಸಚಿವರ ಬದಲಾವಣೆ ಆಗಲಿದೆ” ಎಂದರು.‌

ಜಲಸಂಪನ್ಮೂಲ ಇಲಾಖೆ ಮೇಲೆ ಶಾಸಕ ರಾಜು ಕಾಗೆ ಆರೋಪ ವಿಚಾರವಾಗಿ ಪ್ರತಿಕ್ರಿಯಿಸಿ, ”ಮೊದಲಿನಿಂದ ನೀರಾವರಿ ಸಮಸ್ಯೆ ಬಗ್ಗೆ ರಾಜು ಕಾಗೆ ಹೇಳ್ತಾನೆ ಇದ್ದಾರೆ. ಇದು ಸಿಎಂ ಗಮನಕ್ಕೆ ಕೂಡ ಬಂದಿದೆ. ಈ ಬಗ್ಗೆ ಸಿಎಂ ಅವರು ಡಿಸಿಎಂ ಕರೆದು ಹೇಳುತ್ತಾರೆ. ಜಲಸಂಪನ್ಮೂಲ ಇಲಾಖೆಯಲ್ಲಿ ಹಣವಿದೆ, ಹಣವಿಲ್ಲ ಅಂತ ಯಾರು ಹೇಳಿದ್ದು? ಬಾಕಿ ಬಿಲ್​ಗಳು ಕೂಡ ಇವೆ. ಮೂರು ವರ್ಷದಷ್ಟು ಬಿಲ್ ಬಾಕಿ ಇದ್ದೇ ಇರುತ್ತವೆ” ಎಂದರು.

”ನಾನು ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಪ್ರಯತ್ನ ನಡೆಸಿಯೇ ಇಲ್ಲ.‌ ಪ್ರಯತ್ನ ನಡೆಸಿದ್ದರೆ ಮುಂದುವರೆಸಬಹುದು. ನಾನು ಎಲ್ಲಿದ್ದೆನೋ, ಅಲ್ಲೇ ಇದ್ದೇನೆ. ನಮ್ಮನ್ನು ಪುಶ್ ಮಾಡೋರು ಇಲ್ವಲ್ಲ” ಎಂದು ಮಾರ್ಮಿಕವಾಗಿ ತಿಳಿಸಿದರು.‌ಬಿಜೆಪಿ ರಾಜ್ಯಾದ್ಯಕ್ಷ ಬದಲಾವಣೆ ನೋಡಿಕೊಂಡು ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಆಗುತ್ತಾ ಅನ್ನೋ‌ ಪ್ರಶ್ನೆಗೆ, ”ಬಿಜೆಪಿ ಫಾರ್ಮುಲಾ ಬೇರೆ, ನಮ್ಮದು ಬೇರೆ. ಅವರ ಐಡಿಯಾಲಜಿ ಬೇರೆ, ನಮ್ಮದು ಬೇರೆ.‌ ಬಿಜೆಪಿಗೂ ನಮ್ಮ ಆಯ್ಕೆಗೂ ಸಂಬಂಧವಿಲ್ಲ” ಎಂದು ಸ್ಪಷ್ಟಪಡಿಸಿದರು.


Spread the love

About Laxminews 24x7

Check Also

ಸಂಧ್ಯಾ ಸುರಕ್ಷಾ ಯೋಜನೆಯಿಂದ ಹಿರಿಯ ನಾಗರಿಕರಿಗೆ ಅನುಕೂಲಗಳು ಏನೇನು?

Spread the love ಬೆಂಗಳೂರು: ವಯಸ್ಸಾದ ವೃದ್ಧರಿಗೆ ಮಕ್ಕಳೇ ಆಸರೆ. ಆದರೂ, ಹಿರಿಯ ಜೀವಗಳಿಗೆ ಹಲವು ಸಮಸ್ಯೆಗಳು ಎದುರಾಗುತ್ತವೆ. ಪ್ರತಿಯೊಂದಕ್ಕೂ ಮಕ್ಕಳನ್ನೇ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ