Breaking News

ಸಿದ್ದರಾಮಯ್ಯನವರು ಆಡಳಿತದಲ್ಲಿ ನಿಯಂತ್ರಣ ಕಳೆದುಕೊಂಡಿಲ್ಲ: ಡಿಸಿಎಂ

Spread the love

ಬೆಂಗಳೂರು: ”ಸಿಎಂ‌ ಸಿದ್ದರಾಮಯ್ಯನವರು ಆಡಳಿತದಲ್ಲಿ ಕಂಟ್ರೋಲ್ ಕಳೆದುಕೊಂಡಿಲ್ಲ. ನಾನು ಅದರ ಬಗ್ಗೆ ಏನೂ ಕೇಳಿಲ್ಲ. ನಮಗೆ ಹೈಕಮಾಂಡ್​ ಇದ್ದು, ಎಲ್ಲವನ್ನೂ ನೋಡಿಕೊಳ್ಳುತ್ತದೆ” ಎಂದು ಉಪ ಮುಖ್ಯಮಂತ್ರಿ ಡಿ.ಕೆ‌.ಶಿವಕುಮಾರ್ ತಿಳಿಸಿದ್ದಾರೆ.

ಸದಾಶಿವನಗರ ನಿವಾಸದ ಬಳಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಿಎಂ ಆಡಳಿತದಲ್ಲಿ ನಿಯಂತ್ರಣ ಕಳೆದುಕೊಳ್ಳುತ್ತಿದ್ದಾರೆ ಎಂಬ ಆರೋಪ ವಿಚಾರವಾಗಿ ಪ್ರತಿಕ್ರಿಯಿಸುತ್ತಾ, “ನಾನು ಎಲ್ಲರ ಜೊತೆ ಮಾತನಾಡುತ್ತೇನೆ. ಏನೂ ಸಮಸ್ಯೆ ಇಲ್ಲ. ಆಡಳಿತದಲ್ಲಿ ಕಂಟ್ರೋಲ್ ಕಳೆದುಕೊಂಡಿಲ್ಲ. ಮಾಧ್ಯಮದವರೇ ಬ್ಲೋ ಅಪ್ ಮಾಡುತ್ತಿದ್ದಾರೆ” ಎಂದರು.

ತುಮಕೂರು ಭೇಟಿ ವಿಚಾರಕ್ಕೆ, ”ಎತ್ತಿನಹೊಳೆ ಯೋಜನೆಯ ಕೆಲಸ ಆಗಬೇಕು. ಇವತ್ತು ಗುತ್ತಿಗೆದಾರರ ಸಭೆ ಕರೆದಿದ್ದೆ. ಈಗ ನಾಳೆ, ನಾಡಿದ್ದು ಆ ಸಭೆ ಮಾಡುತ್ತೇನೆ‌. ಏನು ಸಮಸ್ಯೆ ಇದೆ ಅಂತ ನೋಡೋದಕ್ಕೆ‌ ಹೋಗುತ್ತೇನೆ. ಟೆಕ್ನಿಕಲ್ ಸಮಸ್ಯೆ ಬಗ್ಗೆ ಪರಿಶೀಲಿಸುತ್ತೇನೆ. ಜನರ, ಶಾಸಕರ ಅಭಿಪ್ರಾಯ ಕೇಳುತ್ತೇನೆ. ಕೇಂದ್ರ ಸಚಿವ ವಿ.ಸೋಮಣ್ಣ ಮನವಿ ಮಾಡಿದ್ದು, ಹಾಗಾಗಿ ಸಭೆ ಮುಂದಕ್ಕೆ ಹಾಕಿದ್ದೇವೆ” ಎಂದು ತಿಳಿಸಿದರು.


Spread the love

About Laxminews 24x7

Check Also

ಪ್ರತಿ ಟನ್ ಕಬ್ಬಿಗೆ​​ ಹೆಚ್ಚುವರಿ 50 ರೂ. ಕೊಡಲು ಸಾಧ್ಯವಿಲ್ಲ: ಸಕ್ಕರೆ ಮಿಲ್ಸ್ ಸಂಘಟನೆ ಅಧ್ಯಕ್ಷ

Spread the loveಬೆಂಗಳೂರು: ಪ್ರತಿ ಟನ್ ಕಬ್ಬಿಗೆ 3,200 ರೂ.‌ ಕೊಡಲು ಮಾತ್ರ ಸಾಧ್ಯ. 3,250 ರೂ. ಕೊಡುವುದು ಸಾಧ್ಯವಿಲ್ಲ ಎಂದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ